#HimachalPradesh | ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಗೆ ಹೆದ್ದಾರಿ ಸಂಚಾರ ರದ್ದು | ರಸ್ತೆಯಲ್ಲಿ ಸಿಲುಕಿಕೊಂಡಿವೆ 70೦ಕ್ಕೂ ಹೆಚ್ಚು ವಾಹನಗಳು |

August 22, 2023
2:37 PM
ಇತ್ತೀಚಿನ ಭೂಕುಸಿತದಲ್ಲಿ ಮುಖ್ಯ ಹೆದ್ದಾರಿ ಹಾನಿಗೊಳಗಾದ ನಂತರ ತಾತ್ಕಾಲಿಕ ಸಂಪರ್ಕ ರಸ್ತೆ ನಿರ್ಮಿಸಲಾಗಿದೆ. ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಪಾಂಡೋ ಮತ್ತು 9 ಮೈಲ್‌ಗಳ ನಡುವೆ ವಾಹನಗಳನ್ನು ನಿಲ್ಲಿಸಿದರು. ಕಮಂದ್-ಬಜೌರಾ ರಸ್ತೆ ಮೂಲಕ ವಾಹನ ಸಂಚಾರವನ್ನು ಬದಲಾಯಿಸಲಾಗಿತ್ತು ಎಂದು ಮಂಡಿ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.

ಉತ್ತರ ಬಾರತ ರಾಜ್ಯಗಳಾದ ಹಿಮಾಚಲ ಪ್ರದೇಶ, ಉತ್ತರಖಾಂಡದಲ್ಲಿ ಮಳೆಯ ಅಬ್ಬರ ನಿಲ್ಲುವ ಲಕ್ಷಣಗಳೇ ಗೋಚರಿಸುತ್ತಿಲ್ಲ. ಹಿಮಾಚಲ ಪ್ರದೇಶದಲ್ಲಿ #HimachalPradesh ರಾತ್ರಿ ಸುರಿದ ಭಾರೀ ಮಳೆ#Heavy Rainಯ ನಂತರ ಮಂಗಳವಾರ ಕುಲು-ಮಂಡಿ #KulluMandi ರಾಷ್ಟ್ರೀಯ ಹೆದ್ದಾರಿಯನ್ನು ಪಾಂಡೋಹ್ ಅಣೆಕಟ್ಟಿನ ಬಳಿ ರಸ್ತೆ ನಿರ್ಬಂಧಿಸಲಾಗಿದ್ದು, ಸುಮಾರು 700 ವಾಹನಗಳು ಸಿಲುಕಿಕೊಂಡಿವೆ.

ಇತ್ತೀಚಿನ ಭೂಕುಸಿತದಲ್ಲಿ ಮುಖ್ಯ ಹೆದ್ದಾರಿ ಹಾನಿಗೊಳಗಾದ ನಂತರ ತಾತ್ಕಾಲಿಕ ಸಂಪರ್ಕ ರಸ್ತೆ ನಿರ್ಮಿಸಲಾಗಿದೆ. ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಪಾಂಡೋ ಮತ್ತು 9 ಮೈಲ್‌ಗಳ ನಡುವೆ ವಾಹನಗಳನ್ನು ನಿಲ್ಲಿಸಿದರು. ಕಮಂದ್-ಬಜೌರಾ ರಸ್ತೆ ಮೂಲಕ ವಾಹನ ಸಂಚಾರವನ್ನು ಬದಲಾಯಿಸಲಾಗಿತ್ತು ಎಂದು ಮಂಡಿ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ. ಮಂಡಿ ಜಿಲ್ಲಾಧಿಕಾರಿ ಅರಿಂದಮ್ ಚೌಧರಿ ಅವರು ಮಂಡಿ-ಕುಲು ಹೆದ್ದಾರಿಯನ್ನು ದುರಸ್ತಿ ಮಾಡಲು ಪ್ರತಿದಿನ ಮೂರು ಗಂಟೆಗಳ ಕಾಲ ಸಂಚಾರಕ್ಕೆ ಸ್ಥಗಿತಗೊಳಿಸುವಂತೆ ಆದೇಶಿಸಿದ್ದಾರೆ. ಈ ಮಾನ್ಸೂನ್ ಪ್ರದೇಶದಲ್ಲಿ ಮೇಘಸ್ಫೋಟ ಮತ್ತು ಭೂಕುಸಿತದಿಂದಾಗಿ ಮಂಡಿ-ಕುಲ್ಲು ಹೆದ್ದಾರಿಯು 6-ಮೈಲ್ ಮತ್ತು 9-ಮೈಲುಗಳ ನಡುವೆ ಕೆಟ್ಟದಾಗಿ ಹಾನಿಗೊಳಗಾಗಿದೆ.

ವಿಪತ್ತು ನಿರ್ವಹಣಾ ಪ್ರಾಧಿಕಾರದ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಪ್ರಕಾರ, ರಾಜ್ಯದಲ್ಲಿ ಮೂರು ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 280 ಕ್ಕೂ ಹೆಚ್ಚು ರಸ್ತೆಗಳನ್ನು ನಿರ್ಬಂಧಿಸಲಾಗಿದೆ. ಮಂಡಿಯಲ್ಲಿ ಗರಿಷ್ಠ 162, ಶಿಮ್ಲಾದಲ್ಲಿ 31 ಮತ್ತು ಕುಲುವಿನಲ್ಲಿ 25 ರಸ್ತೆಗಳನ್ನು ನಿರ್ಬಂಧಿಸಲಾಗಿದೆ. ಸೋಲನ್ ಜಿಲ್ಲೆಯ ಬರೋತಿವಾಲಾ ಪ್ರದೇಶದಲ್ಲಿ, ಮಜ್ರಿ ಗ್ರಾಮದಲ್ಲಿ ಅವರ ಮನೆಗಳಲ್ಲಿ ಬಿರುಕು ಕಾಣಿಸಿಕೊಂಡ ನಂತರ 17 ಕುಟುಂಬಗಳು ನಿರಾಶ್ರಿತರಾಗಿದ್ದಾರೆ.  ಮುಂದಿನ ಮೂರು ದಿನಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಂಗಳವಾರ ರಾಜ್ಯದಾದ್ಯಂತ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದ್ದು, ಬುಧವಾರ ಮತ್ತು ಗುರುವಾರ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ ಎಂದು ಶಿಮ್ಲಾ ಮೆಟ್‌ ಸೆಂಟರ್‌ನ ನಿರ್ದೇಶಕ ಸುರೇಂದರ್‌ ಪಾಲ್‌ ತಿಳಿಸಿದ್ದಾರೆ. ಭಾರೀ ಮಳೆಯಿಂದಾಗಿ ಭೂಕುಸಿತಗಳು ಮತ್ತು ಹಠಾತ್ ಪ್ರವಾಹ ಉಂಟಾಗಬಹುದು. ಇದರಿಂದಾಗಿ ರಸ್ತೆಗಳ ದಿಗ್ಬಂಧನ ಮತ್ತು ಅಗತ್ಯ ಸೇವೆಗಳ ಅಡಚಣೆ ಉಂಟಾಗುತ್ತದೆ. ಭೂಕುಸಿತ ಪೀಡಿತ ಪ್ರದೇಶಗಳಿಂದ ದೂರವಿರಲು ಮತ್ತು ಅನಗತ್ಯ ಪ್ರಯಾಣವನ್ನು ತಪ್ಪಿಸಲು ಜನರಿಗೆ ಸೂಚಿಸಲಾಗಿದೆ.  ಸಾವಿನ ಸಂಖ್ಯೆ 346 ಕ್ಕೆ ಏರಿದ್ದು, 2,216 ಮನೆಗಳು ಹಾನಿಗೊಳಗಾಗಿವೆ ಮತ್ತು 9,819 ಮನೆಗಳು ಭಾಗಶಃ ಹಾನಿಗೊಳಗಾಗಿವೆ.

Source : ANI

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?
August 17, 2026
3:10 PM
by: ಸಾಯಿಶೇಖರ್ ಕರಿಕಳ
₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror