ಹಿಜಾಬ್‌ ವಿವಾದ | ಹೈಕೋರ್ಟ್‌ ಮಹತ್ವದ ತೀರ್ಪು ಪ್ರಕಟ | ಸಮವಸ್ತ್ರ ಧರಿಸುವುದು ಕಡ್ಡಾಯ |

March 15, 2022
10:47 AM

ರಾಜ್ಯಾದ್ಯಂತ ಕಳೆದೆರಡು ತಿಂಗಳಿಂದ ಸಂಘರ್ಷದ ವಾತಾವರಣ ಹುಟ್ಟುಹಾಕಿದ್ದ ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದ ಮಹತ್ವದ ತೀರ್ಪನ್ನು ಮಂಗಳವಾರ  ಕರ್ನಾಟಕ ಹೈಕೋರ್ಟ್ ಪ್ರಕಟಿಸಿದೆ. ಶಾಲೆ ಕಾಲೇಜುಗಳಲ್ಲಿ ಆಯಾ ಕಾಲೇಜು  ನಿರ್ಧರಿಸಿದ ಸಮವಸ್ತ್ರ ಕಡ್ಡಾಯವಾಗಿ ಧರಿಸಬೇಕು ಎಂದು ತೀರ್ಪು ಪ್ರಕಟಿಸಿದೆ. ಸರ್ಕಾರದ ನಿರ್ಧಾರವನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ. ಯಾವುದೇ ಧಾರ್ಮಿಕ ಗುರುತುಗಳನ್ನು ಧರಿಸುವಂತಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ. ಹಿಜಾಬ್‌ ಹಾಗೂ ಕೇಸರಿ ಶಾಲುಗಳನ್ನು ಧರಿಸುವಂತಿಲ್ಲ ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ. ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದ ಪೀಠ ತೀರ್ಪು ಪ್ರಕಟಿಸಿದ್ದಾರೆ.

ಮೂವರು ನ್ಯಾಯಮೂರ್ತಿಗಳೂ ಏಕ ತೀರ್ಪು ಪ್ರಕಟ ಮಾಡಿದ್ದು, ಉಡುಪಿ ಕಾಲೇಜಿಗೆ ನಿರ್ದೇಶನ ನೀಡುವ ಅಗತ್ಯವಿಲ್ಲ ಎಂದು ಹೇಳಿದೆ.  ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆ ಅಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.  ಹಿಜಾಬ್ ನಿರ್ಬಂಧ ವಿಚಾರದಲ್ಲಿ ಕರ್ನಾಟಕದ ಆದೇಶವನ್ನು ಎತ್ತಿಹಿಡಿದ ಹೈಕೋರ್ಟ್ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದೆ. 

ಹಿಬಾಬ್ ವಿವಾದದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಎಲ್ಲರೂ ಪಾಲಿಸಬೇಕು. ಸಮಸ್ತ ಜನರಿಗೆ, ಎಲ್ಲಾ ಸಮುದಾಯದ ನಾಯಕರಿಗೆ, ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ನಾನು ಮನವಿ ಮಾಡುತ್ತೇನೆ. ಎಲ್ಲರೂ ಶಾಂತಿ ಕಾಪಾಡಿ. ಮಕ್ಕಳಿಗೆ ಶಿಕ್ಷಣ ನೀಡಲು ಎಲ್ಲರೂ ಸಹಕಾರ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿದರು.

*

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 26-05-2026 | ಕರ್ನಾಟಕದಲ್ಲಿ ಇನ್ನೂ 2-3 ದಿನ ಗುಡುಗು ಮಳೆ ಸಾಧ್ಯತೆ: ಜೂನ್ 6-8ರೊಳಗೆ ಮುಂಗಾರು ಪ್ರವೇಶ ನಿರೀಕ್ಷೆ
May 26, 2026
4:03 PM
by: ಸಾಯಿಶೇಖರ್ ಕರಿಕಳ
ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror