ಶುಭ ಸಮಾರಂಭಗಳಿಗೆ ತಾಂಬೂಲ ತುಂಬಾ ಭಾರ..! ವೀಳ್ಯದೆಲೆ ಒಂದು ಕಟ್ಟಿಗೆ ಒಂದುನೂರ ಐವತ್ತು ರೂಗಳಷ್ಟುಏರಿದ ದರ. ಇನ್ನು ದಿನಂಪ್ರತಿ ಎಲೆಅಡಿಕೆ ಹಾಕಿಕೊಳ್ಳುವವರ ನಾಲಿಗೆಗಿಂತ ಕಣ್ಣೇ ಕೆಂಪಾಗಿಸುತ್ತೆ ವೀಳ್ಯದೆಲೆ. ಇನ್ನು ಮುಂಗಾರು ಮಳೆ ಆರಂಭಗೊಳ್ಳುವವರೆಗೂ ದರ ಇಳಿಯುವುದು ಅನುಮಾನವೇ.
ಹೌದು ಸಮಾರಂಭ ಯಾವುದೇ ಇರಲಿ, ಪೂಜಾ ಕಾರ್ಯಕ್ರಮಗಳೇ ಇರಲಿ ವೀಳ್ಯದೆಲೆ ಬೇಕೇಬೇಕು. ಆದರೆ ಈ ವೀಳ್ಯದೆಲೆಯ ಬೆಲೆ ನೋಡಿದರೆ ಮುಗಿಲೆತ್ತರಕ್ಕೇರಿದೆ. ಹತ್ತುರೂಗೆ, ಇಪ್ಪತ್ತು ರೂಪಾಯಿಗಳಿಗೆ ವಿಳ್ಯದೆಲೆ ಕೊಡಿ ಎಂದರೆ ಇಲ್ಲಾ ರೀ..ಬರೋದಿಲ್ಲ, ಯಾಕಪ್ಪಾ ಎಂದರೆ ಸ್ವಾಮಿ ಒಂದು ಕಟ್ಟು ವಿಳ್ಯದೆಲೆ ನೂರೈವತ್ತು ರೂಪಾಯಿ ಎಂದಾಗ ದಿನವೂ ಎಲೆಅಡಿಕೆ ಜಗಿಯುವವರಿಗೆ ಹಾಗೆ ಎಲೆಅಡಿಕೆ ತಲೆಗೆರುತ್ತೆ. ಮಳೆಗಾಲ ಕೊನೆಯಾಗಿ ಚಳಿಗಾಲದ ಆರಂಭದೊತ್ತಿಗೆ ವಿಳ್ಳೆದೆಲೆ ಬಳ್ಳಿಯಲ್ಲಿ(ಅಂಬು) ಚಿಗುರುವುದಿಲ್ಲ. ಈ ಕಾರಣ ವಿಳ್ಳೆದೆಲೆಯ ಬೆಲೆ ಹೆಚ್ಚಾಗುತ್ತಿದೆ. ಜೊತೆಗೆ ಕಳೆದ ಎರಡು ವರ್ಷಗಳಿಂದ ಹೆಚ್ಚು ಮಳೆಯಾಗಿದ್ದು ವಿಳ್ಯದೆಲೆ ತೋಟದಲ್ಲಿ ನೀರು ನಿಂತುಕೊಂಡಿದ್ದರ ಪರಿಣಾಮ, ಸಾಕಷ್ಟು ತಂಗಾಳಿ ಬೀಸಿರುವುದರಿಂದ ಸಾಕಷ್ಟು ಎಲೆಬಳ್ಳಿಗಳು ಕೊಳೆತುಹೋಗಿವೆ. ಹಾಗಾಗಿ ಮಾರುಕಟ್ಟೆಗೆ ಯಥೇಚ್ಛಾ ವೀಳ್ಯದೆಲೆ ದಾಸ್ತಾನು ಆಗುತ್ತಿಲ್ಲ.
ನಿಮ್ಮ ಮನೆ ಕೈ ತೋಟದಲ್ಲಿ ಒಂದು ಬಳ್ಳಿ ನೆಟ್ಟಿದ್ದರೆ ಬಚಾವ್. ಇಲ್ಲಾಂದ್ರೆ ಎಲೆ ಹಾಕದೆ ಬರೀ ಅಡಿಕೆಯಲ್ಲಿ ಬಾಯಿ ಅಲ್ಲಾಡಿಸ ಬೇಕಷ್ಟೆ.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…