ಸುಳ್ಯದ ಈ ಮಹಿಳೆ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಬೀಡಿ ಕಟ್ಟಿ ಬದುಕು ಸಾಗಿಸುತ್ತಿದ್ದ ಇವರು ಕ್ಯಾನ್ಸರ್ ರೋಗಕ್ಕೆ ಒಳಗಾಗಿದ್ದಾರೆ. ಹೀಗಾಗಿ ಚಿಕಿತ್ಸೆಗೆ ಹೆಚ್ಚಿನ ಪ್ರಮಾಣದ ಹಣ ಬೇಕಾಗಿದೆ. ಬಡಕುಟುಂಬಕ್ಕೆ ಈಗ ಆರ್ಥಿಕ ನೆರವು ಅಗತ್ಯವಿದೆ.
ಸುಳ್ಯದ ಆಲೆಟ್ಟಿ ಗ್ರಾಮದ ಅರಂಬೂರು ಅಂಜೆಕಾರ್ ನಿವಾಸಿಯಾಗಿರುವ ಕಮಲ ಎಂಬವರು ತಮ್ಮ ಸಹೋದರನ ಜೊತೆ ಬದುಕು ಸಾಗಿಸುತ್ತಿದ್ದಾರೆ. ಬೀಡಿ ಕಟ್ಟಿ ಬದುಕು ಸಾಗಿಸುತ್ತಿದ್ದ ಇವರಿಗೆ ಈಚೆಗೆ ಕ್ಯಾನ್ಸರ್ ರೋಗ ಪತ್ತೆಯಾಗಿತ್ತು. ಇದಕ್ಕಾಗಿ ಈಗಾಗಲೇ ಚಿಕಿತ್ಸೆ ಮಾಡಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಡಾ.ಕಿಶನ್ ರಾವ್ ಬಾಳಿಲ ನೇತೃತ್ವದ ತಂಡ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ. ಮಾನವೀಯ ನೆಲೆಯಲ್ಲಿ ವೈದ್ಯರ ತಂಡವೇ ಅಲ್ಪಪ್ರಮಾಣ ವೆಚ್ಚಗಳನ್ನು ಭರಿಸಿ ಚಿಕಿತ್ಸೆ ನೀಡಿದ್ದಾರೆ. ಇದೀಗ ಮುಂದಿನ ಚಿಕಿತ್ಸೆಗೆ ಹಣಕಾಸಿನ ಅಗತ್ಯ ಇದೆ. ಸರ್ಕಾರದ ಯೋಜನೆಗಳ ಬಳಕೆ ನಂತರವೂ ಇತರ ಔಷಧಿ, ಚಿಕಿತ್ಸೆಗಾಗಿ ನೆರವು ಅಗತ್ಯವಿದೆ. ಹೀಗಾಗಿ ಈ ಬಗ್ಗೆ RightToLive (ರೈಟ್ ಟು ಲಿವ್ ) ಸೇವಾ ಸಂಸ್ಥೆಯ ಮೂಲಕ ಧನಸಂಗ್ರಹ ಆರಂಭಿಸಲಾಗಿದೆ. ಸಹೃದಯರು ಈ ಕೆಳಗಿನ ಲಿಂಕ್ ಮೂಲಕ ನೆರವು ನೀಡಬಹುದಾಗಿದೆ. https://righttolive.org/Help-Kamala-with-her-Cancer-Treatment
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…