ಮೀಸಲು ಅರಣ್ಯದಲ್ಲಿರುವ ಮಸೀದಿ ಕಟ್ಟಡ ತೆರವಿಗೆ ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ | ನ್ಯಾಯಾಲಯದ ಆದೇಶ ಪಾಲನೆಗೆ ಒತ್ತಾಯ |

April 11, 2022
3:49 PM

ಗೂನಡ್ಕದ ಮೀಸಲು ಅರಣ್ಯದಲ್ಲಿ ಅರಣ್ಯ ಒತ್ತುವರಿ ಮೂಲಕ ಮಸೀದಿ ಕಟ್ಟಡ ನಿರ್ಮಾಣ ಮಾಡಿರುವುದನ್ನು ತೆರವು  ಮಾಡಬೇಕೆಂಬ ನ್ಯಾಯಾಲಯದ ಆದೇಶ ಪಾಲನೆಯಾಗಿಲ್ಲ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಮೆರವಣಿಗೆ ಹಾಗೂ ಸುಳ್ಯ ಅರಣ್ಯಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

Advertisement

ಪ್ರತಿಭಟನಾ ಸಭೆಗೂ ಮುನ್ನ ಹಿಂಜಾವೇ ಕಾರ್ಯಕರ್ತರು ಮೆರವಣಿಗೆ ನಡೆಸಿದರು. ನಂತರ  ಅರಣ್ಯ ಇಲಾಖಾಯಲ್ಲಿ ಪ್ರತಭಟನಾ ಸಭೆ ನಡೆಸಿದರು.  2018 ರಲ್ಲಿ ಗೂನಡ್ಕ ರಕ್ಷಿತಾರಣ್ಯದಲ್ಲಿರುವ ಮಸೀದಿ ಕಟ್ಟಡ ತೆರವಿಗೆ ಆದೇಶವಾದರೂ ಇದುವರೆಗೂ ಅರಣ್ಯ ಇಲಾಖಾ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಇದೀಗ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆಯಾಗಿದೆ, ಇದಕ್ಕೆ ಕಾರಣ ಅರಣ್ಯ ಇಲಾಖೆ. ಇಲಾಖಾ ಅಧಿಕಾರಿಗಳು ಸೂಕ್ತ ದಾಖಲೆ ನೀಡದೇ ಇದ್ದುದು ಕಾರಣ ಎಂದು ಆರೋಪಿಸಿದರು. ಇದೀಗ ತಕ್ಷಣವೇ ಸೂಕ್ತ ಕ್ರಮವಾಗಬೇಕು ಎಂದು ಒತ್ತಾಯಿಸಿದರು.

Advertisement

ಸಭೆಯಲ್ಲಿ ಹಿಂಜಾವೇ ಜಿಲ್ಲಾ ಕಾರ್ಯದರ್ಶಿ ನರಸಿಂಹ ಮಾಣಿ, ಭಜರಂಗದಳ ಪ್ರಾಂತ ಸಂಚಾಲಕ ಮುರಳಿಕೃಷ್ಣ ಹಸಂತಡ್ಕ, ಮಾತೃಸುರಕ್ಷಾ  ಮಂಡಳಿ ಸಂಚಾಲಕ ಗಣಪತಿ ಭಟ್‌ ಕೆದಿಲ,  ತಾಲೂಕು ಸಂಚಾಲಕ ಮಹೇಶ್‌ ಉಗ್ರಾಣಿಮನೆ, ಹಿಂಜಾವೇ  ಪ್ರಮುಖರಾದ ಅಜಿತ್‌ ರೈ ಹೊಸಮನೆ, ಸಂಘಟನಾ ಕಾರ್ಯದರ್ಶಿ ಚಿನ್ಮಯ್‌ ಈಶ್ವರಮಂಗಲ ಜಗದೀಶ್‌, ಲತೀಶ್‌ ಗುಂಡ್ಯ, ನಿಕೇತ್‌ ಉಬರಡ್ಕ ಮೊದಲಾದವರಿದ್ದರು.

 

 

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಿವಮೊಗ್ಗ ಜಿಲ್ಲೆಯ ಸುಜನಾ ಸ್ತ್ರೀಶಕ್ತಿ ಸ್ವಸಹಾಯ ಸಂಘ | ಸ್ವಾವಲಂಬನೆಯ ಸಂಕಲ್ಪದಿಂದ ಜಾಗತಿಕ ಮಾರುಕಟ್ಟೆಯವರೆಗೆ
January 17, 2026
7:40 AM
by: ದ ರೂರಲ್ ಮಿರರ್.ಕಾಂ
ನಕಲಿ ಬೀಜಗಳ ಮಾರಾಟ ತಡೆಗೆ ಕ್ರಮ – ಬಜೆಟ್ ಅಧಿವೇಶನದಲ್ಲಿ ಬೀಜ ಕಾಯ್ದೆ–2026 ಮಂಡನೆ
January 17, 2026
7:25 AM
by: ದ ರೂರಲ್ ಮಿರರ್.ಕಾಂ
ಉತ್ತರ ಕನ್ನಡದ ದಾಂಡೇಲಿಯಲ್ಲಿ ಹಾರ್ನ್ಬಿಲ್ ಹಬ್ಬ | ಮಕ್ಕಳಿಗೆ ಹಾರ್ನ್ಬಿಲ್ ಜೀವನ ಕ್ರಮ ಕುರಿತು ಜಾಗೃತಿ
January 17, 2026
7:21 AM
by: ಮಿರರ್‌ ಡೆಸ್ಕ್
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬವಾದರೆ ಕ್ರಮ ಅನಿವಾರ್ಯ | ಅಧಿಕಾರಿಗಳಿಗೆ ಸಚಿವ ಕೃಷ್ಣಭೈರೇಗೌಡ ಎಚ್ಚರಿಕೆ
January 17, 2026
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror