ಸುಳ್ಯದ ಈ ಮಹಿಳೆ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಬೀಡಿ ಕಟ್ಟಿ ಬದುಕು ಸಾಗಿಸುತ್ತಿದ್ದ ಇವರು ಕ್ಯಾನ್ಸರ್ ರೋಗಕ್ಕೆ ಒಳಗಾಗಿದ್ದಾರೆ. ಹೀಗಾಗಿ ಚಿಕಿತ್ಸೆಗೆ ಹೆಚ್ಚಿನ ಪ್ರಮಾಣದ ಹಣ ಬೇಕಾಗಿದೆ. ಬಡಕುಟುಂಬಕ್ಕೆ ಈಗ ಆರ್ಥಿಕ ನೆರವು ಅಗತ್ಯವಿದೆ.
ಸುಳ್ಯದ ಆಲೆಟ್ಟಿ ಗ್ರಾಮದ ಅರಂಬೂರು ಅಂಜೆಕಾರ್ ನಿವಾಸಿಯಾಗಿರುವ ಕಮಲ ಎಂಬವರು ತಮ್ಮ ಸಹೋದರನ ಜೊತೆ ಬದುಕು ಸಾಗಿಸುತ್ತಿದ್ದಾರೆ. ಬೀಡಿ ಕಟ್ಟಿ ಬದುಕು ಸಾಗಿಸುತ್ತಿದ್ದ ಇವರಿಗೆ ಈಚೆಗೆ ಕ್ಯಾನ್ಸರ್ ರೋಗ ಪತ್ತೆಯಾಗಿತ್ತು. ಇದಕ್ಕಾಗಿ ಈಗಾಗಲೇ ಚಿಕಿತ್ಸೆ ಮಾಡಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಡಾ.ಕಿಶನ್ ರಾವ್ ಬಾಳಿಲ ನೇತೃತ್ವದ ತಂಡ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ. ಮಾನವೀಯ ನೆಲೆಯಲ್ಲಿ ವೈದ್ಯರ ತಂಡವೇ ಅಲ್ಪಪ್ರಮಾಣ ವೆಚ್ಚಗಳನ್ನು ಭರಿಸಿ ಚಿಕಿತ್ಸೆ ನೀಡಿದ್ದಾರೆ. ಇದೀಗ ಮುಂದಿನ ಚಿಕಿತ್ಸೆಗೆ ಹಣಕಾಸಿನ ಅಗತ್ಯ ಇದೆ. ಸರ್ಕಾರದ ಯೋಜನೆಗಳ ಬಳಕೆ ನಂತರವೂ ಇತರ ಔಷಧಿ, ಚಿಕಿತ್ಸೆಗಾಗಿ ನೆರವು ಅಗತ್ಯವಿದೆ. ಹೀಗಾಗಿ ಈ ಬಗ್ಗೆ RightToLive (ರೈಟ್ ಟು ಲಿವ್ ) ಸೇವಾ ಸಂಸ್ಥೆಯ ಮೂಲಕ ಧನಸಂಗ್ರಹ ಆರಂಭಿಸಲಾಗಿದೆ. ಸಹೃದಯರು ಈ ಕೆಳಗಿನ ಲಿಂಕ್ ಮೂಲಕ ನೆರವು ನೀಡಬಹುದಾಗಿದೆ. https://righttolive.org/Help-Kamala-with-her-Cancer-Treatment
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…