ವೀಳ್ಯದೆಲೆಯ ಬೆಲೆ ಗಗನಕ್ಕೆ | ಈಗ ನಾಲಿಗೆ ಜೊತೆ ಕಿಸೆನೂ ಕೆಂಪು..! |

March 9, 2023
3:18 PM

ಶುಭ ಸಮಾರಂಭಗಳಿಗೆ ತಾಂಬೂಲ ತುಂಬಾ ಭಾರ..! ವೀಳ್ಯದೆಲೆ ಒಂದು ಕಟ್ಟಿಗೆ ಒಂದುನೂರ ಐವತ್ತು ರೂಗಳಷ್ಟುಏರಿದ ದರ. ಇನ್ನು ದಿನಂಪ್ರತಿ ಎಲೆಅಡಿಕೆ ಹಾಕಿಕೊಳ್ಳುವವರ ನಾಲಿಗೆಗಿಂತ ಕಣ್ಣೇ ಕೆಂಪಾಗಿಸುತ್ತೆ ವೀಳ್ಯದೆಲೆ. ಇನ್ನು ಮುಂಗಾರು ಮಳೆ ಆರಂಭಗೊಳ್ಳುವವರೆಗೂ ದರ ಇಳಿಯುವುದು ಅನುಮಾನವೇ.

ಹೌದು ಸಮಾರಂಭ ಯಾವುದೇ ಇರಲಿ, ಪೂಜಾ ಕಾರ್ಯಕ್ರಮಗಳೇ ಇರಲಿ ವೀಳ್ಯದೆಲೆ ಬೇಕೇಬೇಕು. ಆದರೆ ಈ ವೀಳ್ಯದೆಲೆಯ ಬೆಲೆ ನೋಡಿದರೆ ಮುಗಿಲೆತ್ತರಕ್ಕೇರಿದೆ. ಹತ್ತುರೂಗೆ, ಇಪ್ಪತ್ತು ರೂಪಾಯಿಗಳಿಗೆ ವಿಳ್ಯದೆಲೆ ಕೊಡಿ ಎಂದರೆ ಇಲ್ಲಾ ರೀ..ಬರೋದಿಲ್ಲ, ಯಾಕಪ್ಪಾ ಎಂದರೆ ಸ್ವಾಮಿ ಒಂದು ಕಟ್ಟು ವಿಳ್ಯದೆಲೆ ನೂರೈವತ್ತು ರೂಪಾಯಿ ಎಂದಾಗ ದಿನವೂ ಎಲೆಅಡಿಕೆ ಜಗಿಯುವವರಿಗೆ ಹಾಗೆ ಎಲೆಅಡಿಕೆ ತಲೆಗೆರುತ್ತೆ. ಮಳೆಗಾಲ ಕೊನೆಯಾಗಿ ಚಳಿಗಾಲದ ಆರಂಭದೊತ್ತಿಗೆ ವಿಳ್ಳೆದೆಲೆ ಬಳ್ಳಿಯಲ್ಲಿ(ಅಂಬು) ಚಿಗುರುವುದಿಲ್ಲ. ಈ ಕಾರಣ ವಿಳ್ಳೆದೆಲೆಯ ಬೆಲೆ ಹೆಚ್ಚಾಗುತ್ತಿದೆ. ಜೊತೆಗೆ ಕಳೆದ ಎರಡು ವರ್ಷಗಳಿಂದ ಹೆಚ್ಚು ಮಳೆಯಾಗಿದ್ದು ವಿಳ್ಯದೆಲೆ ತೋಟದಲ್ಲಿ ನೀರು ನಿಂತುಕೊಂಡಿದ್ದರ ಪರಿಣಾಮ, ಸಾಕಷ್ಟು ತಂಗಾಳಿ ಬೀಸಿರುವುದರಿಂದ ಸಾಕಷ್ಟು ಎಲೆಬಳ್ಳಿಗಳು ಕೊಳೆತುಹೋಗಿವೆ. ಹಾಗಾಗಿ ಮಾರುಕಟ್ಟೆಗೆ ಯಥೇಚ್ಛಾ ವೀಳ್ಯದೆಲೆ ದಾಸ್ತಾನು ಆಗುತ್ತಿಲ್ಲ.

ನಿಮ್ಮ ಮನೆ ಕೈ ತೋಟದಲ್ಲಿ ಒಂದು ಬಳ್ಳಿ ನೆಟ್ಟಿದ್ದರೆ ಬಚಾವ್. ಇಲ್ಲಾಂದ್ರೆ ಎಲೆ ಹಾಕದೆ ಬರೀ ಅಡಿಕೆಯಲ್ಲಿ ಬಾಯಿ ಅಲ್ಲಾಡಿಸ ಬೇಕಷ್ಟೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…
June 4, 2026
10:30 PM
by: ಮಿರರ್‌ ಡೆಸ್ಕ್
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ
June 4, 2026
9:15 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ
June 3, 2026
1:54 PM
by: ಸಾಯಿಶೇಖರ್ ಕರಿಕಳ
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror