Advertisement
ಸುದ್ದಿಗಳು

ಬಿಪಿನ್​ ರಾವತ್ ಅವರಿದ್ದ ಸೇನಾ ಹೆಲಿಕಾಪ್ಟರ್​ ಏನಾಗಿತ್ತು ? | ಪ್ರತ್ಯಕ್ಷದರ್ಶಿ ಹೇಳಿದ್ದು ಹೀಗೆ…..|

Share

ಭಾರತೀಯ ಸೇನಾ‌ ಪಡೆಗಳ ಮುಖ್ಯಸ್ಥ ಬಿಪಿನ್‌ ರಾವತ್‌ ಹಾಗೂ ಹಿರಿಯ ಅಧಿಕಾರಿಗಳನ್ನೊಳಗೊಂಡಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಕುನೂರು ಬಳಿ ಪತನವಾಗಿತ್ತು.ಈ ಘಟನೆಯನ್ನು ಪ್ರತ್ಯಕ್ಷದರ್ಶಿಗಳು ಹೀಗೆ ವಿವರಿಸುತ್ತಾರೆ……

ಮಧ್ಯಾಹ್ನ ಸುಮಾರು 12 ರ ಹೊತ್ತಿಗೆ ದುರ್ಘಟನೆ ನಡೆದಿತ್ತು. ಒಂದು ಭಯಾನಕ ಶಬ್ದ ಕೇಳಿತು. ಅದು ತುಂಬ ಹತ್ತಿರದಲ್ಲೇ ಕೇಳಿಸಿತು. ಹೀಗಾಗಿ ಕುತೂಹಲ ಮತ್ತು ಭಯದಿಂದ ಹೊರಬಂದು ನೋಡಿದೆ. ಆಗ ಹೆಲಿಕಾಪ್ಟರ್​ವೊಂದು ಮರಕ್ಕೆ ಅಪ್ಪಳಿಸಿತ್ತು. ಅಲ್ಲಿಂದ ಬೆಂಕಿಯ ಉಂಡೆ ಏಳುತ್ತಿತ್ತು. ನೋಡುತ್ತಿದ್ದಂತೆ ಮತ್ತೆ ಆ ಹೆಲಿಕಾಪ್ಟರ್ ಮರಕ್ಕೆ ಅಪ್ಪಳಿಸಿತು. ಅಷ್ಟರಲ್ಲಿ ಮೂವರು ಹೆಲಿಕಾಪ್ಟರ್​ನಿಂದ ಕೆಳಗೆ ಬಿದ್ದರು. ಅದನ್ನು ನೋಡಿ ನಾನು ಸುತ್ತಲಿನ ಜನರನ್ನು ಕೂಗಿ ಕರೆದೆ. ಬಳಿಕ ಅಗ್ನಿಶಾಮಕ ದಳ, ತುರ್ತು ಸೇವಾ ಘಟಕಗಳಿಗೆ ಕರೆ ಮಾಡಲಾಯಿತು ಎಂದು ಪ್ರತ್ಯಕ್ಷದರ್ಶಿ ಕೃಷ್ಣಸ್ವಾಮಿ ಮಾಧ್ಯಮಗಳಿಗೆ ವಿವರಿಸಿದ್ದಾರೆ.

ಇನ್ನೊಬ್ಬರು ಪ್ರತ್ಯಕ್ಷದರ್ಶಿ ಮಂಜಪ್ಪ ಅವರು ಮಾಧ್ಯಮಗಳಿಗೆ ತಿಳಿಸಿದಂತೆ,  ಕುನೂರಿನ ಕಟ್ಟೇರಿ ಹಿಲ್ಸ್‌ನಲ್ಲಿ ಈ ಘಟನೆ ನಡೆದಿದೆ. ಇದು ಊಟಿಯಿಂದ 25 ಕಿ.ಮೀ ದೂರದಲ್ಲಿದೆ. ಬೆಳಗ್ಗೆ 11.20ಕ್ಕೆ ಘಟನೆ ಸಂಭವಿಸಿದೆ. ಚಳಿಗಾಲ ಆರಂಭವಾಗಿರುವುದರಿಂದ ಮಂಜು ಕವಿದಿತ್ತು ಎಂದು ಹೇಳುತ್ತಾರೆ. ಹೀಗಾಗಿ ಸ್ಪಷ್ಟವಾಗಿ ಕಾಣುತ್ತಿರಲಿಲ್ಲ, ಸದ್ದು ಕೇಳಿತು ಎನ್ನುತ್ತಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago