ಸುದ್ದಿಗಳು

ಇನ್ನು 20 ವರ್ಷದಲ್ಲಿ ಆಕಾಶದಲ್ಲಿ ನಕ್ಷತ್ರಗಳೇ ಇರಲ್ವಂತೆ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಆಗಸದಲ್ಲಿ ಚಂದಿರನನ್ನು ನೋಡುವಂತೆಯೇ ನಕ್ಷತ್ರಗಳು, ನಕ್ಷತ್ರ ಪುಂಜಗಳು ಬಹು ಆಕರ್ಷವಾಗಿರುತ್ತವೆ. ಆಕಾಶ ವೀಕ್ಷಣೆ ಮಾಡುವ ಅನೇಕರಿಗೆ ನಕ್ಷತ್ರಗಳು ಹಾಗೂ ಅವುಗಳ ಚಲನೆಯ ಬಹು ಆಸಕ್ತಿಯ ವಿಷಯ. ಆದರೆ ಹೆಚ್ಚುತ್ತಿರುವ ಬೆಳಕಿನ ಮಾಲಿನ್ಯದ ಕಾರಣದಿಂದ ಮುಂದಿನ 20 ವರ್ಷಗಳಲ್ಲಿ ಆಕಾಶದಲ್ಲಿ  ನಕ್ಷತ್ರಗಳು ಗೋಚರವಾಗುವುದಿಲ್ಲ ಎಂದು ವಿಜ್ಞಾನಿಗಳ ಕಳವಳ ವ್ಯಕ್ತಪಡಿಸಿದ್ದಾರೆ.

Advertisement
Advertisement

ನಕ್ಷತ್ರವೊಂದು ಹುಟ್ಟುವುದು ಅನೇಕ ಸಹಸ್ರ ಸಂವತ್ಸರಗಳ ಕ್ರಿಯೆ. ಈ ಕ್ರಿಯೆ ಕೆಲವೇ ಹಂತಗಳಲ್ಲಿ ಸಾಗುತ್ತವೆ. ಸೂರ್ಯನೇ ಭೂಮಿಗೆ ಹತ್ತಿರದ ನಕ್ಷತ್ರ. ಅದು ಒಂದು ಮಧ್ಯಮ ಗಾತ್ರದ ತಾರೆ ತನ್ನ ಗುರುತ್ವದಿಂದಲೇ ಒಟ್ಟುಗೂಡಿದ ಪ್ಲಾಸ್ಮಾದ ಹೊಳೆಯುವ ಗೋಳ. ಇತರ ಅನೇಕ ನಕ್ಷತ್ರಗಳು ಭೂಮಿಯಿಂದ ಬರಿಗಣ್ಣಿಗೆ ರಾತ್ರಿ ಸಮಯದಲ್ಲಿ ಅಪಾರ ವೇಗದ ಚಲನೆ ಇದ್ದರೂ ಹೊಳೆಯುವ ಆಕಾಶದಲ್ಲಿ ಸ್ಥಿರ ಬಂದುಗಳಂತೆ ಕಾಣಿಸುತ್ತವೆ. ಕಾರಣ ಅವು ಭೂಮಿಯಿಂದ ಅಪಾರ ದೂರ ಇವೆ.  

ಈಗ ನಕ್ಷತ್ರಗಳು ಆಕಾಶದ  ಸೌಂದರ್ಯದ ಪ್ರತೀಕ. ರಾತ್ರಿಯ ವೇಳೆ ಆಕಾಶ ದಿಟ್ಟಿಸಿ ನೋಡುತ್ತಾ ಆಕಾಶದಲ್ಲಿನ ನಕ್ಷತ್ರ ಎಣಿಸುವ ಸಂತೋಷವೇ ಬೇರೆ. ಆದರೆ ಮುಂದಿನ ದಿನಗಳಲ್ಲಿ ಆಕಾಶದಲ್ಲಿ ನಕ್ಷತ್ರಗಳ ಗೋಚರ ಅಸಾಧ್ಯ, ಆ ಸಂತೋಷ ಅಲ್ಪ ವರ್ಷಗಳು ಎಂದು ಹೇಳುತ್ತಿರುವ ವಿಜ್ಞಾನಿಗಳು ಇದಕ್ಕೆಲ್ಲಾ ಕಾರಣ ಬೆಳಕಿನ ಮಾಲಿನ್ಯ ಎಂಬ ಕಾರಣವನ್ನು ನೀಡಿದ್ದಾರೆ. ಬೆಳಕಿನ ಮಾಲಿನ್ಯದಿಂದಾಗಿ ಕೇವಲ 20 ವರ್ಷಗಳು ಮಾತ್ರ ಆಕಾಶದಲ್ಲಿ ನಕ್ಷತ್ರಗಳು ಗೋಚರಿಸುತ್ತವೆ. ನಂತರ ನಕ್ಷತ್ರಗಳು ನಾಶವಾಗಲಿವೆ ಎಂದು ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ದ ಗಾರ್ಡಿಯನ್ ಗೆ ನೀಡಿದ  ಸಂದರ್ಶನವೊಂದರಲ್ಲಿ ಮಾತನಾಡಿದ ಬ್ರಿಟಿಷ್‌ ಖಗೋಳಶಾಸ್ತ್ರಜ್ಞ, ರಾಯಲ್‌ ಮಾರ್ಟಿನ್‌ ರೀಸ್‌  ‘ಕಳೆದ ಹಲಾವರು ವರ್ಷಗಳಲ್ಲಿ ಬೆಳಕಿನ ಮಾಲಿನ್ಯವು ತೀವ್ರವಾಗಿದೆ. 2016 ರಿಂದ ಕ್ಷೀರಪಥವು ಪ್ರಪಂಚದ ಮೂರನೇ ಒಂದು ಭಾಗದಷ್ಟುಜನರಿಗೆ ಗೋಚರವಾಗುವುದಿಲ್ಲ ಎಂದು ಖಗೋಳಶಾಸ್ತ್ರಜ್ಞರು ವರದಿ ಮಾಡಿದ್ದರು. ಮುಂದಿನ ಪೀಳಿಗೆಯ ಮಕ್ಕಳು ರಾತ್ರಿ ಆಕಾಶವನ್ನು ಅದರ ಪ್ರಕಾಶತೆ ಮತ್ತು ನಕ್ಷತ್ರಗಳನ್ನು ನೋಡಲು ಸಾಧ್ಯವಿಲ್ಲ ಎಂಬುದು ಗಂಭೀರ ವಿಷಯವಾಗಿದೆ’ ಎಂದಿದ್ದಾರೆ. ಈ ಬೆಳಕಿನ ಮಾಲಿನ್ಯವು ನಗರ ಪ್ರದೇಶಗಳಿಗೆ ಹೋಲಿಸಿದರೆ ಗ್ರಾಮೀಣ ಪ್ರದೇಶದಲ್ಲಿ ಕಡಿಮೆ ಪ್ರಮಾಣದಲ್ಲಿದೆ ಎಂದಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

10 hours ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

10 hours ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

11 hours ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

11 hours ago

ನಾಡಿನೆಲ್ಲೆಡೆ ನಾಗರಪಂಚಮಿ ಸಂಭ್ರಮ | ಸುಬ್ರಹ್ಮಣ್ಯ ಕ್ಷೇತ್ರಗಳಲ್ಲಿ ವಿಶೇಷ ಪೂಜೆ

ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…

11 hours ago

ಕೊಪ್ಪಳ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ | ರಸಗೊಬ್ಬರಕ್ಕೆ ಆತಂಕ ಪಡುವ ಅಗತ್ಯವಿಲ್ಲ

ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…

11 hours ago