Advertisement
MIRROR FOCUS

ರಾಜ್ಯದ ಹಲವೆಡೆ ತಂಪೆರೆದ ಮಳೆರಾಯ | ಬಿಸಿಲಿನಿಂದ ಕಂಗೆಟ್ಟ ರೈತರು ಹಾಗೂ ಕಾಫಿ ಬೆಳೆಗಾರರಲ್ಲಿ ಸಂತಸ

Share

ಬಿಸಿಲಿನ ತಾಪ(Temperature) ದಿನದಿಂದ ದಿನಕ್ಕೆ ಏರುತ್ತಿದೆ. ಭೂಮಿ(Earth) ಕಾದ ಕಾವಲಿಯಂತಾಗಿದೆ. ಬಿರು ಬಿಸಿಲಿಗೆ ಜನ ಬಸವಳಿದಿದ್ದಾರೆ. ಪ್ರಾಣಿ ಪಕ್ಷಿಗಳು ನೀರು ಆಹಾರಕ್ಕಾಗಿ ಪರದಾಡುವಂತಾಗಿದೆ. ವರುಣನ ಕೃಪೆಗಾಗಿ ಜನ ಕಾಯುತ್ತಿದ್ದಾರೆ. ಈ ಮಧ್ಯೆ ತೀವ್ರ ಬೇಸಿಗೆಯ ನಡುವೆಯೂ, ಹಲವು ಜಿಲ್ಲೆಗಳಲ್ಲಿ ವರುಣ (Rain) ತಂಪೆರೆದಿದ್ದಾನೆ. ಶಿವಮೊಗ್ಗ (Shivamogga), ಮಡಿಕೇರಿ (Madikeri), ಚಿಕ್ಕಮಗಳೂರು (Chikkamagaluru), ವಿಜಯಪುರ ಸೇರಿದಂತೆ ಕಲಬುರಗಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗಿದೆ.

ಕೊಡಗಿನ ಹಲವೆಡೆ ಹಗುರ ಮಳೆಯಾಗಿದೆ. ಜಿಲ್ಲೆಯ ವಿರಾಜಪೇಟೆಯ ಹಲವಾರು ಗ್ರಾಮೀಣ ಭಾಗಗಳಲ್ಲಿ ಮಳೆಯಾಗಿದ್ದು, ಬಿಸಿಲಿನ ತಾಪಕ್ಕೆ ತತ್ತರಿಸಿದ ಜನಕ್ಕೆ ಮಳೆರಾಯ ತಂಪೆರೆದಿದ್ದಾನೆ. ಕಳೆದ ಒಂದುವಾರದಿಂದ ಕೊಡಗಿನ ಗ್ರಾಮೀಣ ಭಾಗಗಳಲ್ಲಿ ಸಂಜೆಯ ವೇಳೆ ಮಳೆಯಾಗುತ್ತಿದೆ. ಇನ್ನೂ ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆ ಬಿದ್ದಿದ್ದು ಬಿಸಿಲಿನಿಂದ ಬಸವಳಿದ ಜನಕ್ಕೆ, ವರುಣ ಕೊಂಚ ರಿಲ್ಯಾಕ್ಸ್ ಕೊಟ್ಟಿದ್ದಾನೆ. ಚಿಕ್ಕಮಗಳೂರಿನ, ಬಾಳೆಹೊನ್ನೂರು, ಎನ್‍ಆರ್‍ಪುರ, ಆವುತಿ, ಹಂಗರವಳ್ಳಿ, ಕೆರೆಮಕ್ಕಿ, ಬೈಗೂರು ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಮಳೆಯಿಂದ ರೈತರು ಹಾಗೂ ಕಾಫಿ ಬೆಳೆಗಾರರಲ್ಲಿ ಸಂಭ್ರಮ ಮನೆಮಾಡಿದೆ.

ವಿಜಯಪುರ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದ್ದು, ವಿಜಯಪುರ ನಗರ, ತಿಕೋಟ ತಾಲೂಕಿನ ಘೋಣಸಗಿ, ಬಾಬಾನಗರ, ಹುಬನೂರು, ಸೋಮದೇವರಹಟ್ಟಿ, ಬಿಜ್ಜರಗಿ, ಕಳ್ಳಕವಟಗಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಗಾಳಿ ಸಹಿತ ಹಗುರ ಮಳೆಯಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಹಲವಡೆ ಜೋರು ಮಳೆಯಾಗಿದೆ. ಕಲಬುರಗಿ ನಗರ ಸೇರಿ ಜಿಲ್ಲೆಯ ಹಲವಡೆ ಮೋಡ ಕವಿದ ವಾತಾವರಣವಿದ್ದು, ರಾತ್ರಿ ವೇಳೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

7 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

7 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

7 hours ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

8 hours ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

20 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

1 day ago