Advertisement
ಸುದ್ದಿಗಳು

ವೀಳ್ಯದೆಲೆಯ ಬೆಲೆ ಗಗನಕ್ಕೆ | ಈಗ ನಾಲಿಗೆ ಜೊತೆ ಕಿಸೆನೂ ಕೆಂಪು..! |

Share

ಶುಭ ಸಮಾರಂಭಗಳಿಗೆ ತಾಂಬೂಲ ತುಂಬಾ ಭಾರ..! ವೀಳ್ಯದೆಲೆ ಒಂದು ಕಟ್ಟಿಗೆ ಒಂದುನೂರ ಐವತ್ತು ರೂಗಳಷ್ಟುಏರಿದ ದರ. ಇನ್ನು ದಿನಂಪ್ರತಿ ಎಲೆಅಡಿಕೆ ಹಾಕಿಕೊಳ್ಳುವವರ ನಾಲಿಗೆಗಿಂತ ಕಣ್ಣೇ ಕೆಂಪಾಗಿಸುತ್ತೆ ವೀಳ್ಯದೆಲೆ. ಇನ್ನು ಮುಂಗಾರು ಮಳೆ ಆರಂಭಗೊಳ್ಳುವವರೆಗೂ ದರ ಇಳಿಯುವುದು ಅನುಮಾನವೇ.

ಹೌದು ಸಮಾರಂಭ ಯಾವುದೇ ಇರಲಿ, ಪೂಜಾ ಕಾರ್ಯಕ್ರಮಗಳೇ ಇರಲಿ ವೀಳ್ಯದೆಲೆ ಬೇಕೇಬೇಕು. ಆದರೆ ಈ ವೀಳ್ಯದೆಲೆಯ ಬೆಲೆ ನೋಡಿದರೆ ಮುಗಿಲೆತ್ತರಕ್ಕೇರಿದೆ. ಹತ್ತುರೂಗೆ, ಇಪ್ಪತ್ತು ರೂಪಾಯಿಗಳಿಗೆ ವಿಳ್ಯದೆಲೆ ಕೊಡಿ ಎಂದರೆ ಇಲ್ಲಾ ರೀ..ಬರೋದಿಲ್ಲ, ಯಾಕಪ್ಪಾ ಎಂದರೆ ಸ್ವಾಮಿ ಒಂದು ಕಟ್ಟು ವಿಳ್ಯದೆಲೆ ನೂರೈವತ್ತು ರೂಪಾಯಿ ಎಂದಾಗ ದಿನವೂ ಎಲೆಅಡಿಕೆ ಜಗಿಯುವವರಿಗೆ ಹಾಗೆ ಎಲೆಅಡಿಕೆ ತಲೆಗೆರುತ್ತೆ. ಮಳೆಗಾಲ ಕೊನೆಯಾಗಿ ಚಳಿಗಾಲದ ಆರಂಭದೊತ್ತಿಗೆ ವಿಳ್ಳೆದೆಲೆ ಬಳ್ಳಿಯಲ್ಲಿ(ಅಂಬು) ಚಿಗುರುವುದಿಲ್ಲ. ಈ ಕಾರಣ ವಿಳ್ಳೆದೆಲೆಯ ಬೆಲೆ ಹೆಚ್ಚಾಗುತ್ತಿದೆ. ಜೊತೆಗೆ ಕಳೆದ ಎರಡು ವರ್ಷಗಳಿಂದ ಹೆಚ್ಚು ಮಳೆಯಾಗಿದ್ದು ವಿಳ್ಯದೆಲೆ ತೋಟದಲ್ಲಿ ನೀರು ನಿಂತುಕೊಂಡಿದ್ದರ ಪರಿಣಾಮ, ಸಾಕಷ್ಟು ತಂಗಾಳಿ ಬೀಸಿರುವುದರಿಂದ ಸಾಕಷ್ಟು ಎಲೆಬಳ್ಳಿಗಳು ಕೊಳೆತುಹೋಗಿವೆ. ಹಾಗಾಗಿ ಮಾರುಕಟ್ಟೆಗೆ ಯಥೇಚ್ಛಾ ವೀಳ್ಯದೆಲೆ ದಾಸ್ತಾನು ಆಗುತ್ತಿಲ್ಲ.

ನಿಮ್ಮ ಮನೆ ಕೈ ತೋಟದಲ್ಲಿ ಒಂದು ಬಳ್ಳಿ ನೆಟ್ಟಿದ್ದರೆ ಬಚಾವ್. ಇಲ್ಲಾಂದ್ರೆ ಎಲೆ ಹಾಕದೆ ಬರೀ ಅಡಿಕೆಯಲ್ಲಿ ಬಾಯಿ ಅಲ್ಲಾಡಿಸ ಬೇಕಷ್ಟೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

1 hour ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 hours ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

12 hours ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

1 day ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

2 days ago