ಸುದ್ದಿಗಳು

ಲವ್ ಜಿಹಾದ್ ವಿರೋಧಿ ಪೋಲಿಸ್ ದಳ ಸ್ಥಾಪನೆಗೆ ಒತ್ತಾಯ | ಡಿ.10 ರಿಂದ ರಾಜ್ಯವ್ಯಾಪಿ ಆಂದೋಲನ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಲವ್ ಜಿಹಾದ್ ತಡೆಯಲು ಸಾದ್ಯವಾಗುತ್ತಿಲ್ಲ. ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಮತಾಂತರ ಮಾಡುವ ಘಟನೆಗಳು ಹೆಚ್ಚುತ್ತಿವೆ. ಈ ಘಟನೆಗಳು ಮತಾಂತರ ಪ್ರಕರಣವೆಂದು ದಾಖಲಾಗುವುದಿಲ್ಲ.  ಈ ಗಂಭೀರ ಸಮಸ್ಯೆಗೆ ಪರಿಹಾರವಾಗಿ ರಾಜ್ಯದಲ್ಲಿ ಸಹ ಉತ್ತರ ಪ್ರದೇಶದ ಮಾದರಿಯಲ್ಲಿ ಮತಾಂತರ ನಿಷೇಧ ಕಾಯಿದೆಯನ್ನು ಕಠಿಣವಾಗಿ ಅನುಷ್ಠಾನ ಮಾಡಲು ವಿಶೇಷ ಲವ್ ಜಿಹಾದ್ ವಿರೋಧಿ ಪೊಲೀಸ್ ದಳ ವನ್ನು ಸ್ಥಾಪನೆ ಮಾಡಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಸೇರಿದಂತೆ  ಹಿಂದೂ ಸಂಘಟನೆಗಳು ಡಿ.11 ರಿಂದ 18 ರವರೆಗೆ  ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಆಂದೋಲನದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಗುತ್ತಿದೆ.

Advertisement
Advertisement

ಹೊನ್ನಾವರ ಮತ್ತು ಕುಮಟಾದ ಶಾಸಕರಾದ  ದಿನಕರ್ ಶೆಟ್ಟಿ ಇವರಿಗೆ ಮನವಿ ನೀಡುವ ಮೂಲಕ ಈ ಅಭಿಯಾನ ಆರಂಭವಾಗಿದೆ.

ಕರ್ನಾಟಕದಲ್ಲಿ 2019 ರವರೆಗೆ 21000 ಯುವತಿಯರು ನಾಪತ್ತೆಯಾಗಿದ್ದಾರೆ. ಈ ಎಲ್ಲ ಗಂಭೀರ ಘಟನೆಗಳನ್ನು ಗಮನಕ್ಕೆ ತಗೆದುಕೊಂಡು ಸರಕಾರವು ರಾಜ್ಯದಿಂದ ಮಹಿಳೆಯರು ಮತ್ತು ಹುಡುಗಿಯರ ನಾಪತ್ತೆಯ ಹಿಂದೆ ಏನಾದರೂ ಪಿತೂರಿ ಇದೆಯೇ ಅಥವಾ ಅದರ ಹಿಂದೆ ಯಾವುದಾದರೂ ಲವ್ ಜಿಹಾದ್’ ಇದೆಯೇ ಎಂದು ತನಿಖೆ ಮಾಡಲು ಗೃಹ ಕಚೇರಿ ಸ್ವತಂತ್ರ ತಂಡವನ್ನು ನೇಮಿಸಬೇಕು, ಲವ್ ಜಿಹಾದ್’ ಪ್ರಕರಣಗಳ ತನಿಖೆ ನಡೆಸಲು ಉತ್ತರ ಪ್ರದೇಶದ ಮಾದರಿಯಲ್ಲಿ ಪೊಲೀಸ್ ವಿಶೇಷ ಶಾಖೆಯನ್ನು ಸ್ಥಾಪಿಸಬೇಕು. ಇಂತಹ ಪ್ರಕರಣಗಳಲ್ಲಿ ‘ಲವ್ ಜಿಹಾದ್’ ಹೆಸರಿನಲ್ಲಿ ಅಪರಾಧಗಳನ್ನು ದಾಖಲಿಸಬೇಕು. ಎಂದು ಹಿಂದೂ ಜನಜಾಗೃತಿ ಸಮಿತಿಯ ಪ್ರಕಟಣೆಯಲ್ಲಿ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

5 hours ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

8 hours ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

17 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

1 day ago