ಭಾರತೀಯ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಹಿರಿಯ ಅಧಿಕಾರಿಗಳನ್ನೊಳಗೊಂಡಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಕುನೂರು ಬಳಿ ಪತನವಾಗಿತ್ತು.ಈ ಘಟನೆಯನ್ನು ಪ್ರತ್ಯಕ್ಷದರ್ಶಿಗಳು ಹೀಗೆ ವಿವರಿಸುತ್ತಾರೆ……
ಮಧ್ಯಾಹ್ನ ಸುಮಾರು 12 ರ ಹೊತ್ತಿಗೆ ದುರ್ಘಟನೆ ನಡೆದಿತ್ತು. ಒಂದು ಭಯಾನಕ ಶಬ್ದ ಕೇಳಿತು. ಅದು ತುಂಬ ಹತ್ತಿರದಲ್ಲೇ ಕೇಳಿಸಿತು. ಹೀಗಾಗಿ ಕುತೂಹಲ ಮತ್ತು ಭಯದಿಂದ ಹೊರಬಂದು ನೋಡಿದೆ. ಆಗ ಹೆಲಿಕಾಪ್ಟರ್ವೊಂದು ಮರಕ್ಕೆ ಅಪ್ಪಳಿಸಿತ್ತು. ಅಲ್ಲಿಂದ ಬೆಂಕಿಯ ಉಂಡೆ ಏಳುತ್ತಿತ್ತು. ನೋಡುತ್ತಿದ್ದಂತೆ ಮತ್ತೆ ಆ ಹೆಲಿಕಾಪ್ಟರ್ ಮರಕ್ಕೆ ಅಪ್ಪಳಿಸಿತು. ಅಷ್ಟರಲ್ಲಿ ಮೂವರು ಹೆಲಿಕಾಪ್ಟರ್ನಿಂದ ಕೆಳಗೆ ಬಿದ್ದರು. ಅದನ್ನು ನೋಡಿ ನಾನು ಸುತ್ತಲಿನ ಜನರನ್ನು ಕೂಗಿ ಕರೆದೆ. ಬಳಿಕ ಅಗ್ನಿಶಾಮಕ ದಳ, ತುರ್ತು ಸೇವಾ ಘಟಕಗಳಿಗೆ ಕರೆ ಮಾಡಲಾಯಿತು ಎಂದು ಪ್ರತ್ಯಕ್ಷದರ್ಶಿ ಕೃಷ್ಣಸ್ವಾಮಿ ಮಾಧ್ಯಮಗಳಿಗೆ ವಿವರಿಸಿದ್ದಾರೆ.
ಇನ್ನೊಬ್ಬರು ಪ್ರತ್ಯಕ್ಷದರ್ಶಿ ಮಂಜಪ್ಪ ಅವರು ಮಾಧ್ಯಮಗಳಿಗೆ ತಿಳಿಸಿದಂತೆ, ಕುನೂರಿನ ಕಟ್ಟೇರಿ ಹಿಲ್ಸ್ನಲ್ಲಿ ಈ ಘಟನೆ ನಡೆದಿದೆ. ಇದು ಊಟಿಯಿಂದ 25 ಕಿ.ಮೀ ದೂರದಲ್ಲಿದೆ. ಬೆಳಗ್ಗೆ 11.20ಕ್ಕೆ ಘಟನೆ ಸಂಭವಿಸಿದೆ. ಚಳಿಗಾಲ ಆರಂಭವಾಗಿರುವುದರಿಂದ ಮಂಜು ಕವಿದಿತ್ತು ಎಂದು ಹೇಳುತ್ತಾರೆ. ಹೀಗಾಗಿ ಸ್ಪಷ್ಟವಾಗಿ ಕಾಣುತ್ತಿರಲಿಲ್ಲ, ಸದ್ದು ಕೇಳಿತು ಎನ್ನುತ್ತಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…