ಹಿಂದೂ ಸಂಸ್ಕೃತಿ ಎಂಥವರನ್ನೂ ಸೆಳೆಯುತ್ತೆ | ನಿಯಂತ್ರಣವಿಲ್ಲದ ಮನಸ್ಸೇ ದೊಡ್ಡ ಶತ್ರು | ಭಗವದ್ಗೀತೆಯ ಸಂದೇಶ ಹಂಚಿಕೊಂಡ ಅಖ್ತರ್

July 2, 2024
11:00 AM

ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ(International cricket) ಅತೀ ವೇಗದ ಬೌಲಿಂಗ್ ದಾಖಲೆ(bowling recorder) ಬರೆದ ಪಾಕ್ ತಂಡದ(Pakistana) ಆಟಗಾರ ಶೊಯೇಬ್ ಅಖ್ತರ್ (Shoaib Akhtar) ಅವರು ಭಗವದ್ಗೀತೆಯಲ್ಲಿ ಉಲ್ಲೇಖಿಸಲಾದ `ನಿಯಂತ್ರಣವಿಲ್ಲದ ಮನಸ್ಸೇ ದೊಡ್ಡ ಶತ್ರು’ ಎಂಬ ಸಂದೇಶವನ್ನು ತಮ್ಮ ಇನ್ಸ್ಟಾ ಸ್ಟೋರಿಯಲ್ಲಿ(Instagram) ಹಂಚಿಕೊಂಡಿದ್ದಾರೆ.

ಅವರು ಹಂಚಿಕೊಂಡ ಸ್ಟೋರಿಯಯಲ್ಲಿ, ವಿಷ್ಣುವಿನ ಅವತಾರವಾದದ ಚಿತ್ರದೊಂದಿಗೆ, ನಿಯಂತ್ರಣವಿಲ್ಲದ ಮನಸ್ಸೇ ದೊಡ್ಡ ಶತ್ರು ಎಂಬ ಸಂದೇಶ ಬರೆಯಲಾಗಿದೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಈ ಸಂದೇಶ ಹಂಚಿಕೊಂಡಿರುವುದಕ್ಕೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದರೆ, ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟೆಲ್ಲ ನಡೆದರೂ ಅವರು ತಮ್ಮ ಸ್ಟೋರಿಯನ್ನು ಡಿಲೀಟ್ ಮಾಡಿಲ್ಲ. ಇತ್ತೀಚೆಗೆ ಅವರು ಭಾರತ ವಿಶ್ವಕಪ್ ಗೆಲ್ಲಬೇಕು ಎಂದು ಸಹ ಅಭಿಪ್ರಾಯ ವ್ಯಕ್ತಪಡಿಸಿದ್ದರು.

2002 ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಅಖ್ತರ್ ಬರೋಬ್ಬರಿ ಗಂಟೆ 161.3 ವೇಗದಲ್ಲಿ ಚೆಂಡೆಸೆದು ಈ ವಿಶ್ವ ದಾಖಲೆಯನ್ನು ನಿರ್ಮಿಸಿದ್ದರು. ಈ ದಾಖಲೆ ನಿರ್ಮಾಣವಾಗಿ 2 ದಶಕಗಳು ಕಳೆದರೂ ಇದನ್ನು ಮೀರುವಂತೆ ಯಾರಿಂದಲೂ ಬೌಲಿಂಗ್ ಮಾಡಲು ಇದುವರೆಗೂ ಯಾವ ಬೌಲರ್‌ಗಳಿಗೂ ಸಾಧ್ಯವಾಗಿಲ್ಲ. ಪಾಕ್ ಪರ 46 ಟೆಸ್ಟ್ ಪಂದ್ಯಗಳನ್ನಾಡಿರುವ ಶೊಯೇಬ್ ಅಖ್ತರ್ 178 ವಿಕೆಟ್ ಕಬಳಿಸಿದ್ದಾರೆ. 163 ಏಕದಿನ ಪಂದ್ಯಗಳಿಂದ 247 ವಿಕೆಟ್ ಪಡೆದರೆ, 15 ಟಿ20 ಪಂದ್ಯಗಳಿಂದ 19 ವಿಕೆಟ್ ಉರುಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror