Advertisement
ಸುದ್ದಿಗಳು

ಮೀಸಲು ಅರಣ್ಯದಲ್ಲಿರುವ ಮಸೀದಿ ಕಟ್ಟಡ ತೆರವಿಗೆ ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ | ನ್ಯಾಯಾಲಯದ ಆದೇಶ ಪಾಲನೆಗೆ ಒತ್ತಾಯ |

Share

ಗೂನಡ್ಕದ ಮೀಸಲು ಅರಣ್ಯದಲ್ಲಿ ಅರಣ್ಯ ಒತ್ತುವರಿ ಮೂಲಕ ಮಸೀದಿ ಕಟ್ಟಡ ನಿರ್ಮಾಣ ಮಾಡಿರುವುದನ್ನು ತೆರವು  ಮಾಡಬೇಕೆಂಬ ನ್ಯಾಯಾಲಯದ ಆದೇಶ ಪಾಲನೆಯಾಗಿಲ್ಲ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಮೆರವಣಿಗೆ ಹಾಗೂ ಸುಳ್ಯ ಅರಣ್ಯಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಸಭೆಗೂ ಮುನ್ನ ಹಿಂಜಾವೇ ಕಾರ್ಯಕರ್ತರು ಮೆರವಣಿಗೆ ನಡೆಸಿದರು. ನಂತರ  ಅರಣ್ಯ ಇಲಾಖಾಯಲ್ಲಿ ಪ್ರತಭಟನಾ ಸಭೆ ನಡೆಸಿದರು.  2018 ರಲ್ಲಿ ಗೂನಡ್ಕ ರಕ್ಷಿತಾರಣ್ಯದಲ್ಲಿರುವ ಮಸೀದಿ ಕಟ್ಟಡ ತೆರವಿಗೆ ಆದೇಶವಾದರೂ ಇದುವರೆಗೂ ಅರಣ್ಯ ಇಲಾಖಾ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಇದೀಗ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆಯಾಗಿದೆ, ಇದಕ್ಕೆ ಕಾರಣ ಅರಣ್ಯ ಇಲಾಖೆ. ಇಲಾಖಾ ಅಧಿಕಾರಿಗಳು ಸೂಕ್ತ ದಾಖಲೆ ನೀಡದೇ ಇದ್ದುದು ಕಾರಣ ಎಂದು ಆರೋಪಿಸಿದರು. ಇದೀಗ ತಕ್ಷಣವೇ ಸೂಕ್ತ ಕ್ರಮವಾಗಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಹಿಂಜಾವೇ ಜಿಲ್ಲಾ ಕಾರ್ಯದರ್ಶಿ ನರಸಿಂಹ ಮಾಣಿ, ಭಜರಂಗದಳ ಪ್ರಾಂತ ಸಂಚಾಲಕ ಮುರಳಿಕೃಷ್ಣ ಹಸಂತಡ್ಕ, ಮಾತೃಸುರಕ್ಷಾ  ಮಂಡಳಿ ಸಂಚಾಲಕ ಗಣಪತಿ ಭಟ್‌ ಕೆದಿಲ,  ತಾಲೂಕು ಸಂಚಾಲಕ ಮಹೇಶ್‌ ಉಗ್ರಾಣಿಮನೆ, ಹಿಂಜಾವೇ  ಪ್ರಮುಖರಾದ ಅಜಿತ್‌ ರೈ ಹೊಸಮನೆ, ಸಂಘಟನಾ ಕಾರ್ಯದರ್ಶಿ ಚಿನ್ಮಯ್‌ ಈಶ್ವರಮಂಗಲ ಜಗದೀಶ್‌, ಲತೀಶ್‌ ಗುಂಡ್ಯ, ನಿಕೇತ್‌ ಉಬರಡ್ಕ ಮೊದಲಾದವರಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

7 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

8 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

8 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

16 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

1 day ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

1 day ago