ಶುಭ ಸಮಾರಂಭಗಳಿಗೆ ತಾಂಬೂಲ ತುಂಬಾ ಭಾರ..! ವೀಳ್ಯದೆಲೆ ಒಂದು ಕಟ್ಟಿಗೆ ಒಂದುನೂರ ಐವತ್ತು ರೂಗಳಷ್ಟುಏರಿದ ದರ. ಇನ್ನು ದಿನಂಪ್ರತಿ ಎಲೆಅಡಿಕೆ ಹಾಕಿಕೊಳ್ಳುವವರ ನಾಲಿಗೆಗಿಂತ ಕಣ್ಣೇ ಕೆಂಪಾಗಿಸುತ್ತೆ ವೀಳ್ಯದೆಲೆ. ಇನ್ನು ಮುಂಗಾರು ಮಳೆ ಆರಂಭಗೊಳ್ಳುವವರೆಗೂ ದರ ಇಳಿಯುವುದು ಅನುಮಾನವೇ.
ಹೌದು ಸಮಾರಂಭ ಯಾವುದೇ ಇರಲಿ, ಪೂಜಾ ಕಾರ್ಯಕ್ರಮಗಳೇ ಇರಲಿ ವೀಳ್ಯದೆಲೆ ಬೇಕೇಬೇಕು. ಆದರೆ ಈ ವೀಳ್ಯದೆಲೆಯ ಬೆಲೆ ನೋಡಿದರೆ ಮುಗಿಲೆತ್ತರಕ್ಕೇರಿದೆ. ಹತ್ತುರೂಗೆ, ಇಪ್ಪತ್ತು ರೂಪಾಯಿಗಳಿಗೆ ವಿಳ್ಯದೆಲೆ ಕೊಡಿ ಎಂದರೆ ಇಲ್ಲಾ ರೀ..ಬರೋದಿಲ್ಲ, ಯಾಕಪ್ಪಾ ಎಂದರೆ ಸ್ವಾಮಿ ಒಂದು ಕಟ್ಟು ವಿಳ್ಯದೆಲೆ ನೂರೈವತ್ತು ರೂಪಾಯಿ ಎಂದಾಗ ದಿನವೂ ಎಲೆಅಡಿಕೆ ಜಗಿಯುವವರಿಗೆ ಹಾಗೆ ಎಲೆಅಡಿಕೆ ತಲೆಗೆರುತ್ತೆ. ಮಳೆಗಾಲ ಕೊನೆಯಾಗಿ ಚಳಿಗಾಲದ ಆರಂಭದೊತ್ತಿಗೆ ವಿಳ್ಳೆದೆಲೆ ಬಳ್ಳಿಯಲ್ಲಿ(ಅಂಬು) ಚಿಗುರುವುದಿಲ್ಲ. ಈ ಕಾರಣ ವಿಳ್ಳೆದೆಲೆಯ ಬೆಲೆ ಹೆಚ್ಚಾಗುತ್ತಿದೆ. ಜೊತೆಗೆ ಕಳೆದ ಎರಡು ವರ್ಷಗಳಿಂದ ಹೆಚ್ಚು ಮಳೆಯಾಗಿದ್ದು ವಿಳ್ಯದೆಲೆ ತೋಟದಲ್ಲಿ ನೀರು ನಿಂತುಕೊಂಡಿದ್ದರ ಪರಿಣಾಮ, ಸಾಕಷ್ಟು ತಂಗಾಳಿ ಬೀಸಿರುವುದರಿಂದ ಸಾಕಷ್ಟು ಎಲೆಬಳ್ಳಿಗಳು ಕೊಳೆತುಹೋಗಿವೆ. ಹಾಗಾಗಿ ಮಾರುಕಟ್ಟೆಗೆ ಯಥೇಚ್ಛಾ ವೀಳ್ಯದೆಲೆ ದಾಸ್ತಾನು ಆಗುತ್ತಿಲ್ಲ.
ನಿಮ್ಮ ಮನೆ ಕೈ ತೋಟದಲ್ಲಿ ಒಂದು ಬಳ್ಳಿ ನೆಟ್ಟಿದ್ದರೆ ಬಚಾವ್. ಇಲ್ಲಾಂದ್ರೆ ಎಲೆ ಹಾಕದೆ ಬರೀ ಅಡಿಕೆಯಲ್ಲಿ ಬಾಯಿ ಅಲ್ಲಾಡಿಸ ಬೇಕಷ್ಟೆ.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…
ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…