ಶುಭ ಸಮಾರಂಭಗಳಿಗೆ ತಾಂಬೂಲ ತುಂಬಾ ಭಾರ..! ವೀಳ್ಯದೆಲೆ ಒಂದು ಕಟ್ಟಿಗೆ ಒಂದುನೂರ ಐವತ್ತು ರೂಗಳಷ್ಟುಏರಿದ ದರ. ಇನ್ನು ದಿನಂಪ್ರತಿ ಎಲೆಅಡಿಕೆ ಹಾಕಿಕೊಳ್ಳುವವರ ನಾಲಿಗೆಗಿಂತ ಕಣ್ಣೇ ಕೆಂಪಾಗಿಸುತ್ತೆ ವೀಳ್ಯದೆಲೆ. ಇನ್ನು ಮುಂಗಾರು ಮಳೆ ಆರಂಭಗೊಳ್ಳುವವರೆಗೂ ದರ ಇಳಿಯುವುದು ಅನುಮಾನವೇ.
ಹೌದು ಸಮಾರಂಭ ಯಾವುದೇ ಇರಲಿ, ಪೂಜಾ ಕಾರ್ಯಕ್ರಮಗಳೇ ಇರಲಿ ವೀಳ್ಯದೆಲೆ ಬೇಕೇಬೇಕು. ಆದರೆ ಈ ವೀಳ್ಯದೆಲೆಯ ಬೆಲೆ ನೋಡಿದರೆ ಮುಗಿಲೆತ್ತರಕ್ಕೇರಿದೆ. ಹತ್ತುರೂಗೆ, ಇಪ್ಪತ್ತು ರೂಪಾಯಿಗಳಿಗೆ ವಿಳ್ಯದೆಲೆ ಕೊಡಿ ಎಂದರೆ ಇಲ್ಲಾ ರೀ..ಬರೋದಿಲ್ಲ, ಯಾಕಪ್ಪಾ ಎಂದರೆ ಸ್ವಾಮಿ ಒಂದು ಕಟ್ಟು ವಿಳ್ಯದೆಲೆ ನೂರೈವತ್ತು ರೂಪಾಯಿ ಎಂದಾಗ ದಿನವೂ ಎಲೆಅಡಿಕೆ ಜಗಿಯುವವರಿಗೆ ಹಾಗೆ ಎಲೆಅಡಿಕೆ ತಲೆಗೆರುತ್ತೆ. ಮಳೆಗಾಲ ಕೊನೆಯಾಗಿ ಚಳಿಗಾಲದ ಆರಂಭದೊತ್ತಿಗೆ ವಿಳ್ಳೆದೆಲೆ ಬಳ್ಳಿಯಲ್ಲಿ(ಅಂಬು) ಚಿಗುರುವುದಿಲ್ಲ. ಈ ಕಾರಣ ವಿಳ್ಳೆದೆಲೆಯ ಬೆಲೆ ಹೆಚ್ಚಾಗುತ್ತಿದೆ. ಜೊತೆಗೆ ಕಳೆದ ಎರಡು ವರ್ಷಗಳಿಂದ ಹೆಚ್ಚು ಮಳೆಯಾಗಿದ್ದು ವಿಳ್ಯದೆಲೆ ತೋಟದಲ್ಲಿ ನೀರು ನಿಂತುಕೊಂಡಿದ್ದರ ಪರಿಣಾಮ, ಸಾಕಷ್ಟು ತಂಗಾಳಿ ಬೀಸಿರುವುದರಿಂದ ಸಾಕಷ್ಟು ಎಲೆಬಳ್ಳಿಗಳು ಕೊಳೆತುಹೋಗಿವೆ. ಹಾಗಾಗಿ ಮಾರುಕಟ್ಟೆಗೆ ಯಥೇಚ್ಛಾ ವೀಳ್ಯದೆಲೆ ದಾಸ್ತಾನು ಆಗುತ್ತಿಲ್ಲ.
ನಿಮ್ಮ ಮನೆ ಕೈ ತೋಟದಲ್ಲಿ ಒಂದು ಬಳ್ಳಿ ನೆಟ್ಟಿದ್ದರೆ ಬಚಾವ್. ಇಲ್ಲಾಂದ್ರೆ ಎಲೆ ಹಾಕದೆ ಬರೀ ಅಡಿಕೆಯಲ್ಲಿ ಬಾಯಿ ಅಲ್ಲಾಡಿಸ ಬೇಕಷ್ಟೆ.
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…