ಸುದ್ದಿಗಳು

ಬಿಪಿನ್​ ರಾವತ್ ಅವರಿದ್ದ ಸೇನಾ ಹೆಲಿಕಾಪ್ಟರ್​ ಏನಾಗಿತ್ತು ? | ಪ್ರತ್ಯಕ್ಷದರ್ಶಿ ಹೇಳಿದ್ದು ಹೀಗೆ…..|

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತೀಯ ಸೇನಾ‌ ಪಡೆಗಳ ಮುಖ್ಯಸ್ಥ ಬಿಪಿನ್‌ ರಾವತ್‌ ಹಾಗೂ ಹಿರಿಯ ಅಧಿಕಾರಿಗಳನ್ನೊಳಗೊಂಡಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಕುನೂರು ಬಳಿ ಪತನವಾಗಿತ್ತು.ಈ ಘಟನೆಯನ್ನು ಪ್ರತ್ಯಕ್ಷದರ್ಶಿಗಳು ಹೀಗೆ ವಿವರಿಸುತ್ತಾರೆ……

Advertisement
Advertisement

ಮಧ್ಯಾಹ್ನ ಸುಮಾರು 12 ರ ಹೊತ್ತಿಗೆ ದುರ್ಘಟನೆ ನಡೆದಿತ್ತು. ಒಂದು ಭಯಾನಕ ಶಬ್ದ ಕೇಳಿತು. ಅದು ತುಂಬ ಹತ್ತಿರದಲ್ಲೇ ಕೇಳಿಸಿತು. ಹೀಗಾಗಿ ಕುತೂಹಲ ಮತ್ತು ಭಯದಿಂದ ಹೊರಬಂದು ನೋಡಿದೆ. ಆಗ ಹೆಲಿಕಾಪ್ಟರ್​ವೊಂದು ಮರಕ್ಕೆ ಅಪ್ಪಳಿಸಿತ್ತು. ಅಲ್ಲಿಂದ ಬೆಂಕಿಯ ಉಂಡೆ ಏಳುತ್ತಿತ್ತು. ನೋಡುತ್ತಿದ್ದಂತೆ ಮತ್ತೆ ಆ ಹೆಲಿಕಾಪ್ಟರ್ ಮರಕ್ಕೆ ಅಪ್ಪಳಿಸಿತು. ಅಷ್ಟರಲ್ಲಿ ಮೂವರು ಹೆಲಿಕಾಪ್ಟರ್​ನಿಂದ ಕೆಳಗೆ ಬಿದ್ದರು. ಅದನ್ನು ನೋಡಿ ನಾನು ಸುತ್ತಲಿನ ಜನರನ್ನು ಕೂಗಿ ಕರೆದೆ. ಬಳಿಕ ಅಗ್ನಿಶಾಮಕ ದಳ, ತುರ್ತು ಸೇವಾ ಘಟಕಗಳಿಗೆ ಕರೆ ಮಾಡಲಾಯಿತು ಎಂದು ಪ್ರತ್ಯಕ್ಷದರ್ಶಿ ಕೃಷ್ಣಸ್ವಾಮಿ ಮಾಧ್ಯಮಗಳಿಗೆ ವಿವರಿಸಿದ್ದಾರೆ.

ಇನ್ನೊಬ್ಬರು ಪ್ರತ್ಯಕ್ಷದರ್ಶಿ ಮಂಜಪ್ಪ ಅವರು ಮಾಧ್ಯಮಗಳಿಗೆ ತಿಳಿಸಿದಂತೆ,  ಕುನೂರಿನ ಕಟ್ಟೇರಿ ಹಿಲ್ಸ್‌ನಲ್ಲಿ ಈ ಘಟನೆ ನಡೆದಿದೆ. ಇದು ಊಟಿಯಿಂದ 25 ಕಿ.ಮೀ ದೂರದಲ್ಲಿದೆ. ಬೆಳಗ್ಗೆ 11.20ಕ್ಕೆ ಘಟನೆ ಸಂಭವಿಸಿದೆ. ಚಳಿಗಾಲ ಆರಂಭವಾಗಿರುವುದರಿಂದ ಮಂಜು ಕವಿದಿತ್ತು ಎಂದು ಹೇಳುತ್ತಾರೆ. ಹೀಗಾಗಿ ಸ್ಪಷ್ಟವಾಗಿ ಕಾಣುತ್ತಿರಲಿಲ್ಲ, ಸದ್ದು ಕೇಳಿತು ಎನ್ನುತ್ತಾರೆ.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2025ರ ನಾಗರಪಂಚಮಿಯಲ್ಲಿ ಈ ರಾಶಿಗಳಿಗೆ ಅದೃಷ್ಟ! :ನಾಗದೇವರ ಕೃಪೆಗಾಗಿ ಹೀಗೆ ಮಾಡಿ…

ನಾಗರಪಂಚಮಿ, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುವ ಪವಿತ್ರ ಹಬ್ಬವಾಗಿದೆ.…

51 minutes ago

ಬದುಕು ಪುರಾಣ | ಯಕ್ಷಪ್ರಶ್ನೆಯೊಳಗೆ ಧರ್ಮ ಗೂಢತೆಯ ಗೊಂಚಲು

ಧರ್ಮರಾಯ ಮಹಾ ಜ್ಞಾನಿ. ಯಮಧರ್ಮನ ರೂಪಿನಲ್ಲಿದ್ದ ಯಕ್ಷನ ಧರ್ಮಸೂಕ್ಷ್ಮದ ಪ್ರಶ್ನೆಗಳಿಗೆ ಧರ್ಮದ ನೆಲೆಯಲ್ಲಿ…

20 hours ago

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

2 days ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

2 days ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

2 days ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

2 days ago