ಆಸಿಡಿಟಿ ಸಮಸ್ಯೆ ಇಂದಿನ ದಿನಗಳಲ್ಲಿ ಎಲ್ಲರಿಗೂ ಸಾಮಾನ್ಯವಾಗಿ ಬಿಟ್ಟಿದೆ..!.ಹೌದು , ಆಸಿಡಿಟಿ ಸಮಸ್ಯೆ ಈಗ ಎಲ್ಲರಿಗೂ ಸಮಸ್ಯೆಯಾಗಿ ಬಿಟ್ಟಿದೆ.
ಇದಕ್ಕೆ ಪ್ರಮುಖ ಕಾರಣ, ಸರಿಯಾದ ಸಮಯಕ್ಕೆ ಆಹಾರ ಸೇವನೆ ಮಾಡದೇ ಇರುವುದು, ಹೆಚ್ಚು ಮಸಾಲೆಯುಕ್ತ ಅಥವಾ ಖಾರವಾಗಿರುವ ಆಹಾರ -ಪದಾರ್ಥಗಳ ಸೇವನೆ ಮಾಡುವುದು, ಎಣ್ಣೆಯಾಂಶ ಹೆಚ್ಚಿರುವ ಜಂಕ್ ಫುಡ್ಗಳ ಸೇವನೆ, ಪ್ರತಿದಿನ ಮೂರು-ನಾಲ್ಕು ಬಾರಿ ಕಾಫಿ ಕುಡಿಯವುದು, ಸರಿಯಾಗಿ ನೀರು ಕುಡಿಯದೇ ಇರುವುದು, ಹೀಗೆ ಇಂತಹ ಕೆಲವು ಕೆಟ್ಟ ಅಭ್ಯಾಸಗಳಿಂದಾಗಿ ದೇಹದಲ್ಲಿರುವ ಪಿಎಚ್ ಪ್ರಮಾಣ ದಲ್ಲಿ ವ್ಯತ್ಯಾಸ ಉಂಟಾಗಿ ಮೊದಲು ಕಾಡುವ ಸಮಸ್ಯೆಯೇ ಈ ಆಸಿಡಿಟಿ ಇಲ್ಲಾಂದ್ರೆ ಹುಳಿತೇಗು. ಈ ಸಮಸ್ಯೆಗೆ ಏನೆಲ್ಲಾ ಆಯುರ್ವೇದ ಮನೆಮದ್ದುಗಳು ಇವೆ ಎನ್ನುವುದನ್ನು ನೋಡೋಣ…
ಆಸಿಡಿಟಿ ನಿಯಂತ್ರಣಕ್ಕೆ ಬರಬೇಕೆಂದರೆ, ಮೊದಲಿಗೆ ಸಮಯಕ್ಕೆ ಸರಿಯಾಗಿ ಊಟ ಮಾಡುವ ಅಭ್ಯಾಸ ಮಾಡಬೇಕು. ಕೆಲವೊಮ್ಮೆ ಕೆಲಸದ ಒತ್ತಡದಿಂದ ಅಥವಾ ಪ್ರತಿ ದಿನದ ಜಂಜಾಟದ ಜೀವನ ಶೈಲಿಯಿಂದಾಗಿ, ಸರಿ ಯಾದ ಸಮಯಕ್ಕೆ ಊಟ-ತಿಂಡಿ ಮಾಡದೇ, ತಮಗೆ ಸಮಯ ಸಿಕ್ಕಾಗಿ ಊಟ-ತಿಂಡಿ ಮಾಡುತ್ತಾ ಬಂದರೆ, ಆಸಿಡಿಟಿ ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ.
ಈ ಬಗ್ಗೆ ತಜ್ಞರು ಹೇಳುವ ಪ್ರಕಾರ ಹಸಿವು ಶುರುವಾದ ಸಮಯದಲ್ಲಿ ಕೂಡಲೇ ಟೀ-ಕಾಫಿ ಕುಡಿಯುವ ಬದಲು ಊಟ ಅಥವಾ ಆರೋಗ್ಯಕರ ತಿಂಡಿಗಳನ್ನು ಸೇವನೆ ಮಾಡುವುದರಿಂದ ಆಸಿಡಿಟಿಯನ್ನು ನಿಯಂತ್ರಿಸಬಹುದಾಗಿದೆ.
ಹಾಲಿನ ಉಪ ಉತ್ಪನ್ನವಾದ ಮೊಸರು ಮಜ್ಜಿಗೆ ಆರೋಗ್ಯಕ್ಕೆ ಬಹಳ ಒಳ್ಳೆಯ ಆಹಾರ ಪದಾರ್ಥ ಎನ್ನುವುದರಲ್ಲಿ ಎರಡು ಮಾತಿಲ್ಲ. ಹೀಗಾಗಿ ಪ್ರತಿದಿನ ಊಟದ ಬಳಿಕ ಪ್ರತಿದಿನ ಒಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ಮಾಡಿ ಕೊಂಡರೆ ಬಹಳ ಒಳ್ಳೆಯದು.
ಪ್ರಮುಖವಾಗಿ ಮಜ್ಜಿಗೆಯಲ್ಲಿ ಕಂಡುಬರುವ ಆರೋಗ್ಯಕಾರಿ ಅಂಶಗಳು ಆಸಿಡಿಟಿಗೆ ಕಾರಣವಾಗುವ ಆಮ್ಲೀಯತೆ ಪ್ರಭಾವವನ್ನು ಹೋಗಲಾಡಿಸಿ ಹುಳಿ ತೇಗು ಎದೆಯುರಿ, ಹೊಟ್ಟೆ ಉಬ್ಬರ ಮತ್ತು ಗ್ಯಾಸ್ಟಿಕ್ ಸಮಸ್ಯೆಗೆ ಕಡಿವಾಣ ಹಾಕುತ್ತದೆ.
ಶುಂಠಿ ಮತ್ತು ಉಪ್ಪು ಆಸಿಡಿಟಿಗೆ ಸಮಸ್ಯೆಗೆ ಒಳ್ಳೆಯ ಮನೆ ಮದ್ದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.
ಪದೇ ಪದೇ ಆಸಿಡಿಟಿ ಸಮಸ್ಯೆ ಎದುರಿಸುವವರು ಊಟ ಮಾಡುವ ಹತ್ತು ನಿಮಿಷದ ಮೊದಲು, ಚಿಟಿಕೆ ಯಷ್ಟು ಉಪ್ಪಿನ ಜೊತೆಗೆ ಸಣ್ಣ ತುಂಡು ಹಸಿಶುಂಠಿ ಅಗೆಯಿರಿ ಹಾಗೂ ಇದರ ರಸವನ್ನು ನಿಧಾನಕ್ಕೆ ನುಂಗುತ್ತಾ ಬನ್ನಿ. ಹೀಗೆ ವಾರದಲ್ಲಿ ಮೂರು-ನಾಲ್ಕು ಬಾರಿ ಮಾಡುತ್ತಾ ಬಂದರೆ, ಆಸಿಡಿಟಿ, ಹುಳಿತೇಗು ಹಾಗೂ ಅಜೀರ್ಣದಂತಹ ಸಮಸ್ಯೆಗಳು ಬಹಳ ಬೇಗನೇ ದೂರವಾ ಗುತ್ತದೆ.
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…