ಶುಭ ಸಮಾರಂಭಗಳಿಗೆ ತಾಂಬೂಲ ತುಂಬಾ ಭಾರ..! ವೀಳ್ಯದೆಲೆ ಒಂದು ಕಟ್ಟಿಗೆ ಒಂದುನೂರ ಐವತ್ತು ರೂಗಳಷ್ಟುಏರಿದ ದರ. ಇನ್ನು ದಿನಂಪ್ರತಿ ಎಲೆಅಡಿಕೆ ಹಾಕಿಕೊಳ್ಳುವವರ ನಾಲಿಗೆಗಿಂತ ಕಣ್ಣೇ ಕೆಂಪಾಗಿಸುತ್ತೆ ವೀಳ್ಯದೆಲೆ. ಇನ್ನು ಮುಂಗಾರು ಮಳೆ ಆರಂಭಗೊಳ್ಳುವವರೆಗೂ ದರ ಇಳಿಯುವುದು ಅನುಮಾನವೇ.
ಹೌದು ಸಮಾರಂಭ ಯಾವುದೇ ಇರಲಿ, ಪೂಜಾ ಕಾರ್ಯಕ್ರಮಗಳೇ ಇರಲಿ ವೀಳ್ಯದೆಲೆ ಬೇಕೇಬೇಕು. ಆದರೆ ಈ ವೀಳ್ಯದೆಲೆಯ ಬೆಲೆ ನೋಡಿದರೆ ಮುಗಿಲೆತ್ತರಕ್ಕೇರಿದೆ. ಹತ್ತುರೂಗೆ, ಇಪ್ಪತ್ತು ರೂಪಾಯಿಗಳಿಗೆ ವಿಳ್ಯದೆಲೆ ಕೊಡಿ ಎಂದರೆ ಇಲ್ಲಾ ರೀ..ಬರೋದಿಲ್ಲ, ಯಾಕಪ್ಪಾ ಎಂದರೆ ಸ್ವಾಮಿ ಒಂದು ಕಟ್ಟು ವಿಳ್ಯದೆಲೆ ನೂರೈವತ್ತು ರೂಪಾಯಿ ಎಂದಾಗ ದಿನವೂ ಎಲೆಅಡಿಕೆ ಜಗಿಯುವವರಿಗೆ ಹಾಗೆ ಎಲೆಅಡಿಕೆ ತಲೆಗೆರುತ್ತೆ. ಮಳೆಗಾಲ ಕೊನೆಯಾಗಿ ಚಳಿಗಾಲದ ಆರಂಭದೊತ್ತಿಗೆ ವಿಳ್ಳೆದೆಲೆ ಬಳ್ಳಿಯಲ್ಲಿ(ಅಂಬು) ಚಿಗುರುವುದಿಲ್ಲ. ಈ ಕಾರಣ ವಿಳ್ಳೆದೆಲೆಯ ಬೆಲೆ ಹೆಚ್ಚಾಗುತ್ತಿದೆ. ಜೊತೆಗೆ ಕಳೆದ ಎರಡು ವರ್ಷಗಳಿಂದ ಹೆಚ್ಚು ಮಳೆಯಾಗಿದ್ದು ವಿಳ್ಯದೆಲೆ ತೋಟದಲ್ಲಿ ನೀರು ನಿಂತುಕೊಂಡಿದ್ದರ ಪರಿಣಾಮ, ಸಾಕಷ್ಟು ತಂಗಾಳಿ ಬೀಸಿರುವುದರಿಂದ ಸಾಕಷ್ಟು ಎಲೆಬಳ್ಳಿಗಳು ಕೊಳೆತುಹೋಗಿವೆ. ಹಾಗಾಗಿ ಮಾರುಕಟ್ಟೆಗೆ ಯಥೇಚ್ಛಾ ವೀಳ್ಯದೆಲೆ ದಾಸ್ತಾನು ಆಗುತ್ತಿಲ್ಲ.
ನಿಮ್ಮ ಮನೆ ಕೈ ತೋಟದಲ್ಲಿ ಒಂದು ಬಳ್ಳಿ ನೆಟ್ಟಿದ್ದರೆ ಬಚಾವ್. ಇಲ್ಲಾಂದ್ರೆ ಎಲೆ ಹಾಕದೆ ಬರೀ ಅಡಿಕೆಯಲ್ಲಿ ಬಾಯಿ ಅಲ್ಲಾಡಿಸ ಬೇಕಷ್ಟೆ.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…