Advertisement
ಪ್ರಮುಖ

#HimachalPradesh | ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ | ಗ್ರಾಮದ ಜನರು ತತ್ತರ |

Share

ಹಿಮಾಚಲ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭೂಕುಸಿತಗಳು ಸಂಭವಿಸುತ್ತಿದೆ.  ಹಲವು ಕಡೆ  ರಸ್ತೆಗಳು ಕೊಚ್ಚಿಹೋಗಿವೆ ಮತ್ತು ವ್ಯಾಪಕ ಹಾನಿಯಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ಶಿಮ್ಲಾ-ಚಂಡೀಗಢ ರಸ್ತೆಯನ್ನು ಬಸ್‌ಗಳು ಮತ್ತು ಟ್ರಕ್‌ಗಳಿಗೆ ಸ್ಥಗಿತಗೊಳಿಸಲಾಗಿದೆ. ಸೋಲನ್‌ನ ಕಂದಘಾಟ್ ಪ್ರದೇಶದ ಜಡೋನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದೆ. ಮಳೆಯ ನೀರು ಏಕಾಏಕಿ ಹರಿದು ಬಂದ ಪರಿಣಾಮ ಎರಡು ಮನೆಗಳು ಹಾಗೂ ಗೋಶಾಲೆ ಕೊಚ್ಚಿ ಹೋಗಿದೆ. 7 ಮಂದಿ ಬಲಿಯಾಗಿದ್ದು, ಮೂವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.ದುರಂತದ ನಂತರ ಐದು ಜನರನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ.

ಭಾನುವಾರ, ಭಾರೀ ಗಾಳಿ ಮಳೆಯ ಕಾರಣದಿಂದ ಮರವೊಂದು ವಾಹನದ ಮೇಲೆ ಬಿದ್ದು ಖಾಸಗಿ ಬಸ್ ಕಂಡಕ್ಟರ್ ಗಾಯಗೊಂಡಿದ್ದರು. ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಪ್ರಕಾರ, ಭಾರೀ ಮಳೆಯಿಂದಾಗಿ ಹಿಮಾಚಲ ರಾಜ್ಯದಾದ್ಯಂತ  621 ರಸ್ತೆಗಳನ್ನು ಮುಚ್ಚಲಾಗಿದೆ.  ಹವಾಮಾನ ಮುನ್ಸೂಚನೆಯ ಪ್ರಕಾರ ಆಗಸ್ಟ್ 17 ರವರೆಗೆ ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಮಳೆ, ಗುಡುಗು ಮತ್ತು ಮಿಂಚು ಮುಂದುವರಿಯಲಿದೆ.

ನಿರಂತರ ಮಳೆಯ ಕಾರಣದಿಂದ ಹಿಮಾಚಲ ಪ್ರದೇಶದ  ರಾಜ್ಯದ ಎಲ್ಲಾ ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆಯನ್ನು  ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಘೋಷಿಸಿದರು.

ಜೂನ್ 24 ರಂದು ಮುಂಗಾರು ಪ್ರಾರಂಭವಾದಾಗಿನಿಂದ, ಹಿಮಾಚಲ ಪ್ರದೇಶವು ₹ 7,020 ಕೋಟಿಗಳಷ್ಟು ನಷ್ಟವನ್ನು ಅನುಭವಿಸಿದೆ ಮತ್ತು ಮಳೆ ಸಂಬಂಧಿತ ಘಟನೆಗಳು ಮತ್ತು ರಸ್ತೆ ಅಪಘಾತಗಳಿಂದ 257 ಸಾವುಗಳು ವರದಿಯಾಗಿದೆ.

Source: ANI

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

6 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

12 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

21 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

24 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago