Advertisement
ಸುದ್ದಿಗಳು

ಲವ್ ಜಿಹಾದ್ ವಿರೋಧಿ ಪೋಲಿಸ್ ದಳ ಸ್ಥಾಪನೆಗೆ ಒತ್ತಾಯ | ಡಿ.10 ರಿಂದ ರಾಜ್ಯವ್ಯಾಪಿ ಆಂದೋಲನ |

Share

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಲವ್ ಜಿಹಾದ್ ತಡೆಯಲು ಸಾದ್ಯವಾಗುತ್ತಿಲ್ಲ. ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಮತಾಂತರ ಮಾಡುವ ಘಟನೆಗಳು ಹೆಚ್ಚುತ್ತಿವೆ. ಈ ಘಟನೆಗಳು ಮತಾಂತರ ಪ್ರಕರಣವೆಂದು ದಾಖಲಾಗುವುದಿಲ್ಲ.  ಈ ಗಂಭೀರ ಸಮಸ್ಯೆಗೆ ಪರಿಹಾರವಾಗಿ ರಾಜ್ಯದಲ್ಲಿ ಸಹ ಉತ್ತರ ಪ್ರದೇಶದ ಮಾದರಿಯಲ್ಲಿ ಮತಾಂತರ ನಿಷೇಧ ಕಾಯಿದೆಯನ್ನು ಕಠಿಣವಾಗಿ ಅನುಷ್ಠಾನ ಮಾಡಲು ವಿಶೇಷ ಲವ್ ಜಿಹಾದ್ ವಿರೋಧಿ ಪೊಲೀಸ್ ದಳ ವನ್ನು ಸ್ಥಾಪನೆ ಮಾಡಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಸೇರಿದಂತೆ  ಹಿಂದೂ ಸಂಘಟನೆಗಳು ಡಿ.11 ರಿಂದ 18 ರವರೆಗೆ  ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಆಂದೋಲನದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಗುತ್ತಿದೆ.

ಹೊನ್ನಾವರ ಮತ್ತು ಕುಮಟಾದ ಶಾಸಕರಾದ  ದಿನಕರ್ ಶೆಟ್ಟಿ ಇವರಿಗೆ ಮನವಿ ನೀಡುವ ಮೂಲಕ ಈ ಅಭಿಯಾನ ಆರಂಭವಾಗಿದೆ.

ಕರ್ನಾಟಕದಲ್ಲಿ 2019 ರವರೆಗೆ 21000 ಯುವತಿಯರು ನಾಪತ್ತೆಯಾಗಿದ್ದಾರೆ. ಈ ಎಲ್ಲ ಗಂಭೀರ ಘಟನೆಗಳನ್ನು ಗಮನಕ್ಕೆ ತಗೆದುಕೊಂಡು ಸರಕಾರವು ರಾಜ್ಯದಿಂದ ಮಹಿಳೆಯರು ಮತ್ತು ಹುಡುಗಿಯರ ನಾಪತ್ತೆಯ ಹಿಂದೆ ಏನಾದರೂ ಪಿತೂರಿ ಇದೆಯೇ ಅಥವಾ ಅದರ ಹಿಂದೆ ಯಾವುದಾದರೂ ಲವ್ ಜಿಹಾದ್’ ಇದೆಯೇ ಎಂದು ತನಿಖೆ ಮಾಡಲು ಗೃಹ ಕಚೇರಿ ಸ್ವತಂತ್ರ ತಂಡವನ್ನು ನೇಮಿಸಬೇಕು, ಲವ್ ಜಿಹಾದ್’ ಪ್ರಕರಣಗಳ ತನಿಖೆ ನಡೆಸಲು ಉತ್ತರ ಪ್ರದೇಶದ ಮಾದರಿಯಲ್ಲಿ ಪೊಲೀಸ್ ವಿಶೇಷ ಶಾಖೆಯನ್ನು ಸ್ಥಾಪಿಸಬೇಕು. ಇಂತಹ ಪ್ರಕರಣಗಳಲ್ಲಿ ‘ಲವ್ ಜಿಹಾದ್’ ಹೆಸರಿನಲ್ಲಿ ಅಪರಾಧಗಳನ್ನು ದಾಖಲಿಸಬೇಕು. ಎಂದು ಹಿಂದೂ ಜನಜಾಗೃತಿ ಸಮಿತಿಯ ಪ್ರಕಟಣೆಯಲ್ಲಿ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

12 hours ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

14 hours ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

1 day ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

1 day ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

2 days ago