Advertisement
MIRROR FOCUS

ಹಿಂದೂ ಸಂಸ್ಕೃತಿ ಎಂಥವರನ್ನೂ ಸೆಳೆಯುತ್ತೆ | ನಿಯಂತ್ರಣವಿಲ್ಲದ ಮನಸ್ಸೇ ದೊಡ್ಡ ಶತ್ರು | ಭಗವದ್ಗೀತೆಯ ಸಂದೇಶ ಹಂಚಿಕೊಂಡ ಅಖ್ತರ್

Share

ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ(International cricket) ಅತೀ ವೇಗದ ಬೌಲಿಂಗ್ ದಾಖಲೆ(bowling recorder) ಬರೆದ ಪಾಕ್ ತಂಡದ(Pakistana) ಆಟಗಾರ ಶೊಯೇಬ್ ಅಖ್ತರ್ (Shoaib Akhtar) ಅವರು ಭಗವದ್ಗೀತೆಯಲ್ಲಿ ಉಲ್ಲೇಖಿಸಲಾದ `ನಿಯಂತ್ರಣವಿಲ್ಲದ ಮನಸ್ಸೇ ದೊಡ್ಡ ಶತ್ರು’ ಎಂಬ ಸಂದೇಶವನ್ನು ತಮ್ಮ ಇನ್ಸ್ಟಾ ಸ್ಟೋರಿಯಲ್ಲಿ(Instagram) ಹಂಚಿಕೊಂಡಿದ್ದಾರೆ.

ಅವರು ಹಂಚಿಕೊಂಡ ಸ್ಟೋರಿಯಯಲ್ಲಿ, ವಿಷ್ಣುವಿನ ಅವತಾರವಾದದ ಚಿತ್ರದೊಂದಿಗೆ, ನಿಯಂತ್ರಣವಿಲ್ಲದ ಮನಸ್ಸೇ ದೊಡ್ಡ ಶತ್ರು ಎಂಬ ಸಂದೇಶ ಬರೆಯಲಾಗಿದೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಈ ಸಂದೇಶ ಹಂಚಿಕೊಂಡಿರುವುದಕ್ಕೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದರೆ, ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟೆಲ್ಲ ನಡೆದರೂ ಅವರು ತಮ್ಮ ಸ್ಟೋರಿಯನ್ನು ಡಿಲೀಟ್ ಮಾಡಿಲ್ಲ. ಇತ್ತೀಚೆಗೆ ಅವರು ಭಾರತ ವಿಶ್ವಕಪ್ ಗೆಲ್ಲಬೇಕು ಎಂದು ಸಹ ಅಭಿಪ್ರಾಯ ವ್ಯಕ್ತಪಡಿಸಿದ್ದರು.

2002 ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಅಖ್ತರ್ ಬರೋಬ್ಬರಿ ಗಂಟೆ 161.3 ವೇಗದಲ್ಲಿ ಚೆಂಡೆಸೆದು ಈ ವಿಶ್ವ ದಾಖಲೆಯನ್ನು ನಿರ್ಮಿಸಿದ್ದರು. ಈ ದಾಖಲೆ ನಿರ್ಮಾಣವಾಗಿ 2 ದಶಕಗಳು ಕಳೆದರೂ ಇದನ್ನು ಮೀರುವಂತೆ ಯಾರಿಂದಲೂ ಬೌಲಿಂಗ್ ಮಾಡಲು ಇದುವರೆಗೂ ಯಾವ ಬೌಲರ್‌ಗಳಿಗೂ ಸಾಧ್ಯವಾಗಿಲ್ಲ. ಪಾಕ್ ಪರ 46 ಟೆಸ್ಟ್ ಪಂದ್ಯಗಳನ್ನಾಡಿರುವ ಶೊಯೇಬ್ ಅಖ್ತರ್ 178 ವಿಕೆಟ್ ಕಬಳಿಸಿದ್ದಾರೆ. 163 ಏಕದಿನ ಪಂದ್ಯಗಳಿಂದ 247 ವಿಕೆಟ್ ಪಡೆದರೆ, 15 ಟಿ20 ಪಂದ್ಯಗಳಿಂದ 19 ವಿಕೆಟ್ ಉರುಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

3 hours ago

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

7 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

9 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

19 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

19 hours ago