#HimachalPradesh | ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ | ಗ್ರಾಮದ ಜನರು ತತ್ತರ |

August 14, 2023
10:30 AM
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಇದೀಗ ಹಲವು ಕಡೆ ಭೂಕುಸಿತ ಆರಂಭವಾಗಿದೆ. ಗ್ರಾಮವೊಂದರಲ್ಲಿ ಮೇಘಸ್ಫೋಟಕ್ಕೆ 7 ಮMದಿ ಬಲಿಯಾಗಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭೂಕುಸಿತಗಳು ಸಂಭವಿಸುತ್ತಿದೆ.  ಹಲವು ಕಡೆ  ರಸ್ತೆಗಳು ಕೊಚ್ಚಿಹೋಗಿವೆ ಮತ್ತು ವ್ಯಾಪಕ ಹಾನಿಯಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ಶಿಮ್ಲಾ-ಚಂಡೀಗಢ ರಸ್ತೆಯನ್ನು ಬಸ್‌ಗಳು ಮತ್ತು ಟ್ರಕ್‌ಗಳಿಗೆ ಸ್ಥಗಿತಗೊಳಿಸಲಾಗಿದೆ. ಸೋಲನ್‌ನ ಕಂದಘಾಟ್ ಪ್ರದೇಶದ ಜಡೋನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದೆ. ಮಳೆಯ ನೀರು ಏಕಾಏಕಿ ಹರಿದು ಬಂದ ಪರಿಣಾಮ ಎರಡು ಮನೆಗಳು ಹಾಗೂ ಗೋಶಾಲೆ ಕೊಚ್ಚಿ ಹೋಗಿದೆ. 7 ಮಂದಿ ಬಲಿಯಾಗಿದ್ದು, ಮೂವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.ದುರಂತದ ನಂತರ ಐದು ಜನರನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ.

ಭಾನುವಾರ, ಭಾರೀ ಗಾಳಿ ಮಳೆಯ ಕಾರಣದಿಂದ ಮರವೊಂದು ವಾಹನದ ಮೇಲೆ ಬಿದ್ದು ಖಾಸಗಿ ಬಸ್ ಕಂಡಕ್ಟರ್ ಗಾಯಗೊಂಡಿದ್ದರು. ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಪ್ರಕಾರ, ಭಾರೀ ಮಳೆಯಿಂದಾಗಿ ಹಿಮಾಚಲ ರಾಜ್ಯದಾದ್ಯಂತ  621 ರಸ್ತೆಗಳನ್ನು ಮುಚ್ಚಲಾಗಿದೆ.  ಹವಾಮಾನ ಮುನ್ಸೂಚನೆಯ ಪ್ರಕಾರ ಆಗಸ್ಟ್ 17 ರವರೆಗೆ ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಮಳೆ, ಗುಡುಗು ಮತ್ತು ಮಿಂಚು ಮುಂದುವರಿಯಲಿದೆ.

ನಿರಂತರ ಮಳೆಯ ಕಾರಣದಿಂದ ಹಿಮಾಚಲ ಪ್ರದೇಶದ  ರಾಜ್ಯದ ಎಲ್ಲಾ ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆಯನ್ನು  ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಘೋಷಿಸಿದರು.

ಜೂನ್ 24 ರಂದು ಮುಂಗಾರು ಪ್ರಾರಂಭವಾದಾಗಿನಿಂದ, ಹಿಮಾಚಲ ಪ್ರದೇಶವು ₹ 7,020 ಕೋಟಿಗಳಷ್ಟು ನಷ್ಟವನ್ನು ಅನುಭವಿಸಿದೆ ಮತ್ತು ಮಳೆ ಸಂಬಂಧಿತ ಘಟನೆಗಳು ಮತ್ತು ರಸ್ತೆ ಅಪಘಾತಗಳಿಂದ 257 ಸಾವುಗಳು ವರದಿಯಾಗಿದೆ.

Source: ANI

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror