ಸುಳ್ಯದ ಈ ಮಹಿಳೆ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಬೀಡಿ ಕಟ್ಟಿ ಬದುಕು ಸಾಗಿಸುತ್ತಿದ್ದ ಇವರು ಕ್ಯಾನ್ಸರ್ ರೋಗಕ್ಕೆ ಒಳಗಾಗಿದ್ದಾರೆ. ಹೀಗಾಗಿ ಚಿಕಿತ್ಸೆಗೆ ಹೆಚ್ಚಿನ ಪ್ರಮಾಣದ ಹಣ ಬೇಕಾಗಿದೆ. ಬಡಕುಟುಂಬಕ್ಕೆ ಈಗ ಆರ್ಥಿಕ ನೆರವು ಅಗತ್ಯವಿದೆ.
ಸುಳ್ಯದ ಆಲೆಟ್ಟಿ ಗ್ರಾಮದ ಅರಂಬೂರು ಅಂಜೆಕಾರ್ ನಿವಾಸಿಯಾಗಿರುವ ಕಮಲ ಎಂಬವರು ತಮ್ಮ ಸಹೋದರನ ಜೊತೆ ಬದುಕು ಸಾಗಿಸುತ್ತಿದ್ದಾರೆ. ಬೀಡಿ ಕಟ್ಟಿ ಬದುಕು ಸಾಗಿಸುತ್ತಿದ್ದ ಇವರಿಗೆ ಈಚೆಗೆ ಕ್ಯಾನ್ಸರ್ ರೋಗ ಪತ್ತೆಯಾಗಿತ್ತು. ಇದಕ್ಕಾಗಿ ಈಗಾಗಲೇ ಚಿಕಿತ್ಸೆ ಮಾಡಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಡಾ.ಕಿಶನ್ ರಾವ್ ಬಾಳಿಲ ನೇತೃತ್ವದ ತಂಡ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ. ಮಾನವೀಯ ನೆಲೆಯಲ್ಲಿ ವೈದ್ಯರ ತಂಡವೇ ಅಲ್ಪಪ್ರಮಾಣ ವೆಚ್ಚಗಳನ್ನು ಭರಿಸಿ ಚಿಕಿತ್ಸೆ ನೀಡಿದ್ದಾರೆ. ಇದೀಗ ಮುಂದಿನ ಚಿಕಿತ್ಸೆಗೆ ಹಣಕಾಸಿನ ಅಗತ್ಯ ಇದೆ. ಸರ್ಕಾರದ ಯೋಜನೆಗಳ ಬಳಕೆ ನಂತರವೂ ಇತರ ಔಷಧಿ, ಚಿಕಿತ್ಸೆಗಾಗಿ ನೆರವು ಅಗತ್ಯವಿದೆ. ಹೀಗಾಗಿ ಈ ಬಗ್ಗೆ RightToLive (ರೈಟ್ ಟು ಲಿವ್ ) ಸೇವಾ ಸಂಸ್ಥೆಯ ಮೂಲಕ ಧನಸಂಗ್ರಹ ಆರಂಭಿಸಲಾಗಿದೆ. ಸಹೃದಯರು ಈ ಕೆಳಗಿನ ಲಿಂಕ್ ಮೂಲಕ ನೆರವು ನೀಡಬಹುದಾಗಿದೆ. https://righttolive.org/Help-Kamala-with-her-Cancer-Treatment
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…