Advertisement
ಸುದ್ದಿಗಳು

ಮೀಸಲು ಅರಣ್ಯದಲ್ಲಿರುವ ಮಸೀದಿ ಕಟ್ಟಡ ತೆರವಿಗೆ ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ | ನ್ಯಾಯಾಲಯದ ಆದೇಶ ಪಾಲನೆಗೆ ಒತ್ತಾಯ |

Share

ಗೂನಡ್ಕದ ಮೀಸಲು ಅರಣ್ಯದಲ್ಲಿ ಅರಣ್ಯ ಒತ್ತುವರಿ ಮೂಲಕ ಮಸೀದಿ ಕಟ್ಟಡ ನಿರ್ಮಾಣ ಮಾಡಿರುವುದನ್ನು ತೆರವು  ಮಾಡಬೇಕೆಂಬ ನ್ಯಾಯಾಲಯದ ಆದೇಶ ಪಾಲನೆಯಾಗಿಲ್ಲ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಮೆರವಣಿಗೆ ಹಾಗೂ ಸುಳ್ಯ ಅರಣ್ಯಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಸಭೆಗೂ ಮುನ್ನ ಹಿಂಜಾವೇ ಕಾರ್ಯಕರ್ತರು ಮೆರವಣಿಗೆ ನಡೆಸಿದರು. ನಂತರ  ಅರಣ್ಯ ಇಲಾಖಾಯಲ್ಲಿ ಪ್ರತಭಟನಾ ಸಭೆ ನಡೆಸಿದರು.  2018 ರಲ್ಲಿ ಗೂನಡ್ಕ ರಕ್ಷಿತಾರಣ್ಯದಲ್ಲಿರುವ ಮಸೀದಿ ಕಟ್ಟಡ ತೆರವಿಗೆ ಆದೇಶವಾದರೂ ಇದುವರೆಗೂ ಅರಣ್ಯ ಇಲಾಖಾ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಇದೀಗ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆಯಾಗಿದೆ, ಇದಕ್ಕೆ ಕಾರಣ ಅರಣ್ಯ ಇಲಾಖೆ. ಇಲಾಖಾ ಅಧಿಕಾರಿಗಳು ಸೂಕ್ತ ದಾಖಲೆ ನೀಡದೇ ಇದ್ದುದು ಕಾರಣ ಎಂದು ಆರೋಪಿಸಿದರು. ಇದೀಗ ತಕ್ಷಣವೇ ಸೂಕ್ತ ಕ್ರಮವಾಗಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಹಿಂಜಾವೇ ಜಿಲ್ಲಾ ಕಾರ್ಯದರ್ಶಿ ನರಸಿಂಹ ಮಾಣಿ, ಭಜರಂಗದಳ ಪ್ರಾಂತ ಸಂಚಾಲಕ ಮುರಳಿಕೃಷ್ಣ ಹಸಂತಡ್ಕ, ಮಾತೃಸುರಕ್ಷಾ  ಮಂಡಳಿ ಸಂಚಾಲಕ ಗಣಪತಿ ಭಟ್‌ ಕೆದಿಲ,  ತಾಲೂಕು ಸಂಚಾಲಕ ಮಹೇಶ್‌ ಉಗ್ರಾಣಿಮನೆ, ಹಿಂಜಾವೇ  ಪ್ರಮುಖರಾದ ಅಜಿತ್‌ ರೈ ಹೊಸಮನೆ, ಸಂಘಟನಾ ಕಾರ್ಯದರ್ಶಿ ಚಿನ್ಮಯ್‌ ಈಶ್ವರಮಂಗಲ ಜಗದೀಶ್‌, ಲತೀಶ್‌ ಗುಂಡ್ಯ, ನಿಕೇತ್‌ ಉಬರಡ್ಕ ಮೊದಲಾದವರಿದ್ದರು.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

6 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

10 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

18 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

18 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

19 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

1 day ago