ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ(International cricket) ಅತೀ ವೇಗದ ಬೌಲಿಂಗ್ ದಾಖಲೆ(bowling recorder) ಬರೆದ ಪಾಕ್ ತಂಡದ(Pakistana) ಆಟಗಾರ ಶೊಯೇಬ್ ಅಖ್ತರ್ (Shoaib Akhtar) ಅವರು ಭಗವದ್ಗೀತೆಯಲ್ಲಿ ಉಲ್ಲೇಖಿಸಲಾದ `ನಿಯಂತ್ರಣವಿಲ್ಲದ ಮನಸ್ಸೇ ದೊಡ್ಡ ಶತ್ರು’ ಎಂಬ ಸಂದೇಶವನ್ನು ತಮ್ಮ ಇನ್ಸ್ಟಾ ಸ್ಟೋರಿಯಲ್ಲಿ(Instagram) ಹಂಚಿಕೊಂಡಿದ್ದಾರೆ.
ಅವರು ಹಂಚಿಕೊಂಡ ಸ್ಟೋರಿಯಯಲ್ಲಿ, ವಿಷ್ಣುವಿನ ಅವತಾರವಾದದ ಚಿತ್ರದೊಂದಿಗೆ, ನಿಯಂತ್ರಣವಿಲ್ಲದ ಮನಸ್ಸೇ ದೊಡ್ಡ ಶತ್ರು ಎಂಬ ಸಂದೇಶ ಬರೆಯಲಾಗಿದೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಈ ಸಂದೇಶ ಹಂಚಿಕೊಂಡಿರುವುದಕ್ಕೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದರೆ, ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟೆಲ್ಲ ನಡೆದರೂ ಅವರು ತಮ್ಮ ಸ್ಟೋರಿಯನ್ನು ಡಿಲೀಟ್ ಮಾಡಿಲ್ಲ. ಇತ್ತೀಚೆಗೆ ಅವರು ಭಾರತ ವಿಶ್ವಕಪ್ ಗೆಲ್ಲಬೇಕು ಎಂದು ಸಹ ಅಭಿಪ್ರಾಯ ವ್ಯಕ್ತಪಡಿಸಿದ್ದರು.
2002 ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಅಖ್ತರ್ ಬರೋಬ್ಬರಿ ಗಂಟೆ 161.3 ವೇಗದಲ್ಲಿ ಚೆಂಡೆಸೆದು ಈ ವಿಶ್ವ ದಾಖಲೆಯನ್ನು ನಿರ್ಮಿಸಿದ್ದರು. ಈ ದಾಖಲೆ ನಿರ್ಮಾಣವಾಗಿ 2 ದಶಕಗಳು ಕಳೆದರೂ ಇದನ್ನು ಮೀರುವಂತೆ ಯಾರಿಂದಲೂ ಬೌಲಿಂಗ್ ಮಾಡಲು ಇದುವರೆಗೂ ಯಾವ ಬೌಲರ್ಗಳಿಗೂ ಸಾಧ್ಯವಾಗಿಲ್ಲ. ಪಾಕ್ ಪರ 46 ಟೆಸ್ಟ್ ಪಂದ್ಯಗಳನ್ನಾಡಿರುವ ಶೊಯೇಬ್ ಅಖ್ತರ್ 178 ವಿಕೆಟ್ ಕಬಳಿಸಿದ್ದಾರೆ. 163 ಏಕದಿನ ಪಂದ್ಯಗಳಿಂದ 247 ವಿಕೆಟ್ ಪಡೆದರೆ, 15 ಟಿ20 ಪಂದ್ಯಗಳಿಂದ 19 ವಿಕೆಟ್ ಉರುಳಿಸಿದ್ದಾರೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…