ಮಾಹಿತಿ

ಮಣ್ಣುಜೀವಿಗಳಿಗೂ ಹರ್ಬಲ್ ಟೀ….| ಕಳೆಗಿಡಗಳಿಂದಲೇ ತಯಾರಿಸಬಹುದು ಪೌಷ್ಟಿಕ ಕಷಾಯ . . .! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಾಮಾಜಿಕ ಜಾಲತಾಣಗಳು ಎಷ್ಟು ಕೆಟ್ಟ ಪರಿಣಾಮ‌ ಬೀರುತ್ತವೆಯೋ ಅಷ್ಟೇ ಉಪಯೋಗ ಕೂಡ ಇದೆ. ಒಂದು ಮೊಬೈಲ್, ವಾಟ್ಸ್ ಆಪ್, ಫೇಸ್ ಬುಕ್, ಇನ್ಟಾಗ್ರಾಂ ನಂತ ಸಾಮಾಜಿಕ ಜಾಲ ತಾಣಗಳು ರೈತರಿಂದ ದೂರವಾಗಿದ್ದವು. ಆದರೆ ಈಗ ಹಾಗಲ್ಲ. ರೈತರೂ ಈಗ ಕೃಷಿ ಬಗ್ಗೆ ಒಬ್ಬರಿಂದ ಇನ್ನೊಬ್ಬರಿಗೆ ಹಲವು ವಿಷಯಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಳ್ಳುತ್ತಾರೆ. ಹಲವು ರೈತರ ವಾಟ್ಸ್ ಆಪ್ ಗ್ರೂಪ್ ಗಳಿವೆ. ಏನೇ ವಿಚಾರವಿದ್ದರು ಅದಲ್ಲೇ ಹಂಚಿಕೊಳ್ಳಬಹುದು. ಹೀಗೆ ರೈತರ ಗ್ರೂಪ್ ನಲ್ಲಿ ಒಬ್ಬರು ಹಂಚಿಕೊಂಡ ಅಮೂಲ್ಯ ಮಾಹಿತಿ ಇಲ್ಲಿದೆ.

Advertisement

ಕಳೆ / ಸತ್ತೆ ಇತ್ಯಾದಿ ಹೆಸರುಗಳಿಂದ ಗುರುತಿಸಲ್ಪಡುವ ಕೆಲವು ಗಿಡಗಳು ಕರೆಯದೆ ಬರುವ ನೆಂಟರಂತೆ. ಹಾಗೆಯೇ ಬಂದು ಠಿಕಾಣಿ ಹಾಕುತ್ತವೆ. ಗೊಬ್ಬರ – ನೀರು ಕೊಡದಿದ್ದರೂ ಪರವಾಗಿಲ್ಲ – ತನಗೇನಾಗಲ್ಲ ಎಂಬಂತೆ ಬಿರುಬಿಸಿಲಿನಲ್ಲೂ ನಳನಳಿಸುತ್ತಾ ಓಲಾಡುತ್ತವೆ. ಮೂಲ ಬೆಳೆಗಳೊಂದಿಗೆ ಪ್ರತಿಸ್ಪರ್ಧಿಯಾಗಿ ಬೆಳೆಯುತ್ತವೆ. ಇವನ್ನು ನಿರ್ನಾಮ ಮಾಡಲು ರೈತರು ಕಾರ್ಕೋಟಕ ವಿಷವಾಗಿರುವ ಕಳೆನಾಶಕಗಳನ್ನು ಬಳಸುತ್ತಾರೆ. ಕಳೆಗಳು ಕಣ್ಮರೆಯಾಗುತ್ತವೋ – ಇಲ್ಲವೋ ಗೊತ್ತಿಲ್ಲ. ಆದರೆ ಕಳೆನಾಶಕದ ದುಷ್ಪರಿಣಾಮ ಮಣ್ಣಲ್ಲಿನ ಜೀವಾಣುಗಳ ಮೇಲಂತೂ ನಿರಂತರವಾಗಿ ಆಗುತ್ತಿದೆ.

ಕಳೆಗಿಡಗಳು ಮಣ್ಣಿನ ಆರೋಗ್ಯದ ಸ್ಥಿತಿ – ಗತಿಗಳನ್ನು ತಿಳಿಸುವ ಸೂಚಕಗಳೆಂದು ಸಹಜ ಕೃಷಿಕರು ನಂಬುತ್ತಾರೆ. ನಮ್ಮಲ್ಲಿನ ಮಣ್ಣು ಆರೋಗ್ಯ ಮತ್ತು ಫಲವತ್ತತೆಯಿಂದ ಕೂಡಿದೆಯೆಂಬುದನ್ನೂ ಸಹ ಈ ಕಳೆಗಿಡಗಳು ತೋರಿಸುತ್ತವೆ. ಅಂದರೆ, ನಮ್ಮ ಹೊಲ – ತೋಟ – ಗದ್ದೆ – ತೋಪುಗಳಲ್ಲಿನ ಮಣ್ಣುಗಳಲ್ಲಿ ಏನಾಗುತ್ತಿದೆಯೆಂಬುದನ್ನು ನಮಗೆ ತಿಳಿಸುವ ಸಲುವಾಗಿಯೇ ಈ ಬಗೆಯ ಕಳೆಗಿಡಗಳು ಹುಟ್ಟುತ್ತವೆಯಂತೆ. ಆದ್ದರಿಂದ ಕಳೆಗಿಡಗಳನ್ನು ನೋಡಿದ ತಕ್ಷಣ ಅದನ್ನು ಬುಡಸಮೇತ ಕಿತ್ತೆಸೆಯುವತ್ತ ಚಿಂತಿಸದಿರಿ.

 

ಈ ಮಣ್ಣ ಮೇಲಿನ ಸಕಲ ಜೀವರಾಶಿಗೆ ಅನಗತ್ಯವಾದ ಯಾವುದನ್ನೂ ನಮ್ಮ ನಿಸರ್ಗ ಸೃಷ್ಟಿಸಿಲ್ಲ. ಇದನ್ನು ನಾವು ಒಪ್ಪುವುದಾದರೆ, ಈ ಬಗೆಯ ಗಿಡಗಳೂ ಸಹ ನಮಗೆ ಉಪಯುಕ್ತವೇ ಎಂಬುದನ್ನೂ ಒಪ್ಪಬೇಕಲ್ಲವೆ. ಹಾಗೆಯೇ ಈ ಗಿಡಗಳೂ ಸಹ ಮಣ್ಣಿಂದ ಪೋಷಕಾಂಶಗಳನ್ನು ಹೀರಿಯೇ ಬೆಳೆದಿವೆಯಲ್ಲವೇ. . . ಈ ಗಿಡಗಳ ಪ್ರತಿಯೊಂದು ಭಾಗದಲ್ಲೂ ಪೋಷಕಾಂಶಗಳು ಅಡಗಿರುವಾಗ, ಈ ಗಿಡಗಳನ್ನು ಕಿತ್ತು ಸುಡುವುದಾಗಲೀ – ಇದನ್ನು ನಿರ್ನಾಮ ಮಾಡುವ ಕಳೆನಾಶಕಗಳನ್ನು ಬಳಸುವುದಾಗಲೀ ಮಾಡಿದಾಗ, ಪೋಷಕಾಂಶಗಳೂ ಸಹ ನಾಶವಾಗುತ್ತವೆ.

ಕಳೆಗಿಡಗಳನ್ನು ಉಪಯುಕ್ತವಾಗಿ ಬಳಸಲು ಹಲವು ವಿಧಾನಗಳಿವೆ. ಅವುಗಳಲ್ಲಿ ಒಂದು ಕಳೆಗಿಡಗಳ ಚಹಾ ಅಂದರೆ Weed Tea. ಇದೊಂದು ದ್ರವರೂಪೀ ಗೊಬ್ಬರ.

1. ಒಂದು ನಿರ್ದಿಷ್ಟ ಪ್ರದೇಶದಲ್ಲಿನ ಕಳೆಗಿಡಗಳನ್ನು – ಅದರೆ ಎಲೆ ಮತ್ತು ಕಾಂಡ ಭಾಗವನ್ನು ಮಾತ್ರ ಕತ್ತರಿಸಿ.
2. ಅದನ್ನು ಇನ್ನಷ್ಟು ಸಣ್ಣಗೆ ಕತ್ತರಿಸಿ, ಒಂದು ಗೋಣೀಚೀಲದಲ್ಲಿ ಹಾಕಿ.
3. ಕಳೆಗಿಡಗಳಿಂದ ತುಂಬಿದ ಗೋಣೀಚೀಲವನ್ನು ಬಿಗಿಯಾಗಿ ಕಟ್ಟಿ , 200 ಲೀಟರ್ ಸಾಮರ್ಥ್ಯದ ಡ್ರಂ ಒಂದರಲ್ಲಿ ಇಡಿ. ಆ ಡ್ರಂ ನ ಮುಕ್ಕಾಲು ಭಾಗ ನೀರು ತುಂಬಿಸಿ.
5. ಗೋಣೀಚೀಲದ ಮೇಲೆ ಭಾರವಾದ ಕಲ್ಲೊಂದನ್ನು ಇಡಿ. ಏಕೆಂದರೆ ನೀರಲ್ಲಿರುವ ಗೋಣೀಚೀಲ ಮೇಲಕ್ಕೆ ತೇಲತೊಡಗುತ್ತದೆ. ಅದನ್ನು ತಪ್ಪಿಸಲು ಭಾರವಾದ ಕಲ್ಲೊಂದನ್ನು ಇಡಬೇಕು.
6. ಡ್ರಂ ಹಾಗೆಯೇ ತೆರೆದಿರಲಿ.
7. ಪ್ರತಿದಿನಾ ಬೆಳಿಗ್ಗೆ ಮತ್ತು ಸಂಜೆ ಡ್ರಂನಲ್ಲಿನ ಕಳೆಗಿಡಗಳನ್ನು ತುಂಬಿರುವ ಗೋಣೀಚೀಲವನ್ನು ಕೋಲೊಂದರಿಂದ ಚುಚ್ಚಿ. ಹೀಗೆ ಮಾಡುವಾಗ, ಗೋಣೀಚೀಲದೊಳಗಿರುವ ಕಳೆಗಿಡಗಳಲ್ಲಿನ ಸಾರ ನೀರಲ್ಲಿ ನಿಧಾನವಾಗಿ ಬೆರೆಯುತ್ತದೆ. ನೀರಿನ ಬಣ್ನವೂ ಕ್ರಮೇಣ ಕಪ್ಪಾಗುತ್ತದೆ.
8. 15 ದಿನಗಳ ನಂತರ ಈ ನೀರನ್ನು ಎಲ್ಲಿಂದ ಕಳೆಗಿಡಗಳನ್ನು ಸಂಗ್ರಹಿಸಿದೆವೋ, ಅಲ್ಲಿನ ಮಣ್ಣ ಮೇಲೆ ಹಾಕಿ ಮಣ್ಣು ನೇರಬಿಸಿಲಿಗೆ ತಾಗದಂತೆ ಹೊದಿಕೆ ಮಾಡಿ.
9. ಕಳೆಗಿಡಗಳಲ್ಲಿನ ಹಲವು ಬಗೆಯ ಪೋಷಕಾಂಶಗಳು ಮಣ್ಣಿಗೆ ಸೇರಿ ಮಣ್ಣಿನ ತಾಕತ್ತು ಹೆಚ್ಚುತ್ತದೆ. ಮಣ್ಣಲ್ಲಿ ಜೀವಾಣುಗಳ ಸಂಖ್ಯೆ ಹೆಚ್ಚಾಗುತ್ತದೆ. ಆ ಮಣ್ಣಲ್ಲಿ ಬೆಳೆಯುವ ಗಿಡಗಳು ಆರೋಗ್ಯವಾಗಿರುತ್ತವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಷ್ಟ್ರೀಯ ಭದ್ರತೆ | ಪ್ರಧಾನಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ | ಹಲವು ವಿಷಯಗಳ ಕುರಿತು ಚರ್ಚೆ

ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಎಲ್ಲಾ…

10 hours ago

ರಾಜ್ಯದ 6 ಜಿಲ್ಲೆಗಳಲ್ಲಿ ಶೀಥಲೀಕರಣ ಘಟಕ ನಿರ್ಮಾಣ

ರಾಜ್ಯದ 6 ಜಿಲ್ಲೆಗಳಲ್ಲಿ ತೋಟಗಾರಿಕಾ ಬೆಳೆಗಳಿಗೆ ಅನುಕೂಲವಾಗುವಂತೆ ಶೀಥಲೀಕರಣ ಘಟಕಗಳನ್ನು ನಿರ್ಮಿಸಲಾಗುತ್ತಿದೆ ಎಂದು…

11 hours ago

ಕೇಂದ್ರದ ಬೆಂಬಲಕ್ಕಾಗಿ  ವಿಶೇಷ ಜಾಥಾ | ಪಕ್ಷಾತೀತವಾಗಿ  ಬೆಂಬಲ

ದೇಶದ  ಸೈನಿಕರಿಗೆ ಗೌರವ ಸಲ್ಲಿಸಿ  ಕೇಂದ್ರ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ  ನಾಳೆ…

11 hours ago

ಆಪರೇಷನ್ ಸಿಂದೂರ ಕಾರ್ಯಾಚರಣೆ | ಸರ್ವ ಪಕ್ಷಗಳ ಸಭೆಯಲ್ಲಿ ಬೆಂಬಲ |

ಪಹಲ್ಗಾಮ್ ದಾಳಿಗೆ ಪ್ರತ್ಯುತ್ತರವಾಗಿ ಭಾರತವು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಿನ್ನೆಯಷ್ಟೇ ನಡೆಸಿತು. ಇದಕ್ಕೆ…

11 hours ago

ಕೃಷಿಕರ ಪರವಾದ ಬರಹಗಾರರ ಮುಂದಿರುವ ಸವಾಲುಗಳು

ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ…

1 day ago

ಮೇ 13 ರಿಂದ 25 ರವರೆಗೆ ಈ ರಾಶಿಗಳಿಗೆ ಅದೃಷ್ಟ!, ಕೆಲವು ರಾಶಿಗಳಿಗೆ ಕಠಿಣ ಕಾಲ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದು ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago