Advertisement
MIRROR FOCUS

5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದು | ಹೈಕೋರ್ಟ್​ ಆದೇಶ

Share

ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿನ  5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿ ಹೈಕೋರ್ಟ್​ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರ 5,8,9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಿಗದಿಪಡಿಸಿತ್ತು. ಸರ್ಕಾರದ ಸುತ್ತೋಲೆಯನ್ನು ಪ್ರಶ್ನಿಸಿ  ಅನುದಾನಿತ ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಅವರು ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಪೀಠ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿದೆ.

2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್​​ ಪರೀಕ್ಷೆ ನಡೆಸಲು ಸರ್ಕಾರ ಆದೇಶಿಸಿತ್ತು. ಹಾಗೇ 11ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸಲು ಅನುಮತಿ ನೀಡಿತ್ತು. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್​ ಮೆಟ್ಟಿಲೇರಿತ್ತು.

ರಾಜ್ಯ ಸರ್ಕಾರದ ಆದೇಶ ನಿರಂತರ ಮತ್ತು ಸಮಗ್ರ ಮೌಲ್ಯಮಾಪನ  ಮಾನದಂಡಗಳಿಗೆ ವಿರುದ್ಧವಾಗಿದೆ ಎಂದು  ಅನುದಾನಿತ ಖಾಸಗಿ ಶಾಲೆಗಳ ಒಕ್ಕೂಟ ನ್ಯಾಯಾಲಯದಲ್ಲಿ ವಾದಿಸಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ  ತೀರ್ಪು ನೀಡಿ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

2 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

2 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

3 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

8 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

11 hours ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

11 hours ago