Advertisement
ಸುದ್ದಿಗಳು

ಮೀಸಲು ಅರಣ್ಯದಲ್ಲಿರುವ ಮಸೀದಿ ಕಟ್ಟಡ ತೆರವಿಗೆ ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ | ನ್ಯಾಯಾಲಯದ ಆದೇಶ ಪಾಲನೆಗೆ ಒತ್ತಾಯ |

Share

ಗೂನಡ್ಕದ ಮೀಸಲು ಅರಣ್ಯದಲ್ಲಿ ಅರಣ್ಯ ಒತ್ತುವರಿ ಮೂಲಕ ಮಸೀದಿ ಕಟ್ಟಡ ನಿರ್ಮಾಣ ಮಾಡಿರುವುದನ್ನು ತೆರವು  ಮಾಡಬೇಕೆಂಬ ನ್ಯಾಯಾಲಯದ ಆದೇಶ ಪಾಲನೆಯಾಗಿಲ್ಲ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಮೆರವಣಿಗೆ ಹಾಗೂ ಸುಳ್ಯ ಅರಣ್ಯಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಸಭೆಗೂ ಮುನ್ನ ಹಿಂಜಾವೇ ಕಾರ್ಯಕರ್ತರು ಮೆರವಣಿಗೆ ನಡೆಸಿದರು. ನಂತರ  ಅರಣ್ಯ ಇಲಾಖಾಯಲ್ಲಿ ಪ್ರತಭಟನಾ ಸಭೆ ನಡೆಸಿದರು.  2018 ರಲ್ಲಿ ಗೂನಡ್ಕ ರಕ್ಷಿತಾರಣ್ಯದಲ್ಲಿರುವ ಮಸೀದಿ ಕಟ್ಟಡ ತೆರವಿಗೆ ಆದೇಶವಾದರೂ ಇದುವರೆಗೂ ಅರಣ್ಯ ಇಲಾಖಾ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಇದೀಗ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆಯಾಗಿದೆ, ಇದಕ್ಕೆ ಕಾರಣ ಅರಣ್ಯ ಇಲಾಖೆ. ಇಲಾಖಾ ಅಧಿಕಾರಿಗಳು ಸೂಕ್ತ ದಾಖಲೆ ನೀಡದೇ ಇದ್ದುದು ಕಾರಣ ಎಂದು ಆರೋಪಿಸಿದರು. ಇದೀಗ ತಕ್ಷಣವೇ ಸೂಕ್ತ ಕ್ರಮವಾಗಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಹಿಂಜಾವೇ ಜಿಲ್ಲಾ ಕಾರ್ಯದರ್ಶಿ ನರಸಿಂಹ ಮಾಣಿ, ಭಜರಂಗದಳ ಪ್ರಾಂತ ಸಂಚಾಲಕ ಮುರಳಿಕೃಷ್ಣ ಹಸಂತಡ್ಕ, ಮಾತೃಸುರಕ್ಷಾ  ಮಂಡಳಿ ಸಂಚಾಲಕ ಗಣಪತಿ ಭಟ್‌ ಕೆದಿಲ,  ತಾಲೂಕು ಸಂಚಾಲಕ ಮಹೇಶ್‌ ಉಗ್ರಾಣಿಮನೆ, ಹಿಂಜಾವೇ  ಪ್ರಮುಖರಾದ ಅಜಿತ್‌ ರೈ ಹೊಸಮನೆ, ಸಂಘಟನಾ ಕಾರ್ಯದರ್ಶಿ ಚಿನ್ಮಯ್‌ ಈಶ್ವರಮಂಗಲ ಜಗದೀಶ್‌, ಲತೀಶ್‌ ಗುಂಡ್ಯ, ನಿಕೇತ್‌ ಉಬರಡ್ಕ ಮೊದಲಾದವರಿದ್ದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

4 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

12 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

14 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

19 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

21 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago