Advertisement
ಸುದ್ದಿಗಳು

ಇನ್ನು 20 ವರ್ಷದಲ್ಲಿ ಆಕಾಶದಲ್ಲಿ ನಕ್ಷತ್ರಗಳೇ ಇರಲ್ವಂತೆ…!

Share

ಆಗಸದಲ್ಲಿ ಚಂದಿರನನ್ನು ನೋಡುವಂತೆಯೇ ನಕ್ಷತ್ರಗಳು, ನಕ್ಷತ್ರ ಪುಂಜಗಳು ಬಹು ಆಕರ್ಷವಾಗಿರುತ್ತವೆ. ಆಕಾಶ ವೀಕ್ಷಣೆ ಮಾಡುವ ಅನೇಕರಿಗೆ ನಕ್ಷತ್ರಗಳು ಹಾಗೂ ಅವುಗಳ ಚಲನೆಯ ಬಹು ಆಸಕ್ತಿಯ ವಿಷಯ. ಆದರೆ ಹೆಚ್ಚುತ್ತಿರುವ ಬೆಳಕಿನ ಮಾಲಿನ್ಯದ ಕಾರಣದಿಂದ ಮುಂದಿನ 20 ವರ್ಷಗಳಲ್ಲಿ ಆಕಾಶದಲ್ಲಿ  ನಕ್ಷತ್ರಗಳು ಗೋಚರವಾಗುವುದಿಲ್ಲ ಎಂದು ವಿಜ್ಞಾನಿಗಳ ಕಳವಳ ವ್ಯಕ್ತಪಡಿಸಿದ್ದಾರೆ.

ನಕ್ಷತ್ರವೊಂದು ಹುಟ್ಟುವುದು ಅನೇಕ ಸಹಸ್ರ ಸಂವತ್ಸರಗಳ ಕ್ರಿಯೆ. ಈ ಕ್ರಿಯೆ ಕೆಲವೇ ಹಂತಗಳಲ್ಲಿ ಸಾಗುತ್ತವೆ. ಸೂರ್ಯನೇ ಭೂಮಿಗೆ ಹತ್ತಿರದ ನಕ್ಷತ್ರ. ಅದು ಒಂದು ಮಧ್ಯಮ ಗಾತ್ರದ ತಾರೆ ತನ್ನ ಗುರುತ್ವದಿಂದಲೇ ಒಟ್ಟುಗೂಡಿದ ಪ್ಲಾಸ್ಮಾದ ಹೊಳೆಯುವ ಗೋಳ. ಇತರ ಅನೇಕ ನಕ್ಷತ್ರಗಳು ಭೂಮಿಯಿಂದ ಬರಿಗಣ್ಣಿಗೆ ರಾತ್ರಿ ಸಮಯದಲ್ಲಿ ಅಪಾರ ವೇಗದ ಚಲನೆ ಇದ್ದರೂ ಹೊಳೆಯುವ ಆಕಾಶದಲ್ಲಿ ಸ್ಥಿರ ಬಂದುಗಳಂತೆ ಕಾಣಿಸುತ್ತವೆ. ಕಾರಣ ಅವು ಭೂಮಿಯಿಂದ ಅಪಾರ ದೂರ ಇವೆ.  

ಈಗ ನಕ್ಷತ್ರಗಳು ಆಕಾಶದ  ಸೌಂದರ್ಯದ ಪ್ರತೀಕ. ರಾತ್ರಿಯ ವೇಳೆ ಆಕಾಶ ದಿಟ್ಟಿಸಿ ನೋಡುತ್ತಾ ಆಕಾಶದಲ್ಲಿನ ನಕ್ಷತ್ರ ಎಣಿಸುವ ಸಂತೋಷವೇ ಬೇರೆ. ಆದರೆ ಮುಂದಿನ ದಿನಗಳಲ್ಲಿ ಆಕಾಶದಲ್ಲಿ ನಕ್ಷತ್ರಗಳ ಗೋಚರ ಅಸಾಧ್ಯ, ಆ ಸಂತೋಷ ಅಲ್ಪ ವರ್ಷಗಳು ಎಂದು ಹೇಳುತ್ತಿರುವ ವಿಜ್ಞಾನಿಗಳು ಇದಕ್ಕೆಲ್ಲಾ ಕಾರಣ ಬೆಳಕಿನ ಮಾಲಿನ್ಯ ಎಂಬ ಕಾರಣವನ್ನು ನೀಡಿದ್ದಾರೆ. ಬೆಳಕಿನ ಮಾಲಿನ್ಯದಿಂದಾಗಿ ಕೇವಲ 20 ವರ್ಷಗಳು ಮಾತ್ರ ಆಕಾಶದಲ್ಲಿ ನಕ್ಷತ್ರಗಳು ಗೋಚರಿಸುತ್ತವೆ. ನಂತರ ನಕ್ಷತ್ರಗಳು ನಾಶವಾಗಲಿವೆ ಎಂದು ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ದ ಗಾರ್ಡಿಯನ್ ಗೆ ನೀಡಿದ  ಸಂದರ್ಶನವೊಂದರಲ್ಲಿ ಮಾತನಾಡಿದ ಬ್ರಿಟಿಷ್‌ ಖಗೋಳಶಾಸ್ತ್ರಜ್ಞ, ರಾಯಲ್‌ ಮಾರ್ಟಿನ್‌ ರೀಸ್‌  ‘ಕಳೆದ ಹಲಾವರು ವರ್ಷಗಳಲ್ಲಿ ಬೆಳಕಿನ ಮಾಲಿನ್ಯವು ತೀವ್ರವಾಗಿದೆ. 2016 ರಿಂದ ಕ್ಷೀರಪಥವು ಪ್ರಪಂಚದ ಮೂರನೇ ಒಂದು ಭಾಗದಷ್ಟುಜನರಿಗೆ ಗೋಚರವಾಗುವುದಿಲ್ಲ ಎಂದು ಖಗೋಳಶಾಸ್ತ್ರಜ್ಞರು ವರದಿ ಮಾಡಿದ್ದರು. ಮುಂದಿನ ಪೀಳಿಗೆಯ ಮಕ್ಕಳು ರಾತ್ರಿ ಆಕಾಶವನ್ನು ಅದರ ಪ್ರಕಾಶತೆ ಮತ್ತು ನಕ್ಷತ್ರಗಳನ್ನು ನೋಡಲು ಸಾಧ್ಯವಿಲ್ಲ ಎಂಬುದು ಗಂಭೀರ ವಿಷಯವಾಗಿದೆ’ ಎಂದಿದ್ದಾರೆ. ಈ ಬೆಳಕಿನ ಮಾಲಿನ್ಯವು ನಗರ ಪ್ರದೇಶಗಳಿಗೆ ಹೋಲಿಸಿದರೆ ಗ್ರಾಮೀಣ ಪ್ರದೇಶದಲ್ಲಿ ಕಡಿಮೆ ಪ್ರಮಾಣದಲ್ಲಿದೆ ಎಂದಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

17 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

1 day ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

1 day ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago