The Rural Mirror ಕಾಳಜಿ

ಮಿರರ್‌ ನೆರವು | ಕ್ಯಾನ್ಸರ್‌ ಪೀಡಿತ ಈ ಮಹಿಳೆಗೆ ನೆರವಾಗುವಿರಾ… ? |

Share

ಸುಳ್ಯದ ಈ ಮಹಿಳೆ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಬೀಡಿ ಕಟ್ಟಿ ಬದುಕು ಸಾಗಿಸುತ್ತಿದ್ದ ಇವರು ಕ್ಯಾನ್ಸರ್‌ ರೋಗಕ್ಕೆ ಒಳಗಾಗಿದ್ದಾರೆ. ಹೀಗಾಗಿ ಚಿಕಿತ್ಸೆಗೆ ಹೆಚ್ಚಿನ ಪ್ರಮಾಣದ ಹಣ ಬೇಕಾಗಿದೆ. ಬಡಕುಟುಂಬಕ್ಕೆ ಈಗ ಆರ್ಥಿಕ ನೆರವು ಅಗತ್ಯವಿದೆ.

ಸುಳ್ಯದ ಆಲೆಟ್ಟಿ ಗ್ರಾಮದ ಅರಂಬೂರು  ಅಂಜೆಕಾರ್‌ ನಿವಾಸಿಯಾಗಿರುವ ಕಮಲ ಎಂಬವರು ತಮ್ಮ ಸಹೋದರನ ಜೊತೆ ಬದುಕು ಸಾಗಿಸುತ್ತಿದ್ದಾರೆ. ಬೀಡಿ ಕಟ್ಟಿ ಬದುಕು ಸಾಗಿಸುತ್ತಿದ್ದ ಇವರಿಗೆ ಈಚೆಗೆ ಕ್ಯಾನ್ಸರ್‌ ರೋಗ ಪತ್ತೆಯಾಗಿತ್ತು. ಇದಕ್ಕಾಗಿ ಈಗಾಗಲೇ ಚಿಕಿತ್ಸೆ ಮಾಡಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಡಾ.ಕಿಶನ್ ರಾವ್ ಬಾಳಿಲ ನೇತೃತ್ವದ ತಂಡ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ. ಮಾನವೀಯ ನೆಲೆಯಲ್ಲಿ ವೈದ್ಯರ ತಂಡವೇ ಅಲ್ಪಪ್ರಮಾಣ ವೆಚ್ಚಗಳನ್ನು ಭರಿಸಿ ಚಿಕಿತ್ಸೆ ನೀಡಿದ್ದಾರೆ. ಇದೀಗ ಮುಂದಿನ ಚಿಕಿತ್ಸೆಗೆ ಹಣಕಾಸಿನ ಅಗತ್ಯ ಇದೆ. ಸರ್ಕಾರದ ಯೋಜನೆಗಳ ಬಳಕೆ ನಂತರವೂ ಇತರ ಔಷಧಿ, ಚಿಕಿತ್ಸೆಗಾಗಿ ನೆರವು ಅಗತ್ಯವಿದೆ. ಹೀಗಾಗಿ ಈ ಬಗ್ಗೆ RightToLive (ರೈಟ್‌ ಟು ಲಿವ್‌ ) ಸೇವಾ ಸಂಸ್ಥೆಯ ಮೂಲಕ ಧನಸಂಗ್ರಹ ಆರಂಭಿಸಲಾಗಿದೆ. ಸಹೃದಯರು ಈ ಕೆಳಗಿನ ಲಿಂಕ್‌ ಮೂಲಕ ನೆರವು ನೀಡಬಹುದಾಗಿದೆ. https://righttolive.org/Help-Kamala-with-her-Cancer-Treatment

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

16 hours ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

16 hours ago

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |

ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…

16 hours ago

ಬೆಳ್ಳಿ ಧರಿಸುವುದು ಎಲ್ಲಾ ರಾಶಿಯವರಿಗೆ ಉತ್ತಮವೇ…? | ಯಾವೆಲ್ಲಾ ರಾಶಿಗಳಿಗಳಿಗೆ ಹಾನಿ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

16 hours ago

ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…

23 hours ago

ಹೆತ್ತವರವನ್ನು ನೋಡಿಕೊಳ್ಳದ ಮಕ್ಕಳ ದಾನಪತ್ರ ರದ್ದುಗೊಳಿಸುವ ಅವಕಾಶ ಕಾನೂನಿನಲ್ಲಿದೆ | ಸಚಿವ ಕೃಷ್ಣಭೈರೇಗೌಡ

ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…

24 hours ago