Advertisement
ಸುದ್ದಿಗಳು

ಹಲಾಲ್ ಮೂಲಕ ವಿಶ್ವದ ಮೇಲೆ ಸಂಪೂರ್ಣ ನಿಯಂತ್ರಣ ಮಾಡುವ ಪ್ರಯತ್ನವಾಗಿದೆ | ಹಿಂದೂ ಜನಜಾಗೃತಿ ಸಮಿತಿಯ ರಮೇಶ್‌ ಶಿಂದೆ ಅಭಿಮತ |

Share

ಹಿಂದೂ ಜನಜಾಗೃತಿ ಸಮಿತಿಯು ದ್ವಿದಶಕ ಪೂರ್ಣಗೊಳಿಸಿದ ಸಂದರ್ಭದಲ್ಲಿ ಪುತ್ತೂರಿನ ಟೌನ್ ಬ್ಯಾಂಕ್ ಹಾಲ್ ನಲ್ಲಿ  “ಹಲಾಲ್ ವ್ಯಾಖ್ಯಾನ” ದ ಆಯೋಜನೆಯನ್ನು ಅಭಿನವ ಭಾರತ ಮಿತ್ರ ಮಂಡಳಿ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಪ್ರಮುಖ ವಕ್ತಾರರಾಗಿ ಧಾರ್ಮಿಕ ಉಪನ್ಯಾಸಕರಾದ  ಕೃಷ್ಣ ಉಪಾಧ್ಯಾಯ, ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ  ರಮೇಶ ಶಿಂದೆ ಮತ್ತು ಹಿಂದೂ ಜನಜಾಗೃತಿಯ ರಾಜ್ಯ ಸಮನ್ವಯಕಾರದ  ಗುರುಪ್ರಸಾದ್ ಗೌಡ ಉಪಸ್ಥಿತರಿದ್ದರು.

ಧಾರ್ಮಿಕ ಭಾಷಣ ಮಾಡಿದ ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ  ರಮೇಶ ಶಿಂದೆ,  ‘ಹಲಾಲ್’ ಕೇವಲ ಧರ್ಮಕ್ಕೆ ಸಂಬಂಧಿಸದೆ ಇಂದು ಇಸ್ಲಾಮಿ ಆರ್ಥಿಕ ವ್ಯವಸ್ಥೆಯಾಗುತ್ತಿದೆ. ಹಲಾಲ್ ಮೂಲಕ ವಿಶ್ವದ ಮೇಲೆ ಸಂಪೂರ್ಣ ನಿಯಂತ್ರಣ ಮಾಡುವ ಪ್ರಯತ್ನವಾಗಿದೆ. ಭಾರತದಲ್ಲಿ ಪರ್ಯಾಯ ಸಮಾನಾಂತರ ಅರ್ಥವ್ಯವಸ್ಥೆಯನ್ನು ನಿರ್ಮಾಣ ಮಾಡುವುದಾಗಿದೆ. ಮಾಂಸದಿಂದ ಪ್ರಾರಂಭವಾದ ಹಲಾಲ್ ಇಂದು ಔಷಧಿ, ಕಟ್ಟಡ, ಬಟ್ಟೆ, ಪ್ರವಾಸೊದ್ಯಮ, ಸ್ಟಾಕ್ ಮಾರ್ಕೆಟ್, ಹೀಗೆ ಎಲ್ಲ ಕ್ಷೇತ್ರವನ್ನು ವ್ಯಾಪಿಸಿ ವಿಶ್ವದ 2 ಯುಎಸ್ ಟ್ರಿಲಿಯನ್ ಡಾಲರ್ ಇಕಾನಮಿ ಆಗಿದೆ. ಭಾರತದಲ್ಲಿ 4 ಲಕ್ಷ ಕೋಟಿ ಮಾಂಸದ ವ್ಯಾಪಾರದ ಮೇಲೆ ನಿಯಂತ್ರಣ ಸಾಧಿಸಲಾಗಿದೆ. ಭಾರತದಲ್ಲಿ  FSSAI, FDA  ನಂತರ ಪ್ರಮಾಣಪತ್ರ ನೀಡುವ ಸರಕಾರಿ ಸಂಸ್ಥೆಗಳು ಇರುವಾಗ ಪ್ರತ್ಯೇಕ ಮತದ ಆಧಾರದ ಮೇಲೆ ಪ್ರಮಾಣಪತ್ರ ನೀಡಿ, ಹಣ ಸಂಗ್ರಹ ಮಾಡುವುದು ಅತ್ಯಂತ ಅಪಾಯಕಾರಿಯಾಗಿದೆ.ಇದರ ಹಣ ಭಯೋತ್ಪಾಧನಾ ಚಟುವಟಿಕೆಗಳಿಗೆ ಉಪಯೋಗ ಮಾಡಲಾಗುತ್ತಿದೆ. ಇದು ಹಿಂದೂಗಳ ಮೇಲೆ ಮಾಡಿದ ಜಿಜಿಯಾ ತಲೆದಂಡವಾಗಿದೆ ಎಂದರು.

ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಉಪಾಧ್ಯಾಯ, ಧಾರ್ಮಿಕ ಉಪನ್ಯಾಸಕ ನೀಡಿ ಕೆಲವು ಕಾರ್ಯಕ್ರಮದಲ್ಲಿ ಹಿಂದೂ ಭಾಂದವರು ಹಿಂದೂಗಳ ಅಂಗಡಿಯಿಂದ ವ್ಯಾಪಾರ ಮಾಡಬೇಕು ಎಂದು ಹೇಳುತ್ತಾರೆ ಆದರೆ ಹಿಂದೂಗಳ ಅಂಗಡಿಯಲ್ಲಿ ಹಲಾಲ್ ವಸ್ತುಗಳು ಸಿಗುತ್ತವೆ. ಹಾಗಾಗಿ ನಾವು ಹಿಂದೂಗಳು ಹಿಂದೂಗಳಿಗಾಗಿ ವ್ಯಾಪಾರದಲ್ಲಿ “ಹಲಾಲ್” ರಹಿತ ವಸ್ತುಗಳನ್ನು ಬಳಸಿಕೊಳ್ಳುವ ಮೂಲಕ ಪರ್ಯಾಯ ವ್ಯವಸ್ತೆಯನ್ನು ಮಾಡಿ ಹಲಾಲ್ ಅರ್ಥವ್ಯವಸ್ಥೆಯನ್ನು ಸಂಪೂರ್ಣವಾಗಿ ಬಹಿಷ್ಕರಿಸಬೇಕು ಎಂದು ಹೇಳಿದರು.

ಹಿಂದೂ ಜನ ಜಾಗೃತಿ ಸಮಿತಿಯ ರಾಜ್ಯ ಸಮನ್ವಯಕರಾದ  ಗುರುಪ್ರಸಾದ ಗೌಡ  ಮಾತನಾಡುತ್ತಾ ಈ ಸಲದ ದೀಪಾವಳಿಯನ್ನು ಹಲಾಲ್ ಮುಕ್ತವಾಗಿ ಆಚರಿಸೋಣ ಮತ್ತು ಇಡೀ ವಿಶ್ವದಲ್ಲಿ ಹಲಾಲ್ ಅರ್ಥವ್ಯವಸ್ಥೆಯನ್ನು ಬಹಿಷ್ಕರಿಸೋಣ ಎಂದು ಹೇಳಿದರು.

ಸಭೆಯಲ್ಲಿ ಮಾಜಿ ನಗರ ಸಭೆ ಅದ್ಯಕ್ಷರಾದ ರಾಜೇಶ್ ಬನ್ನೂರು, ಟೌನ್ ಬ್ಯಾಂಕ್ ನಿರ್ದೇಶಕರಾದ  ಚಂದ್ರಶೇಖರ್ ಬಪ್ಪಳಿಗೆ, ನಗರಸಭಾ ಅದ್ಯಕ್ಷರಾದ  ಜೀವಂದರ್ ಜೈನ್, ಅಂಬಿಕಾ ಕಾಲೇಜು ಸಂಚಾಲಕರಾದ  ಸುಬ್ರಹ್ಮಣ್ಯ ನಟ್ಟೋಜ,ಹಿಂದೂ ಜಾಗರಣ ವೇದಿಕೆ ಪ್ರಾಂತ್ಯ ಪ್ರಮುಖರಾದ ಚಿನ್ಮಯ , ಪುತ್ತಿಲ ಹಿಂದೂ ಮುಖಂಡರಾದ  ಅರುಣ್ ಕುಮಾರ್, ನಗರ ಸಭೆಯ ಉಪಾಧ್ಯಕ್ಷರಾದ ವಿದ್ಯಾಗೌರಿ ಪುತ್ತೂರು ಮತ್ತಿತರ ಗಣ್ಯರು ಭಾಗಿಯಾಗಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

4 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

4 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

13 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

14 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago