ಭಾರತೀಯ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಹಿರಿಯ ಅಧಿಕಾರಿಗಳನ್ನೊಳಗೊಂಡಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಕುನೂರು ಬಳಿ ಪತನವಾಗಿತ್ತು.ಈ ಘಟನೆಯನ್ನು ಪ್ರತ್ಯಕ್ಷದರ್ಶಿಗಳು ಹೀಗೆ ವಿವರಿಸುತ್ತಾರೆ……
ಮಧ್ಯಾಹ್ನ ಸುಮಾರು 12 ರ ಹೊತ್ತಿಗೆ ದುರ್ಘಟನೆ ನಡೆದಿತ್ತು. ಒಂದು ಭಯಾನಕ ಶಬ್ದ ಕೇಳಿತು. ಅದು ತುಂಬ ಹತ್ತಿರದಲ್ಲೇ ಕೇಳಿಸಿತು. ಹೀಗಾಗಿ ಕುತೂಹಲ ಮತ್ತು ಭಯದಿಂದ ಹೊರಬಂದು ನೋಡಿದೆ. ಆಗ ಹೆಲಿಕಾಪ್ಟರ್ವೊಂದು ಮರಕ್ಕೆ ಅಪ್ಪಳಿಸಿತ್ತು. ಅಲ್ಲಿಂದ ಬೆಂಕಿಯ ಉಂಡೆ ಏಳುತ್ತಿತ್ತು. ನೋಡುತ್ತಿದ್ದಂತೆ ಮತ್ತೆ ಆ ಹೆಲಿಕಾಪ್ಟರ್ ಮರಕ್ಕೆ ಅಪ್ಪಳಿಸಿತು. ಅಷ್ಟರಲ್ಲಿ ಮೂವರು ಹೆಲಿಕಾಪ್ಟರ್ನಿಂದ ಕೆಳಗೆ ಬಿದ್ದರು. ಅದನ್ನು ನೋಡಿ ನಾನು ಸುತ್ತಲಿನ ಜನರನ್ನು ಕೂಗಿ ಕರೆದೆ. ಬಳಿಕ ಅಗ್ನಿಶಾಮಕ ದಳ, ತುರ್ತು ಸೇವಾ ಘಟಕಗಳಿಗೆ ಕರೆ ಮಾಡಲಾಯಿತು ಎಂದು ಪ್ರತ್ಯಕ್ಷದರ್ಶಿ ಕೃಷ್ಣಸ್ವಾಮಿ ಮಾಧ್ಯಮಗಳಿಗೆ ವಿವರಿಸಿದ್ದಾರೆ.
ಇನ್ನೊಬ್ಬರು ಪ್ರತ್ಯಕ್ಷದರ್ಶಿ ಮಂಜಪ್ಪ ಅವರು ಮಾಧ್ಯಮಗಳಿಗೆ ತಿಳಿಸಿದಂತೆ, ಕುನೂರಿನ ಕಟ್ಟೇರಿ ಹಿಲ್ಸ್ನಲ್ಲಿ ಈ ಘಟನೆ ನಡೆದಿದೆ. ಇದು ಊಟಿಯಿಂದ 25 ಕಿ.ಮೀ ದೂರದಲ್ಲಿದೆ. ಬೆಳಗ್ಗೆ 11.20ಕ್ಕೆ ಘಟನೆ ಸಂಭವಿಸಿದೆ. ಚಳಿಗಾಲ ಆರಂಭವಾಗಿರುವುದರಿಂದ ಮಂಜು ಕವಿದಿತ್ತು ಎಂದು ಹೇಳುತ್ತಾರೆ. ಹೀಗಾಗಿ ಸ್ಪಷ್ಟವಾಗಿ ಕಾಣುತ್ತಿರಲಿಲ್ಲ, ಸದ್ದು ಕೇಳಿತು ಎನ್ನುತ್ತಾರೆ.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…