ಟಿಬೆಟ್ನ ಮೌಂಟ್ ಎವರೆಸ್ಟ್ನ ಪೂರ್ವ ಇಳಿಜಾರು ಪ್ರದೇಶದಲ್ಲಿ ನಡೆದ ಭಾರೀ ಹಿಮಪಾತದ ಹಿನ್ನೆಲೆಯಲ್ಲಿ 4 900 ಮೀಟರ್ಗಿಂತ ಹೆಚ್ಚಿನ ಎತ್ತರದ ಶಿಬಿರಗಳಲ್ಲಿ ಸುಮಾರು 1 ಸಾವಿರ ಮಂದಿ ಸಿಲುಕಿದ್ದಾರೆ. ಹಿಮಪಾತದಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಆರಂಭಗೊಂಡಿದ್ದು, ಅಂದಾಜು 350 ಜನರನ್ನು ರಕ್ಷಿಸಿ ಕುಡಾಂಗ್ ಪಟ್ಟಣದತ್ತ ಸ್ಥಳಾಂತರಿಸಲಾಗಿದೆ ಎಂದು ಹೇಳಲಾಗಿದೆ. ಹಿಮಪಾತದ ಪರಿಣಾಮವಾಗಿ ಕೆಲವು ಡೇರೆಗಳು ಕುಸಿದುಬಿದ್ದಿದೆ. ಪ್ರವೇಶ ಮಾರ್ಗಗಳು ಹಿಮದಿಂದ ನಿರ್ಬಂಧಿತವಾಗಿರುವುದರಿಂದ, ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಮಾರ್ಗ ತೆರವು ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ನೇಪಾಳದಲ್ಲಿ ಭೀಕರ ಪ್ರವಾಹ ಸಂಭವಿಸಿದ್ದು, ಚೈನಾದಲ್ಲಿ ಚಂಡಮಾರುತದ ಪರಿಸ್ಥಿತಿಯಿಂದಾಗಿ ಎವರೆಸ್ಟ್ ಪ್ರದೇಶಕ್ಕೆ ಪ್ರವೇಶವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…