Advertisement
ಸುದ್ದಿಗಳು

ವೀಳ್ಯದೆಲೆಯ ಬೆಲೆ ಗಗನಕ್ಕೆ | ಈಗ ನಾಲಿಗೆ ಜೊತೆ ಕಿಸೆನೂ ಕೆಂಪು..! |

Share

ಶುಭ ಸಮಾರಂಭಗಳಿಗೆ ತಾಂಬೂಲ ತುಂಬಾ ಭಾರ..! ವೀಳ್ಯದೆಲೆ ಒಂದು ಕಟ್ಟಿಗೆ ಒಂದುನೂರ ಐವತ್ತು ರೂಗಳಷ್ಟುಏರಿದ ದರ. ಇನ್ನು ದಿನಂಪ್ರತಿ ಎಲೆಅಡಿಕೆ ಹಾಕಿಕೊಳ್ಳುವವರ ನಾಲಿಗೆಗಿಂತ ಕಣ್ಣೇ ಕೆಂಪಾಗಿಸುತ್ತೆ ವೀಳ್ಯದೆಲೆ. ಇನ್ನು ಮುಂಗಾರು ಮಳೆ ಆರಂಭಗೊಳ್ಳುವವರೆಗೂ ದರ ಇಳಿಯುವುದು ಅನುಮಾನವೇ.

ಹೌದು ಸಮಾರಂಭ ಯಾವುದೇ ಇರಲಿ, ಪೂಜಾ ಕಾರ್ಯಕ್ರಮಗಳೇ ಇರಲಿ ವೀಳ್ಯದೆಲೆ ಬೇಕೇಬೇಕು. ಆದರೆ ಈ ವೀಳ್ಯದೆಲೆಯ ಬೆಲೆ ನೋಡಿದರೆ ಮುಗಿಲೆತ್ತರಕ್ಕೇರಿದೆ. ಹತ್ತುರೂಗೆ, ಇಪ್ಪತ್ತು ರೂಪಾಯಿಗಳಿಗೆ ವಿಳ್ಯದೆಲೆ ಕೊಡಿ ಎಂದರೆ ಇಲ್ಲಾ ರೀ..ಬರೋದಿಲ್ಲ, ಯಾಕಪ್ಪಾ ಎಂದರೆ ಸ್ವಾಮಿ ಒಂದು ಕಟ್ಟು ವಿಳ್ಯದೆಲೆ ನೂರೈವತ್ತು ರೂಪಾಯಿ ಎಂದಾಗ ದಿನವೂ ಎಲೆಅಡಿಕೆ ಜಗಿಯುವವರಿಗೆ ಹಾಗೆ ಎಲೆಅಡಿಕೆ ತಲೆಗೆರುತ್ತೆ. ಮಳೆಗಾಲ ಕೊನೆಯಾಗಿ ಚಳಿಗಾಲದ ಆರಂಭದೊತ್ತಿಗೆ ವಿಳ್ಳೆದೆಲೆ ಬಳ್ಳಿಯಲ್ಲಿ(ಅಂಬು) ಚಿಗುರುವುದಿಲ್ಲ. ಈ ಕಾರಣ ವಿಳ್ಳೆದೆಲೆಯ ಬೆಲೆ ಹೆಚ್ಚಾಗುತ್ತಿದೆ. ಜೊತೆಗೆ ಕಳೆದ ಎರಡು ವರ್ಷಗಳಿಂದ ಹೆಚ್ಚು ಮಳೆಯಾಗಿದ್ದು ವಿಳ್ಯದೆಲೆ ತೋಟದಲ್ಲಿ ನೀರು ನಿಂತುಕೊಂಡಿದ್ದರ ಪರಿಣಾಮ, ಸಾಕಷ್ಟು ತಂಗಾಳಿ ಬೀಸಿರುವುದರಿಂದ ಸಾಕಷ್ಟು ಎಲೆಬಳ್ಳಿಗಳು ಕೊಳೆತುಹೋಗಿವೆ. ಹಾಗಾಗಿ ಮಾರುಕಟ್ಟೆಗೆ ಯಥೇಚ್ಛಾ ವೀಳ್ಯದೆಲೆ ದಾಸ್ತಾನು ಆಗುತ್ತಿಲ್ಲ.

ನಿಮ್ಮ ಮನೆ ಕೈ ತೋಟದಲ್ಲಿ ಒಂದು ಬಳ್ಳಿ ನೆಟ್ಟಿದ್ದರೆ ಬಚಾವ್. ಇಲ್ಲಾಂದ್ರೆ ಎಲೆ ಹಾಕದೆ ಬರೀ ಅಡಿಕೆಯಲ್ಲಿ ಬಾಯಿ ಅಲ್ಲಾಡಿಸ ಬೇಕಷ್ಟೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

40 minutes ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

1 hour ago

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…

2 hours ago

ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ

ಬಾಳೆಬರೆ ಘಾಟಿಯಲ್ಲಿ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ತಾತ್ಕಾಲಿಕ ನಿಷೇಧಿಸಲಾಗಿದೆ. ಪ್ರಯಾಣಿಕರು ಪರ್ಯಾಯ…

2 hours ago

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

16 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

17 hours ago