Advertisement
ಆರೋಗ್ಯ

ಎಸಿಡಿಟಿ ಸಮಸ್ಯೆಗೆ ಇದೆಯೇ… ? ಏನಿದೆ ಪರಿಹಾರ…? ಇಲ್ಲಿದೆ ಟಿಪ್ಸ್…‌ |

Share

ಆಸಿಡಿಟಿ ಸಮಸ್ಯೆ ಇಂದಿನ ದಿನಗಳಲ್ಲಿ ಎಲ್ಲರಿಗೂ ಸಾಮಾನ್ಯವಾಗಿ ಬಿಟ್ಟಿದೆ..!.ಹೌದು , ಆಸಿಡಿಟಿ ಸಮಸ್ಯೆ ಈಗ ಎಲ್ಲರಿಗೂ  ಸಮಸ್ಯೆಯಾಗಿ ಬಿಟ್ಟಿದೆ.

ಇದಕ್ಕೆ ಪ್ರಮುಖ ಕಾರಣ, ಸರಿಯಾದ ಸಮಯಕ್ಕೆ ಆಹಾರ ಸೇವನೆ ಮಾಡದೇ ಇರುವುದು, ಹೆಚ್ಚು ಮಸಾಲೆಯುಕ್ತ ಅಥವಾ ಖಾರವಾಗಿರುವ ಆಹಾರ -ಪದಾರ್ಥಗಳ ಸೇವನೆ ಮಾಡುವುದು, ಎಣ್ಣೆಯಾಂಶ ಹೆಚ್ಚಿರುವ ಜಂಕ್‌ ಫುಡ್‌ಗಳ ಸೇವನೆ, ಪ್ರತಿದಿನ ಮೂರು-ನಾಲ್ಕು ಬಾರಿ ಕಾಫಿ ಕುಡಿಯವುದು, ಸರಿಯಾಗಿ ನೀರು ಕುಡಿಯದೇ ಇರುವುದು, ಹೀಗೆ ಇಂತಹ ಕೆಲವು ಕೆಟ್ಟ ಅಭ್ಯಾಸಗಳಿಂದಾಗಿ ದೇಹದಲ್ಲಿರುವ ಪಿಎಚ್ ಪ್ರಮಾಣ ದಲ್ಲಿ ವ್ಯತ್ಯಾಸ ಉಂಟಾಗಿ ಮೊದಲು ಕಾಡುವ ಸಮಸ್ಯೆಯೇ ಈ ಆಸಿಡಿಟಿ ಇಲ್ಲಾಂದ್ರೆ ಹುಳಿತೇಗು. ಈ ಸಮಸ್ಯೆಗೆ ಏನೆಲ್ಲಾ ಆಯುರ್ವೇದ ಮನೆಮದ್ದುಗಳು ಇವೆ ಎನ್ನುವುದನ್ನು ನೋಡೋಣ…

ಆಸಿಡಿಟಿ ನಿಯಂತ್ರಣಕ್ಕೆ ಬರಬೇಕೆಂದರೆ, ಮೊದಲಿಗೆ ಸಮಯಕ್ಕೆ ಸರಿಯಾಗಿ ಊಟ ಮಾಡುವ ಅಭ್ಯಾಸ ಮಾಡಬೇಕು. ಕೆಲವೊಮ್ಮೆ ಕೆಲಸದ ಒತ್ತಡದಿಂದ ಅಥವಾ ಪ್ರತಿ ದಿನದ ಜಂಜಾಟದ ಜೀವನ ಶೈಲಿಯಿಂದಾಗಿ, ಸರಿ ಯಾದ ಸಮಯಕ್ಕೆ ಊಟ-ತಿಂಡಿ ಮಾಡದೇ, ತಮಗೆ ಸಮಯ ಸಿಕ್ಕಾಗಿ ಊಟ-ತಿಂಡಿ ಮಾಡುತ್ತಾ ಬಂದರೆ, ಆಸಿಡಿಟಿ ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ.

ಈ ಬಗ್ಗೆ ತಜ್ಞರು ಹೇಳುವ ಪ್ರಕಾರ ಹಸಿವು ಶುರುವಾದ ಸಮಯದಲ್ಲಿ ಕೂಡಲೇ ಟೀ-ಕಾಫಿ ಕುಡಿಯುವ ಬದಲು ಊಟ ಅಥವಾ ಆರೋಗ್ಯಕರ ತಿಂಡಿಗಳನ್ನು ಸೇವನೆ ಮಾಡುವುದರಿಂದ ಆಸಿಡಿಟಿಯನ್ನು ನಿಯಂತ್ರಿಸಬಹುದಾಗಿದೆ.

ಹಾಲಿನ ಉಪ ಉತ್ಪನ್ನವಾದ ಮೊಸರು ಮಜ್ಜಿಗೆ ಆರೋಗ್ಯಕ್ಕೆ ಬಹಳ ಒಳ್ಳೆಯ ಆಹಾರ ಪದಾರ್ಥ ಎನ್ನುವುದರಲ್ಲಿ ಎರಡು ಮಾತಿಲ್ಲ. ಹೀಗಾಗಿ ಪ್ರತಿದಿನ ಊಟದ ಬಳಿಕ ಪ್ರತಿದಿನ ಒಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ಮಾಡಿ ಕೊಂಡರೆ ಬಹಳ ಒಳ್ಳೆಯದು.

ಪ್ರಮುಖವಾಗಿ ಮಜ್ಜಿಗೆಯಲ್ಲಿ ಕಂಡುಬರುವ ಆರೋಗ್ಯಕಾರಿ ಅಂಶಗಳು ಆಸಿಡಿಟಿಗೆ ಕಾರಣವಾಗುವ ಆಮ್ಲೀಯತೆ ಪ್ರಭಾವವನ್ನು ಹೋಗಲಾಡಿಸಿ ಹುಳಿ ತೇಗು ಎದೆಯುರಿ, ಹೊಟ್ಟೆ ಉಬ್ಬರ ಮತ್ತು ಗ್ಯಾಸ್ಟಿಕ್ ಸಮಸ್ಯೆಗೆ ಕಡಿವಾಣ ಹಾಕುತ್ತದೆ.​

ಶುಂಠಿ ಮತ್ತು ಉಪ್ಪು ಆಸಿಡಿಟಿಗೆ ಸಮಸ್ಯೆಗೆ ಒಳ್ಳೆಯ ಮನೆ ಮದ್ದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

ಪದೇ ಪದೇ ಆಸಿಡಿಟಿ ಸಮಸ್ಯೆ ಎದುರಿಸುವವರು ಊಟ ಮಾಡುವ ಹತ್ತು ನಿಮಿಷದ ಮೊದಲು, ಚಿಟಿಕೆ ಯಷ್ಟು ಉಪ್ಪಿನ ಜೊತೆಗೆ ಸಣ್ಣ ತುಂಡು ಹಸಿಶುಂಠಿ ಅಗೆಯಿರಿ ಹಾಗೂ ಇದರ ರಸವನ್ನು ನಿಧಾನಕ್ಕೆ ನುಂಗುತ್ತಾ ಬನ್ನಿ. ಹೀಗೆ ವಾರದಲ್ಲಿ ಮೂರು-ನಾಲ್ಕು ಬಾರಿ ಮಾಡುತ್ತಾ ಬಂದರೆ, ಆಸಿಡಿಟಿ, ಹುಳಿತೇಗು ಹಾಗೂ ಅಜೀರ್ಣದಂತಹ ಸಮಸ್ಯೆಗಳು ಬಹಳ ಬೇಗನೇ ದೂರವಾ ಗುತ್ತದೆ.​

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

2 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

2 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

2 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

7 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago