ದೇಶದಲ್ಲಿ ಡಾನಾ ಚಂಡಮಾರುತವು ಬಲಗೊಂಡಿದೆ.ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯವು ಚಂಡಮಾರುತಾವಗಿ ಮಾರ್ಪಟ್ಟು ಇದೀಗ ಅಬ್ಬರಿಸುತ್ತಾ ಒಡಿಶಾ ಕರಾವಳಿಯಲ್ಲಿ ಅಪ್ಪಳಿಸುತ್ತಿದೆ. ಒಡಿಶಾ ಸರ್ಕಾರ ಕರಾವಳಿ ಪ್ರದೇಶಗಳ ಜನರನ್ನು ಸ್ಥಳಾಂತರಿಸುವ ಕೆಲಸ ಈಗಾಗಲೇ ಮಾಡಿದೆ. 14 ಜಿಲ್ಲೆಗಳ ಚಂಡಮಾರುತ ಆರ್ಭಟಿಸುವ ಪ್ರದೇಶಗಳಲ್ಲಿ 288 ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತೀವ್ರ ಚಂಡಮಾರುತ ‘ಡಾನಾ’ ನಾಳೆ ತಡರಾತ್ರಿ ಅಥವಾ ಶುಕ್ರವಾರ ಮುಂಜಾನೆ ಒಡಿಶಾ ಕರಾವಳಿಯಲ್ಲಿ ಭೂಸ್ಪರ್ಶ ಉಂಟುಮಾಡುವ ಸಾಧ್ಯತೆಯಿದೆ. ಭೂಕುಸಿತದ ಸಮಯದಲ್ಲಿ ಗಾಳಿಯ ವೇಗ ಗಂಟೆಗೆ 100 ರಿಂದ 120 ಕಿ.ಮೀ. ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಸದ್ಯ ಚಂಡಮಾರುತವು ಒಡಿಶಾ ಕರಾವಳಿಯಿಂದ ಸುಮಾರು 460 ಕಿಮೀ ದೂರದಲ್ಲಿದೆ ಮತ್ತು ಬಂಗಾಳಕೊಲ್ಲಿಯಲ್ಲಿ ಒಡಿಶಾ ಕರಾವಳಿಯ ಕಡೆಗೆ ಗಂಟೆಗೆ 12 ಕಿಮೀ ವೇಗದಲ್ಲಿ ಚಲಿಸುತ್ತಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…