ರಾಷ್ಟ್ರೀಯ ಹೆದ್ದಾರಿ ಆಗುಂಬೆ ಘಾಟಿಯಲ್ಲಿ ನಿರಂತರ ಮಳೆ ಮತ್ತು ಭಾರಿ ವಾಹನಗಳ ಓಡಾಟದಿಂದ ಅಲ್ಲಲ್ಲಿ ರಸ್ತೆ ಪಕ್ಕ ಭೂಕುಸಿತ ಆಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ. ಉಡುಪಿಯಿಂದ ತೀರ್ಥಹಳ್ಳಿಗೆ ಸಂಚರಿಸುವ ಭಾರಿ ವಾಹನಗಳು ಬದಲಿ ಮಾರ್ಗವಾಗಿ ಉಡುಪಿ-ಕುಂದಾಪುರ-ಸಿದ್ಧಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel