Advertisement
MIRROR FOCUS

ಇನ್ನು ಮುಂದೆ SSLC, PUCಗೆ 3 ಪಬ್ಲಿಕ್ ಪರೀಕ್ಷೆ ಇರುತ್ತೆ | ಬೆಳಗಾವಿ ಅಧಿವೇಶನದಲ್ಲಿ ಹೇಳಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

Share

ಕಾಂಗ್ರೆಸ್‌ ಸರ್ಕಾರ(Congress Govt) ಬಂದ ಮೇಲೆ ರಾಷ್ಟ್ರೀಯ ಶಿಕ್ಷಣ ನೀತಿ(NEP)ಯನ್ನು ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿಯನ್ನು (SEP)ಯನ್ನು ಜಾರಿಗೊಳಿಸಿದೆ. ಈ ರಾಜಕೀಯ ಮೇಲಾಟದಲ್ಲಿ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕುವಂತಾಗಿದೆ.  ದಿನಕ್ಕೊಂದರಂತೆ ನಿಯಮಗಳನ್ನು ಜಾರಿಗೆ ತರಲಾಗುತ್ತಿದೆ. ಇದೀಗ ಎಸ್‌ಎಸ್‌ಎಲ್‌ಸಿ, ಪಿಯುಸಿಗೆ (SSLC, PUC) ಇನ್ಮುಂದೆ 3 ಪಬ್ಲಿಕ್ ಪರೀಕ್ಷೆಗಳನ್ನು(Public Exam) ಅನುಷ್ಠಾನ ಮಾಡಿದ್ದೇವೆ. ಇದರಿಂದ ಮಕ್ಕಳಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದರು.

ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ಕಲಾಪದಲ್ಲಿ ಬಿಜೆಪಿ ಶಾಸಕರೊಬ್ಬರ (BJP MLA) ಪ್ರಶ್ನೆಗೆ ಉತ್ತರಿಸುತ್ತಾ, ನಾವು ಮಾತು ಕೊಟ್ಟಂತೆ ಎನ್‌ಇಪಿ (NEP) ರದ್ದು ಮಾಡಿದ್ದೇವೆ. ಹಿಂದಿನ ಪಠ್ಯಕ್ರಮ ಜಾರಿ ಮಾಡಿದ್ದೇವೆ ಬಿಜೆಪಿ ಸರ್ಕಾರ ಮಾಡಿದ ಲೋಪ ಸರಿ ಮಾಡಿದ್ದೇವೆ ಎಂದರು. ಎಸ್‌ಎಸ್‌ಎಲ್‌ಸಿ, ಪಿಯುಸಿಗೆ 3 ಪಬ್ಲಿಕ್ ಪರೀಕ್ಷೆಗಳನ್ನು ಅನುಷ್ಠಾನ ಮಾಡಿದ್ದೇವೆ. ಇದರಿಂದ ಮಕ್ಕಳಿಗೆ ಅನುಕೂಲ ಆಗುತ್ತದೆ. ಈ ವ್ಯವಸ್ಥೆ ಎನ್‌ಇಪಿಯಲ್ಲಿ ಇಲ್ಲ. ಕೆಪಿಎಸ್ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಪ್ರಾರಂಭ ಮಾಡುವ ವ್ಯವಸ್ಥೆ ಮಾಡ್ತಿದ್ದೇವೆ. ಎಸ್‌ಇಪಿಯಲ್ಲಿ ಉತ್ತಮ ಶಿಕ್ಷಣ ಕೊಡ್ತೀವಿ. ಇದಕ್ಕಾಗಿ ಸಮಿತಿ ನೇಮಕ ಮಾಡಲಾಗಿದೆ. ಉತ್ತಮ ವ್ಯಕ್ತಿಗಳನ್ನ ಸೃಷ್ಟಿ ಮಾಡುವ ಪಾಲಿಸಿ ಎಸ್‌ಇಪಿ ಜಾರಿ ಮಾಡ್ತೀವಿ. ಎನ್‌ಇಪಿ ರದ್ದು ನಿರ್ಧಾರ ವಾಪಸ್ ಇಲ್ಲವೇ ಇಲ್ಲ ಎಂದು ಹೇಳಿದರು.

ಇದಕ್ಕೆ ಬಿಜೆಪಿ ಶಾಸಕರಿಂದ ವಿರೋಧ ವ್ಯಕ್ತವಾಯಿತು. ವೈ.ಎ ನಾರಾಯಣಸ್ವಾಮಿ ಇದಕ್ಕೆ ಪ್ರತಿಕ್ರಿಯಿಸಿ, ಸಿನಿಎಸ್‌ಇ ಬೋರ್ಡ್‌ಗೆ ಎಸ್‌ಇಪಿ ಅನ್ವಯ ಆಗುತ್ತಾ? ಬೇರೆ ಬೇರೆ ರಾಜ್ಯಗಳಲ್ಲಿ ಎನ್‌ಇಪಿ ಇದ್ದು, ನಮ್ಮ ರಾಜ್ಯದಲ್ಲಿ ಎಸ್‌ಇಪಿ ಇದ್ದರೆ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ನಮ್ಮ ಮಕ್ಕಳಿಗೆ ಅನ್ಯಾಯ ಆಗುತ್ತದೆ. ದುರುದ್ದೇಶದಿಂದ ಎನ್‌ಇಪಿ ರದ್ದು ಮಾಡೋದು ಸರಿಯಲ್ಲ. ಎನ್‌ಇಪಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ವ್ಯವಸ್ಥೆ ರೂಪಿಸುತ್ತದೆ. ಸಿಬಿಎಸ್‌ಇ ಖಾಸಗಿ ಶಾಲೆಗಳಲ್ಲಿ ಎಸ್‌ಇಪಿ ಅನುಷ್ಠಾನ ಮಾಡೋ ತಾಕತ್ ಸರ್ಕಾರಕ್ಕೆ ಇದೆಯಾ? ಎಂದು ಸವಾಲ್ ಹಾಕಿದರು. ಈ ವೇಳೆ ಹಲವು ಸದಸ್ಯರು ಎನ್‌ಇಪಿ ಚರ್ಚೆಯಲ್ಲಿ ಮಾತನಾಡುವ ಉತ್ಸಾಹ ತೋರಿದ್ದರಿಂದ್ದ ಚರ್ಚೆಯನ್ನು ಇಂದು ಮತ್ತೆ ಮುಂದುವರೆಸಲಾಗಿದೆ.

We have now implemented 3 Public Exams for SSLC, PUC. Education Minister Madhu Bangarappa said that this will benefit the children in many ways. Answering a question from a BJP MLA at a function held in Belgaum Suvarnasoudha, we canceled the NEP as promised. He said that we have implemented the previous syllabus and corrected the mistake made by the BJP government.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

21 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

23 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

1 day ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

1 day ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

1 day ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

1 day ago