ಇನ್ನು ಮುಂದೆ SSLC, PUCಗೆ 3 ಪಬ್ಲಿಕ್ ಪರೀಕ್ಷೆ ಇರುತ್ತೆ | ಬೆಳಗಾವಿ ಅಧಿವೇಶನದಲ್ಲಿ ಹೇಳಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

December 12, 2023
12:31 PM

ಕಾಂಗ್ರೆಸ್‌ ಸರ್ಕಾರ(Congress Govt) ಬಂದ ಮೇಲೆ ರಾಷ್ಟ್ರೀಯ ಶಿಕ್ಷಣ ನೀತಿ(NEP)ಯನ್ನು ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿಯನ್ನು (SEP)ಯನ್ನು ಜಾರಿಗೊಳಿಸಿದೆ. ಈ ರಾಜಕೀಯ ಮೇಲಾಟದಲ್ಲಿ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕುವಂತಾಗಿದೆ.  ದಿನಕ್ಕೊಂದರಂತೆ ನಿಯಮಗಳನ್ನು ಜಾರಿಗೆ ತರಲಾಗುತ್ತಿದೆ. ಇದೀಗ ಎಸ್‌ಎಸ್‌ಎಲ್‌ಸಿ, ಪಿಯುಸಿಗೆ (SSLC, PUC) ಇನ್ಮುಂದೆ 3 ಪಬ್ಲಿಕ್ ಪರೀಕ್ಷೆಗಳನ್ನು(Public Exam) ಅನುಷ್ಠಾನ ಮಾಡಿದ್ದೇವೆ. ಇದರಿಂದ ಮಕ್ಕಳಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದರು.

Advertisement

ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ಕಲಾಪದಲ್ಲಿ ಬಿಜೆಪಿ ಶಾಸಕರೊಬ್ಬರ (BJP MLA) ಪ್ರಶ್ನೆಗೆ ಉತ್ತರಿಸುತ್ತಾ, ನಾವು ಮಾತು ಕೊಟ್ಟಂತೆ ಎನ್‌ಇಪಿ (NEP) ರದ್ದು ಮಾಡಿದ್ದೇವೆ. ಹಿಂದಿನ ಪಠ್ಯಕ್ರಮ ಜಾರಿ ಮಾಡಿದ್ದೇವೆ ಬಿಜೆಪಿ ಸರ್ಕಾರ ಮಾಡಿದ ಲೋಪ ಸರಿ ಮಾಡಿದ್ದೇವೆ ಎಂದರು. ಎಸ್‌ಎಸ್‌ಎಲ್‌ಸಿ, ಪಿಯುಸಿಗೆ 3 ಪಬ್ಲಿಕ್ ಪರೀಕ್ಷೆಗಳನ್ನು ಅನುಷ್ಠಾನ ಮಾಡಿದ್ದೇವೆ. ಇದರಿಂದ ಮಕ್ಕಳಿಗೆ ಅನುಕೂಲ ಆಗುತ್ತದೆ. ಈ ವ್ಯವಸ್ಥೆ ಎನ್‌ಇಪಿಯಲ್ಲಿ ಇಲ್ಲ. ಕೆಪಿಎಸ್ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಪ್ರಾರಂಭ ಮಾಡುವ ವ್ಯವಸ್ಥೆ ಮಾಡ್ತಿದ್ದೇವೆ. ಎಸ್‌ಇಪಿಯಲ್ಲಿ ಉತ್ತಮ ಶಿಕ್ಷಣ ಕೊಡ್ತೀವಿ. ಇದಕ್ಕಾಗಿ ಸಮಿತಿ ನೇಮಕ ಮಾಡಲಾಗಿದೆ. ಉತ್ತಮ ವ್ಯಕ್ತಿಗಳನ್ನ ಸೃಷ್ಟಿ ಮಾಡುವ ಪಾಲಿಸಿ ಎಸ್‌ಇಪಿ ಜಾರಿ ಮಾಡ್ತೀವಿ. ಎನ್‌ಇಪಿ ರದ್ದು ನಿರ್ಧಾರ ವಾಪಸ್ ಇಲ್ಲವೇ ಇಲ್ಲ ಎಂದು ಹೇಳಿದರು.

ಇದಕ್ಕೆ ಬಿಜೆಪಿ ಶಾಸಕರಿಂದ ವಿರೋಧ ವ್ಯಕ್ತವಾಯಿತು. ವೈ.ಎ ನಾರಾಯಣಸ್ವಾಮಿ ಇದಕ್ಕೆ ಪ್ರತಿಕ್ರಿಯಿಸಿ, ಸಿನಿಎಸ್‌ಇ ಬೋರ್ಡ್‌ಗೆ ಎಸ್‌ಇಪಿ ಅನ್ವಯ ಆಗುತ್ತಾ? ಬೇರೆ ಬೇರೆ ರಾಜ್ಯಗಳಲ್ಲಿ ಎನ್‌ಇಪಿ ಇದ್ದು, ನಮ್ಮ ರಾಜ್ಯದಲ್ಲಿ ಎಸ್‌ಇಪಿ ಇದ್ದರೆ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ನಮ್ಮ ಮಕ್ಕಳಿಗೆ ಅನ್ಯಾಯ ಆಗುತ್ತದೆ. ದುರುದ್ದೇಶದಿಂದ ಎನ್‌ಇಪಿ ರದ್ದು ಮಾಡೋದು ಸರಿಯಲ್ಲ. ಎನ್‌ಇಪಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ವ್ಯವಸ್ಥೆ ರೂಪಿಸುತ್ತದೆ. ಸಿಬಿಎಸ್‌ಇ ಖಾಸಗಿ ಶಾಲೆಗಳಲ್ಲಿ ಎಸ್‌ಇಪಿ ಅನುಷ್ಠಾನ ಮಾಡೋ ತಾಕತ್ ಸರ್ಕಾರಕ್ಕೆ ಇದೆಯಾ? ಎಂದು ಸವಾಲ್ ಹಾಕಿದರು. ಈ ವೇಳೆ ಹಲವು ಸದಸ್ಯರು ಎನ್‌ಇಪಿ ಚರ್ಚೆಯಲ್ಲಿ ಮಾತನಾಡುವ ಉತ್ಸಾಹ ತೋರಿದ್ದರಿಂದ್ದ ಚರ್ಚೆಯನ್ನು ಇಂದು ಮತ್ತೆ ಮುಂದುವರೆಸಲಾಗಿದೆ.

We have now implemented 3 Public Exams for SSLC, PUC. Education Minister Madhu Bangarappa said that this will benefit the children in many ways. Answering a question from a BJP MLA at a function held in Belgaum Suvarnasoudha, we canceled the NEP as promised. He said that we have implemented the previous syllabus and corrected the mistake made by the BJP government.

– ಅಂತರ್ಜಾಲ ಮಾಹಿತಿ

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ
May 10, 2025
7:42 PM
by: The Rural Mirror ಸುದ್ದಿಜಾಲ
ಕೃಷಿಕರ ಸಂಸ್ಥೆ ಕ್ಯಾಂಪ್ಕೊ ವತಿಯಿಂದ ರಾಷ್ಟ್ರೀಯ ರಕ್ಷಣಾ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆ
May 10, 2025
7:05 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 09-05-2025 | ಮೇ14 ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ
May 10, 2025
12:20 PM
by: ಸಾಯಿಶೇಖರ್ ಕರಿಕಳ
ಜೂನ್‌ನಿಂದ ಈ 6 ರಾಶಿಯವರ ಅದೃಷ್ಟ ಖುಲಾಯಿಸಲಿದೆ… ಕೋಟ್ಯಾಧಿಪತಿಗಳಾಗುವ ಯೋಗ!
May 10, 2025
8:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group