ಮಾಹಿತಿ

ಮಣ್ಣುಜೀವಿಗಳಿಗೂ ಹರ್ಬಲ್ ಟೀ….| ಕಳೆಗಿಡಗಳಿಂದಲೇ ತಯಾರಿಸಬಹುದು ಪೌಷ್ಟಿಕ ಕಷಾಯ . . .! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಾಮಾಜಿಕ ಜಾಲತಾಣಗಳು ಎಷ್ಟು ಕೆಟ್ಟ ಪರಿಣಾಮ‌ ಬೀರುತ್ತವೆಯೋ ಅಷ್ಟೇ ಉಪಯೋಗ ಕೂಡ ಇದೆ. ಒಂದು ಮೊಬೈಲ್, ವಾಟ್ಸ್ ಆಪ್, ಫೇಸ್ ಬುಕ್, ಇನ್ಟಾಗ್ರಾಂ ನಂತ ಸಾಮಾಜಿಕ ಜಾಲ ತಾಣಗಳು ರೈತರಿಂದ ದೂರವಾಗಿದ್ದವು. ಆದರೆ ಈಗ ಹಾಗಲ್ಲ. ರೈತರೂ ಈಗ ಕೃಷಿ ಬಗ್ಗೆ ಒಬ್ಬರಿಂದ ಇನ್ನೊಬ್ಬರಿಗೆ ಹಲವು ವಿಷಯಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಳ್ಳುತ್ತಾರೆ. ಹಲವು ರೈತರ ವಾಟ್ಸ್ ಆಪ್ ಗ್ರೂಪ್ ಗಳಿವೆ. ಏನೇ ವಿಚಾರವಿದ್ದರು ಅದಲ್ಲೇ ಹಂಚಿಕೊಳ್ಳಬಹುದು. ಹೀಗೆ ರೈತರ ಗ್ರೂಪ್ ನಲ್ಲಿ ಒಬ್ಬರು ಹಂಚಿಕೊಂಡ ಅಮೂಲ್ಯ ಮಾಹಿತಿ ಇಲ್ಲಿದೆ.

Advertisement
Advertisement

ಕಳೆ / ಸತ್ತೆ ಇತ್ಯಾದಿ ಹೆಸರುಗಳಿಂದ ಗುರುತಿಸಲ್ಪಡುವ ಕೆಲವು ಗಿಡಗಳು ಕರೆಯದೆ ಬರುವ ನೆಂಟರಂತೆ. ಹಾಗೆಯೇ ಬಂದು ಠಿಕಾಣಿ ಹಾಕುತ್ತವೆ. ಗೊಬ್ಬರ – ನೀರು ಕೊಡದಿದ್ದರೂ ಪರವಾಗಿಲ್ಲ – ತನಗೇನಾಗಲ್ಲ ಎಂಬಂತೆ ಬಿರುಬಿಸಿಲಿನಲ್ಲೂ ನಳನಳಿಸುತ್ತಾ ಓಲಾಡುತ್ತವೆ. ಮೂಲ ಬೆಳೆಗಳೊಂದಿಗೆ ಪ್ರತಿಸ್ಪರ್ಧಿಯಾಗಿ ಬೆಳೆಯುತ್ತವೆ. ಇವನ್ನು ನಿರ್ನಾಮ ಮಾಡಲು ರೈತರು ಕಾರ್ಕೋಟಕ ವಿಷವಾಗಿರುವ ಕಳೆನಾಶಕಗಳನ್ನು ಬಳಸುತ್ತಾರೆ. ಕಳೆಗಳು ಕಣ್ಮರೆಯಾಗುತ್ತವೋ – ಇಲ್ಲವೋ ಗೊತ್ತಿಲ್ಲ. ಆದರೆ ಕಳೆನಾಶಕದ ದುಷ್ಪರಿಣಾಮ ಮಣ್ಣಲ್ಲಿನ ಜೀವಾಣುಗಳ ಮೇಲಂತೂ ನಿರಂತರವಾಗಿ ಆಗುತ್ತಿದೆ.

ಕಳೆಗಿಡಗಳು ಮಣ್ಣಿನ ಆರೋಗ್ಯದ ಸ್ಥಿತಿ – ಗತಿಗಳನ್ನು ತಿಳಿಸುವ ಸೂಚಕಗಳೆಂದು ಸಹಜ ಕೃಷಿಕರು ನಂಬುತ್ತಾರೆ. ನಮ್ಮಲ್ಲಿನ ಮಣ್ಣು ಆರೋಗ್ಯ ಮತ್ತು ಫಲವತ್ತತೆಯಿಂದ ಕೂಡಿದೆಯೆಂಬುದನ್ನೂ ಸಹ ಈ ಕಳೆಗಿಡಗಳು ತೋರಿಸುತ್ತವೆ. ಅಂದರೆ, ನಮ್ಮ ಹೊಲ – ತೋಟ – ಗದ್ದೆ – ತೋಪುಗಳಲ್ಲಿನ ಮಣ್ಣುಗಳಲ್ಲಿ ಏನಾಗುತ್ತಿದೆಯೆಂಬುದನ್ನು ನಮಗೆ ತಿಳಿಸುವ ಸಲುವಾಗಿಯೇ ಈ ಬಗೆಯ ಕಳೆಗಿಡಗಳು ಹುಟ್ಟುತ್ತವೆಯಂತೆ. ಆದ್ದರಿಂದ ಕಳೆಗಿಡಗಳನ್ನು ನೋಡಿದ ತಕ್ಷಣ ಅದನ್ನು ಬುಡಸಮೇತ ಕಿತ್ತೆಸೆಯುವತ್ತ ಚಿಂತಿಸದಿರಿ.

 

ಈ ಮಣ್ಣ ಮೇಲಿನ ಸಕಲ ಜೀವರಾಶಿಗೆ ಅನಗತ್ಯವಾದ ಯಾವುದನ್ನೂ ನಮ್ಮ ನಿಸರ್ಗ ಸೃಷ್ಟಿಸಿಲ್ಲ. ಇದನ್ನು ನಾವು ಒಪ್ಪುವುದಾದರೆ, ಈ ಬಗೆಯ ಗಿಡಗಳೂ ಸಹ ನಮಗೆ ಉಪಯುಕ್ತವೇ ಎಂಬುದನ್ನೂ ಒಪ್ಪಬೇಕಲ್ಲವೆ. ಹಾಗೆಯೇ ಈ ಗಿಡಗಳೂ ಸಹ ಮಣ್ಣಿಂದ ಪೋಷಕಾಂಶಗಳನ್ನು ಹೀರಿಯೇ ಬೆಳೆದಿವೆಯಲ್ಲವೇ. . . ಈ ಗಿಡಗಳ ಪ್ರತಿಯೊಂದು ಭಾಗದಲ್ಲೂ ಪೋಷಕಾಂಶಗಳು ಅಡಗಿರುವಾಗ, ಈ ಗಿಡಗಳನ್ನು ಕಿತ್ತು ಸುಡುವುದಾಗಲೀ – ಇದನ್ನು ನಿರ್ನಾಮ ಮಾಡುವ ಕಳೆನಾಶಕಗಳನ್ನು ಬಳಸುವುದಾಗಲೀ ಮಾಡಿದಾಗ, ಪೋಷಕಾಂಶಗಳೂ ಸಹ ನಾಶವಾಗುತ್ತವೆ.

Advertisement

ಕಳೆಗಿಡಗಳನ್ನು ಉಪಯುಕ್ತವಾಗಿ ಬಳಸಲು ಹಲವು ವಿಧಾನಗಳಿವೆ. ಅವುಗಳಲ್ಲಿ ಒಂದು ಕಳೆಗಿಡಗಳ ಚಹಾ ಅಂದರೆ Weed Tea. ಇದೊಂದು ದ್ರವರೂಪೀ ಗೊಬ್ಬರ.

1. ಒಂದು ನಿರ್ದಿಷ್ಟ ಪ್ರದೇಶದಲ್ಲಿನ ಕಳೆಗಿಡಗಳನ್ನು – ಅದರೆ ಎಲೆ ಮತ್ತು ಕಾಂಡ ಭಾಗವನ್ನು ಮಾತ್ರ ಕತ್ತರಿಸಿ.
2. ಅದನ್ನು ಇನ್ನಷ್ಟು ಸಣ್ಣಗೆ ಕತ್ತರಿಸಿ, ಒಂದು ಗೋಣೀಚೀಲದಲ್ಲಿ ಹಾಕಿ.
3. ಕಳೆಗಿಡಗಳಿಂದ ತುಂಬಿದ ಗೋಣೀಚೀಲವನ್ನು ಬಿಗಿಯಾಗಿ ಕಟ್ಟಿ , 200 ಲೀಟರ್ ಸಾಮರ್ಥ್ಯದ ಡ್ರಂ ಒಂದರಲ್ಲಿ ಇಡಿ. ಆ ಡ್ರಂ ನ ಮುಕ್ಕಾಲು ಭಾಗ ನೀರು ತುಂಬಿಸಿ.
5. ಗೋಣೀಚೀಲದ ಮೇಲೆ ಭಾರವಾದ ಕಲ್ಲೊಂದನ್ನು ಇಡಿ. ಏಕೆಂದರೆ ನೀರಲ್ಲಿರುವ ಗೋಣೀಚೀಲ ಮೇಲಕ್ಕೆ ತೇಲತೊಡಗುತ್ತದೆ. ಅದನ್ನು ತಪ್ಪಿಸಲು ಭಾರವಾದ ಕಲ್ಲೊಂದನ್ನು ಇಡಬೇಕು.
6. ಡ್ರಂ ಹಾಗೆಯೇ ತೆರೆದಿರಲಿ.
7. ಪ್ರತಿದಿನಾ ಬೆಳಿಗ್ಗೆ ಮತ್ತು ಸಂಜೆ ಡ್ರಂನಲ್ಲಿನ ಕಳೆಗಿಡಗಳನ್ನು ತುಂಬಿರುವ ಗೋಣೀಚೀಲವನ್ನು ಕೋಲೊಂದರಿಂದ ಚುಚ್ಚಿ. ಹೀಗೆ ಮಾಡುವಾಗ, ಗೋಣೀಚೀಲದೊಳಗಿರುವ ಕಳೆಗಿಡಗಳಲ್ಲಿನ ಸಾರ ನೀರಲ್ಲಿ ನಿಧಾನವಾಗಿ ಬೆರೆಯುತ್ತದೆ. ನೀರಿನ ಬಣ್ನವೂ ಕ್ರಮೇಣ ಕಪ್ಪಾಗುತ್ತದೆ.
8. 15 ದಿನಗಳ ನಂತರ ಈ ನೀರನ್ನು ಎಲ್ಲಿಂದ ಕಳೆಗಿಡಗಳನ್ನು ಸಂಗ್ರಹಿಸಿದೆವೋ, ಅಲ್ಲಿನ ಮಣ್ಣ ಮೇಲೆ ಹಾಕಿ ಮಣ್ಣು ನೇರಬಿಸಿಲಿಗೆ ತಾಗದಂತೆ ಹೊದಿಕೆ ಮಾಡಿ.
9. ಕಳೆಗಿಡಗಳಲ್ಲಿನ ಹಲವು ಬಗೆಯ ಪೋಷಕಾಂಶಗಳು ಮಣ್ಣಿಗೆ ಸೇರಿ ಮಣ್ಣಿನ ತಾಕತ್ತು ಹೆಚ್ಚುತ್ತದೆ. ಮಣ್ಣಲ್ಲಿ ಜೀವಾಣುಗಳ ಸಂಖ್ಯೆ ಹೆಚ್ಚಾಗುತ್ತದೆ. ಆ ಮಣ್ಣಲ್ಲಿ ಬೆಳೆಯುವ ಗಿಡಗಳು ಆರೋಗ್ಯವಾಗಿರುತ್ತವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…

2 hours ago

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

12 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

14 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

14 hours ago

ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…

14 hours ago