ಸುಳ್ಯದ ಈ ಮಹಿಳೆ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಬೀಡಿ ಕಟ್ಟಿ ಬದುಕು ಸಾಗಿಸುತ್ತಿದ್ದ ಇವರು ಕ್ಯಾನ್ಸರ್ ರೋಗಕ್ಕೆ ಒಳಗಾಗಿದ್ದಾರೆ. ಹೀಗಾಗಿ ಚಿಕಿತ್ಸೆಗೆ ಹೆಚ್ಚಿನ ಪ್ರಮಾಣದ ಹಣ ಬೇಕಾಗಿದೆ. ಬಡಕುಟುಂಬಕ್ಕೆ ಈಗ ಆರ್ಥಿಕ ನೆರವು ಅಗತ್ಯವಿದೆ.
ಸುಳ್ಯದ ಆಲೆಟ್ಟಿ ಗ್ರಾಮದ ಅರಂಬೂರು ಅಂಜೆಕಾರ್ ನಿವಾಸಿಯಾಗಿರುವ ಕಮಲ ಎಂಬವರು ತಮ್ಮ ಸಹೋದರನ ಜೊತೆ ಬದುಕು ಸಾಗಿಸುತ್ತಿದ್ದಾರೆ. ಬೀಡಿ ಕಟ್ಟಿ ಬದುಕು ಸಾಗಿಸುತ್ತಿದ್ದ ಇವರಿಗೆ ಈಚೆಗೆ ಕ್ಯಾನ್ಸರ್ ರೋಗ ಪತ್ತೆಯಾಗಿತ್ತು. ಇದಕ್ಕಾಗಿ ಈಗಾಗಲೇ ಚಿಕಿತ್ಸೆ ಮಾಡಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಡಾ.ಕಿಶನ್ ರಾವ್ ಬಾಳಿಲ ನೇತೃತ್ವದ ತಂಡ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ. ಮಾನವೀಯ ನೆಲೆಯಲ್ಲಿ ವೈದ್ಯರ ತಂಡವೇ ಅಲ್ಪಪ್ರಮಾಣ ವೆಚ್ಚಗಳನ್ನು ಭರಿಸಿ ಚಿಕಿತ್ಸೆ ನೀಡಿದ್ದಾರೆ. ಇದೀಗ ಮುಂದಿನ ಚಿಕಿತ್ಸೆಗೆ ಹಣಕಾಸಿನ ಅಗತ್ಯ ಇದೆ. ಸರ್ಕಾರದ ಯೋಜನೆಗಳ ಬಳಕೆ ನಂತರವೂ ಇತರ ಔಷಧಿ, ಚಿಕಿತ್ಸೆಗಾಗಿ ನೆರವು ಅಗತ್ಯವಿದೆ. ಹೀಗಾಗಿ ಈ ಬಗ್ಗೆ RightToLive (ರೈಟ್ ಟು ಲಿವ್ ) ಸೇವಾ ಸಂಸ್ಥೆಯ ಮೂಲಕ ಧನಸಂಗ್ರಹ ಆರಂಭಿಸಲಾಗಿದೆ. ಸಹೃದಯರು ಈ ಕೆಳಗಿನ ಲಿಂಕ್ ಮೂಲಕ ನೆರವು ನೀಡಬಹುದಾಗಿದೆ. https://righttolive.org/Help-Kamala-with-her-Cancer-Treatment
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…