Advertisement
ಮಾಹಿತಿ

ಮಣ್ಣುಜೀವಿಗಳಿಗೂ ಹರ್ಬಲ್ ಟೀ….| ಕಳೆಗಿಡಗಳಿಂದಲೇ ತಯಾರಿಸಬಹುದು ಪೌಷ್ಟಿಕ ಕಷಾಯ . . .! |

Share

ಸಾಮಾಜಿಕ ಜಾಲತಾಣಗಳು ಎಷ್ಟು ಕೆಟ್ಟ ಪರಿಣಾಮ‌ ಬೀರುತ್ತವೆಯೋ ಅಷ್ಟೇ ಉಪಯೋಗ ಕೂಡ ಇದೆ. ಒಂದು ಮೊಬೈಲ್, ವಾಟ್ಸ್ ಆಪ್, ಫೇಸ್ ಬುಕ್, ಇನ್ಟಾಗ್ರಾಂ ನಂತ ಸಾಮಾಜಿಕ ಜಾಲ ತಾಣಗಳು ರೈತರಿಂದ ದೂರವಾಗಿದ್ದವು. ಆದರೆ ಈಗ ಹಾಗಲ್ಲ. ರೈತರೂ ಈಗ ಕೃಷಿ ಬಗ್ಗೆ ಒಬ್ಬರಿಂದ ಇನ್ನೊಬ್ಬರಿಗೆ ಹಲವು ವಿಷಯಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಳ್ಳುತ್ತಾರೆ. ಹಲವು ರೈತರ ವಾಟ್ಸ್ ಆಪ್ ಗ್ರೂಪ್ ಗಳಿವೆ. ಏನೇ ವಿಚಾರವಿದ್ದರು ಅದಲ್ಲೇ ಹಂಚಿಕೊಳ್ಳಬಹುದು. ಹೀಗೆ ರೈತರ ಗ್ರೂಪ್ ನಲ್ಲಿ ಒಬ್ಬರು ಹಂಚಿಕೊಂಡ ಅಮೂಲ್ಯ ಮಾಹಿತಿ ಇಲ್ಲಿದೆ.

Advertisement
Advertisement
Advertisement
Advertisement

ಕಳೆ / ಸತ್ತೆ ಇತ್ಯಾದಿ ಹೆಸರುಗಳಿಂದ ಗುರುತಿಸಲ್ಪಡುವ ಕೆಲವು ಗಿಡಗಳು ಕರೆಯದೆ ಬರುವ ನೆಂಟರಂತೆ. ಹಾಗೆಯೇ ಬಂದು ಠಿಕಾಣಿ ಹಾಕುತ್ತವೆ. ಗೊಬ್ಬರ – ನೀರು ಕೊಡದಿದ್ದರೂ ಪರವಾಗಿಲ್ಲ – ತನಗೇನಾಗಲ್ಲ ಎಂಬಂತೆ ಬಿರುಬಿಸಿಲಿನಲ್ಲೂ ನಳನಳಿಸುತ್ತಾ ಓಲಾಡುತ್ತವೆ. ಮೂಲ ಬೆಳೆಗಳೊಂದಿಗೆ ಪ್ರತಿಸ್ಪರ್ಧಿಯಾಗಿ ಬೆಳೆಯುತ್ತವೆ. ಇವನ್ನು ನಿರ್ನಾಮ ಮಾಡಲು ರೈತರು ಕಾರ್ಕೋಟಕ ವಿಷವಾಗಿರುವ ಕಳೆನಾಶಕಗಳನ್ನು ಬಳಸುತ್ತಾರೆ. ಕಳೆಗಳು ಕಣ್ಮರೆಯಾಗುತ್ತವೋ – ಇಲ್ಲವೋ ಗೊತ್ತಿಲ್ಲ. ಆದರೆ ಕಳೆನಾಶಕದ ದುಷ್ಪರಿಣಾಮ ಮಣ್ಣಲ್ಲಿನ ಜೀವಾಣುಗಳ ಮೇಲಂತೂ ನಿರಂತರವಾಗಿ ಆಗುತ್ತಿದೆ.

Advertisement

ಕಳೆಗಿಡಗಳು ಮಣ್ಣಿನ ಆರೋಗ್ಯದ ಸ್ಥಿತಿ – ಗತಿಗಳನ್ನು ತಿಳಿಸುವ ಸೂಚಕಗಳೆಂದು ಸಹಜ ಕೃಷಿಕರು ನಂಬುತ್ತಾರೆ. ನಮ್ಮಲ್ಲಿನ ಮಣ್ಣು ಆರೋಗ್ಯ ಮತ್ತು ಫಲವತ್ತತೆಯಿಂದ ಕೂಡಿದೆಯೆಂಬುದನ್ನೂ ಸಹ ಈ ಕಳೆಗಿಡಗಳು ತೋರಿಸುತ್ತವೆ. ಅಂದರೆ, ನಮ್ಮ ಹೊಲ – ತೋಟ – ಗದ್ದೆ – ತೋಪುಗಳಲ್ಲಿನ ಮಣ್ಣುಗಳಲ್ಲಿ ಏನಾಗುತ್ತಿದೆಯೆಂಬುದನ್ನು ನಮಗೆ ತಿಳಿಸುವ ಸಲುವಾಗಿಯೇ ಈ ಬಗೆಯ ಕಳೆಗಿಡಗಳು ಹುಟ್ಟುತ್ತವೆಯಂತೆ. ಆದ್ದರಿಂದ ಕಳೆಗಿಡಗಳನ್ನು ನೋಡಿದ ತಕ್ಷಣ ಅದನ್ನು ಬುಡಸಮೇತ ಕಿತ್ತೆಸೆಯುವತ್ತ ಚಿಂತಿಸದಿರಿ.

 

Advertisement

ಈ ಮಣ್ಣ ಮೇಲಿನ ಸಕಲ ಜೀವರಾಶಿಗೆ ಅನಗತ್ಯವಾದ ಯಾವುದನ್ನೂ ನಮ್ಮ ನಿಸರ್ಗ ಸೃಷ್ಟಿಸಿಲ್ಲ. ಇದನ್ನು ನಾವು ಒಪ್ಪುವುದಾದರೆ, ಈ ಬಗೆಯ ಗಿಡಗಳೂ ಸಹ ನಮಗೆ ಉಪಯುಕ್ತವೇ ಎಂಬುದನ್ನೂ ಒಪ್ಪಬೇಕಲ್ಲವೆ. ಹಾಗೆಯೇ ಈ ಗಿಡಗಳೂ ಸಹ ಮಣ್ಣಿಂದ ಪೋಷಕಾಂಶಗಳನ್ನು ಹೀರಿಯೇ ಬೆಳೆದಿವೆಯಲ್ಲವೇ. . . ಈ ಗಿಡಗಳ ಪ್ರತಿಯೊಂದು ಭಾಗದಲ್ಲೂ ಪೋಷಕಾಂಶಗಳು ಅಡಗಿರುವಾಗ, ಈ ಗಿಡಗಳನ್ನು ಕಿತ್ತು ಸುಡುವುದಾಗಲೀ – ಇದನ್ನು ನಿರ್ನಾಮ ಮಾಡುವ ಕಳೆನಾಶಕಗಳನ್ನು ಬಳಸುವುದಾಗಲೀ ಮಾಡಿದಾಗ, ಪೋಷಕಾಂಶಗಳೂ ಸಹ ನಾಶವಾಗುತ್ತವೆ.

ಕಳೆಗಿಡಗಳನ್ನು ಉಪಯುಕ್ತವಾಗಿ ಬಳಸಲು ಹಲವು ವಿಧಾನಗಳಿವೆ. ಅವುಗಳಲ್ಲಿ ಒಂದು ಕಳೆಗಿಡಗಳ ಚಹಾ ಅಂದರೆ Weed Tea. ಇದೊಂದು ದ್ರವರೂಪೀ ಗೊಬ್ಬರ.

Advertisement

1. ಒಂದು ನಿರ್ದಿಷ್ಟ ಪ್ರದೇಶದಲ್ಲಿನ ಕಳೆಗಿಡಗಳನ್ನು – ಅದರೆ ಎಲೆ ಮತ್ತು ಕಾಂಡ ಭಾಗವನ್ನು ಮಾತ್ರ ಕತ್ತರಿಸಿ.
2. ಅದನ್ನು ಇನ್ನಷ್ಟು ಸಣ್ಣಗೆ ಕತ್ತರಿಸಿ, ಒಂದು ಗೋಣೀಚೀಲದಲ್ಲಿ ಹಾಕಿ.
3. ಕಳೆಗಿಡಗಳಿಂದ ತುಂಬಿದ ಗೋಣೀಚೀಲವನ್ನು ಬಿಗಿಯಾಗಿ ಕಟ್ಟಿ , 200 ಲೀಟರ್ ಸಾಮರ್ಥ್ಯದ ಡ್ರಂ ಒಂದರಲ್ಲಿ ಇಡಿ. ಆ ಡ್ರಂ ನ ಮುಕ್ಕಾಲು ಭಾಗ ನೀರು ತುಂಬಿಸಿ.
5. ಗೋಣೀಚೀಲದ ಮೇಲೆ ಭಾರವಾದ ಕಲ್ಲೊಂದನ್ನು ಇಡಿ. ಏಕೆಂದರೆ ನೀರಲ್ಲಿರುವ ಗೋಣೀಚೀಲ ಮೇಲಕ್ಕೆ ತೇಲತೊಡಗುತ್ತದೆ. ಅದನ್ನು ತಪ್ಪಿಸಲು ಭಾರವಾದ ಕಲ್ಲೊಂದನ್ನು ಇಡಬೇಕು.
6. ಡ್ರಂ ಹಾಗೆಯೇ ತೆರೆದಿರಲಿ.
7. ಪ್ರತಿದಿನಾ ಬೆಳಿಗ್ಗೆ ಮತ್ತು ಸಂಜೆ ಡ್ರಂನಲ್ಲಿನ ಕಳೆಗಿಡಗಳನ್ನು ತುಂಬಿರುವ ಗೋಣೀಚೀಲವನ್ನು ಕೋಲೊಂದರಿಂದ ಚುಚ್ಚಿ. ಹೀಗೆ ಮಾಡುವಾಗ, ಗೋಣೀಚೀಲದೊಳಗಿರುವ ಕಳೆಗಿಡಗಳಲ್ಲಿನ ಸಾರ ನೀರಲ್ಲಿ ನಿಧಾನವಾಗಿ ಬೆರೆಯುತ್ತದೆ. ನೀರಿನ ಬಣ್ನವೂ ಕ್ರಮೇಣ ಕಪ್ಪಾಗುತ್ತದೆ.
8. 15 ದಿನಗಳ ನಂತರ ಈ ನೀರನ್ನು ಎಲ್ಲಿಂದ ಕಳೆಗಿಡಗಳನ್ನು ಸಂಗ್ರಹಿಸಿದೆವೋ, ಅಲ್ಲಿನ ಮಣ್ಣ ಮೇಲೆ ಹಾಕಿ ಮಣ್ಣು ನೇರಬಿಸಿಲಿಗೆ ತಾಗದಂತೆ ಹೊದಿಕೆ ಮಾಡಿ.
9. ಕಳೆಗಿಡಗಳಲ್ಲಿನ ಹಲವು ಬಗೆಯ ಪೋಷಕಾಂಶಗಳು ಮಣ್ಣಿಗೆ ಸೇರಿ ಮಣ್ಣಿನ ತಾಕತ್ತು ಹೆಚ್ಚುತ್ತದೆ. ಮಣ್ಣಲ್ಲಿ ಜೀವಾಣುಗಳ ಸಂಖ್ಯೆ ಹೆಚ್ಚಾಗುತ್ತದೆ. ಆ ಮಣ್ಣಲ್ಲಿ ಬೆಳೆಯುವ ಗಿಡಗಳು ಆರೋಗ್ಯವಾಗಿರುತ್ತವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |

ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…

2 hours ago

ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |

ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…

2 hours ago

ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…

3 hours ago

ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |

ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…

3 hours ago

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

17 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

17 hours ago