ಉಜಿರೆಯಲ್ಲಿ ನಡೆಯುವ 25ನೇ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರನ್ನಾಗಿ ಹೇಮಾವತಿ ವೀ. ಹೆಗ್ಗಡೆ ಅವರನ್ನು ಆಯ್ಕೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಜಿರೆಯ ರಾಮಕೃಷ್ಣ ಸಭಾ ಮಂಟಪದಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಫೆಬ್ರವರಿ ತಿಂಗಳಿನಲ್ಲಿ ದಿನಾಂಕ 3 ರಿಂದ 5ರವರೆಗೆ ನಡೆಯಲಿರುವ 25ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರನ್ನಾಗಿ ಹೇಮಾವತಿ ನೀ ಹೆಗ್ಗಡೆಯವರನ್ನು ಆಯ್ಕೆ ಮಾಡಲಾಗಿದೆ ಎಂದು ಅಧ್ಯಕ್ಷರಾದ ಡಾ. ಎಂ. ಪಿ. ಶ್ರೀನಾಥ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿ ಹೇಮಾವತಿ ವೀ. ಹೆಗ್ಗಡೆಯವರು ಕರ್ನಾಟಕ ರಾಜ್ಯದ ಲಕ್ಷಾಂತರ ಗ್ರಾಮೀಣ ಮಹಿಳೆಯರಿಗೆ ಸ್ಫೂರ್ತಿಯ ಚಿಲುಮೆಯಾಗಿದ್ದಾರೆ. ಅವರ ದೂರದೃಷ್ಟಿ ಆಲೋಚನೆಗಳು ಮತ್ತು ಚಿಂತನೆಗಳು ಕರ್ನಾಟಕ ರಾಜ್ಯಾದ್ಯಂತ ವಿವಿಧ ಮಹಿಳಾ ಸಬಲೀಕರಣ ಕಾರ್ಯಕ್ರಮಗಳನ್ನು ರೂಪಿಸಿ ರಾಜ್ಯದ ಗ್ರಾಮೀಣ ಮಹಿಳೆಯರ ಜೀವನದಲ್ಲಿ ಸಮಗ್ರವಾದ ಸಬಲೀಕರಣವನ್ನುಂಟು ಮಾಡಿದೆ. ಧರ್ಮಸ್ಥಳದಲ್ಲಿ ಸಮಾಜದ ಮುಖ್ಯವಾಹಿನಿಯಿಂದ ಹೊರಗುಳಿದಿದ್ದ ಸ್ತ್ರೀಯರನ್ನು ಗುರುತಿಸಿ, ಕನ್ಯಾಕುಮಾರಿ ಯುವತಿ ಮಂಡಳಿಯನ್ನು 1973ರಲ್ಲಿ ಪ್ರಾರಂಭಿಸಿದರು. ಸ್ತ್ರೀಶಕ್ತಿ ಸಂಘದ ಪರಿಕಲ್ಪನೆಯಲ್ಲಿ ಎಲ್ಲ ಮಹಿಳೆಯರು ಆರ್ಥಿಕ ಸ್ವಾವಲಂಬನೆಯ ಬದುಕನ್ನು ನಡೆಸಲು ಕಾರಣೀಭೂತರಾದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…