ಸುಳ್ಯದ ಈ ಮಹಿಳೆ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಬೀಡಿ ಕಟ್ಟಿ ಬದುಕು ಸಾಗಿಸುತ್ತಿದ್ದ ಇವರು ಕ್ಯಾನ್ಸರ್ ರೋಗಕ್ಕೆ ಒಳಗಾಗಿದ್ದಾರೆ. ಹೀಗಾಗಿ ಚಿಕಿತ್ಸೆಗೆ ಹೆಚ್ಚಿನ ಪ್ರಮಾಣದ ಹಣ ಬೇಕಾಗಿದೆ. ಬಡಕುಟುಂಬಕ್ಕೆ ಈಗ ಆರ್ಥಿಕ ನೆರವು ಅಗತ್ಯವಿದೆ.
ಸುಳ್ಯದ ಆಲೆಟ್ಟಿ ಗ್ರಾಮದ ಅರಂಬೂರು ಅಂಜೆಕಾರ್ ನಿವಾಸಿಯಾಗಿರುವ ಕಮಲ ಎಂಬವರು ತಮ್ಮ ಸಹೋದರನ ಜೊತೆ ಬದುಕು ಸಾಗಿಸುತ್ತಿದ್ದಾರೆ. ಬೀಡಿ ಕಟ್ಟಿ ಬದುಕು ಸಾಗಿಸುತ್ತಿದ್ದ ಇವರಿಗೆ ಈಚೆಗೆ ಕ್ಯಾನ್ಸರ್ ರೋಗ ಪತ್ತೆಯಾಗಿತ್ತು. ಇದಕ್ಕಾಗಿ ಈಗಾಗಲೇ ಚಿಕಿತ್ಸೆ ಮಾಡಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಡಾ.ಕಿಶನ್ ರಾವ್ ಬಾಳಿಲ ನೇತೃತ್ವದ ತಂಡ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ. ಮಾನವೀಯ ನೆಲೆಯಲ್ಲಿ ವೈದ್ಯರ ತಂಡವೇ ಅಲ್ಪಪ್ರಮಾಣ ವೆಚ್ಚಗಳನ್ನು ಭರಿಸಿ ಚಿಕಿತ್ಸೆ ನೀಡಿದ್ದಾರೆ. ಇದೀಗ ಮುಂದಿನ ಚಿಕಿತ್ಸೆಗೆ ಹಣಕಾಸಿನ ಅಗತ್ಯ ಇದೆ. ಸರ್ಕಾರದ ಯೋಜನೆಗಳ ಬಳಕೆ ನಂತರವೂ ಇತರ ಔಷಧಿ, ಚಿಕಿತ್ಸೆಗಾಗಿ ನೆರವು ಅಗತ್ಯವಿದೆ. ಹೀಗಾಗಿ ಈ ಬಗ್ಗೆ RightToLive (ರೈಟ್ ಟು ಲಿವ್ ) ಸೇವಾ ಸಂಸ್ಥೆಯ ಮೂಲಕ ಧನಸಂಗ್ರಹ ಆರಂಭಿಸಲಾಗಿದೆ. ಸಹೃದಯರು ಈ ಕೆಳಗಿನ ಲಿಂಕ್ ಮೂಲಕ ನೆರವು ನೀಡಬಹುದಾಗಿದೆ. https://righttolive.org/Help-Kamala-with-her-Cancer-Treatment
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…