ಸುಳ್ಯದ ಈ ಮಹಿಳೆ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಬೀಡಿ ಕಟ್ಟಿ ಬದುಕು ಸಾಗಿಸುತ್ತಿದ್ದ ಇವರು ಕ್ಯಾನ್ಸರ್ ರೋಗಕ್ಕೆ ಒಳಗಾಗಿದ್ದಾರೆ. ಹೀಗಾಗಿ ಚಿಕಿತ್ಸೆಗೆ ಹೆಚ್ಚಿನ ಪ್ರಮಾಣದ ಹಣ ಬೇಕಾಗಿದೆ. ಬಡಕುಟುಂಬಕ್ಕೆ ಈಗ ಆರ್ಥಿಕ ನೆರವು ಅಗತ್ಯವಿದೆ.
ಸುಳ್ಯದ ಆಲೆಟ್ಟಿ ಗ್ರಾಮದ ಅರಂಬೂರು ಅಂಜೆಕಾರ್ ನಿವಾಸಿಯಾಗಿರುವ ಕಮಲ ಎಂಬವರು ತಮ್ಮ ಸಹೋದರನ ಜೊತೆ ಬದುಕು ಸಾಗಿಸುತ್ತಿದ್ದಾರೆ. ಬೀಡಿ ಕಟ್ಟಿ ಬದುಕು ಸಾಗಿಸುತ್ತಿದ್ದ ಇವರಿಗೆ ಈಚೆಗೆ ಕ್ಯಾನ್ಸರ್ ರೋಗ ಪತ್ತೆಯಾಗಿತ್ತು. ಇದಕ್ಕಾಗಿ ಈಗಾಗಲೇ ಚಿಕಿತ್ಸೆ ಮಾಡಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಡಾ.ಕಿಶನ್ ರಾವ್ ಬಾಳಿಲ ನೇತೃತ್ವದ ತಂಡ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ. ಮಾನವೀಯ ನೆಲೆಯಲ್ಲಿ ವೈದ್ಯರ ತಂಡವೇ ಅಲ್ಪಪ್ರಮಾಣ ವೆಚ್ಚಗಳನ್ನು ಭರಿಸಿ ಚಿಕಿತ್ಸೆ ನೀಡಿದ್ದಾರೆ. ಇದೀಗ ಮುಂದಿನ ಚಿಕಿತ್ಸೆಗೆ ಹಣಕಾಸಿನ ಅಗತ್ಯ ಇದೆ. ಸರ್ಕಾರದ ಯೋಜನೆಗಳ ಬಳಕೆ ನಂತರವೂ ಇತರ ಔಷಧಿ, ಚಿಕಿತ್ಸೆಗಾಗಿ ನೆರವು ಅಗತ್ಯವಿದೆ. ಹೀಗಾಗಿ ಈ ಬಗ್ಗೆ RightToLive (ರೈಟ್ ಟು ಲಿವ್ ) ಸೇವಾ ಸಂಸ್ಥೆಯ ಮೂಲಕ ಧನಸಂಗ್ರಹ ಆರಂಭಿಸಲಾಗಿದೆ. ಸಹೃದಯರು ಈ ಕೆಳಗಿನ ಲಿಂಕ್ ಮೂಲಕ ನೆರವು ನೀಡಬಹುದಾಗಿದೆ. https://righttolive.org/Help-Kamala-with-her-Cancer-Treatment
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …
ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…
ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…