Advertisement
ಸುದ್ದಿಗಳು

ಮತಾಂತರ ನಿಷೇಧ ಕಾಯಿದೆ-ಲವ್ ಜಿಹಾದ್ ವಿರೋಧಿ ಪೋಲಿಸ್ ದಳವನ್ನು ಸ್ಥಾಪಿಸಿ | ಹಿಂದೂ ಜನಜಾಗೃತಿ ಸಮಿತಿ ಒತ್ತಾಯ |

Share

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಲವ್ ಜಿಹಾದ್ ತಡೆಯಲು ಸಾಧ್ಯವಾಗುತ್ತಿಲ್ಲ. ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಇಸ್ಲಾಮ್‌ಗೆ ಮತಾಂತರ ಮಾಡುವ ಘಟನೆಗಳು ಹೆಚ್ಚುತ್ತಿವೆ. ಆದರೆ ಈ ಘಟನೆಗಳು ಮತಾಂತರ ಪ್ರಕರಣವೆಂದು ದಾಖಲಾಗುವುದಿಲ್ಲ. ಈ ಗಂಭೀರ ಸಮಸ್ಯೆಗೆ ಪರಿಹಾರವಾಗಿ ರಾಜ್ಯದಲ್ಲಿ ಸಹ ಉತ್ತರ ಪ್ರದೇಶದ ಮಾದರಿಯಲ್ಲಿ ಮತಾಂತರ ನಿಷೇಧ ಕಾಯಿದೆಯನ್ನು ಕಠಿಣವಾಗಿ ಅನುಷ್ಠಾನ ಮಾಡಲು ವಿಶೇಷ ಲವ್ ಜಿಹಾದ್ ವಿರೋಧಿ ಪೊಲೀಸ್ ದಳ ವನ್ನು ಸ್ಥಾಪನೆ ಮಾಡಬೇಕೆಂದು ಆಗ್ರಹಿಸಿ  ಹಿಂದೂ ಜನಜಾಗೃತಿ ಸಮಿತಿ ಹಾಗೂ ಇತರ ಸಂಘಟನೆಗಳ ಮೂಲಕ ರಾಷ್ಟ್ರೀಯ ಹಿಂದೂ ಆಂದೋಲನ ವನ್ನು ಪುತ್ತೂರಿನ ಮಿನಿ ವಿಧಾನಸೌಧದ ಎದುರು ಅಮರ ಜ್ಯೋತಿ ಸರ್ಕಲ್ ನಲ್ಲಿ ನಡೆಸಲಾಯಿತು.

ಪುತ್ತೂರಿನ ಸಾಮಾಜಿಕ ಹೋರಾಟಗಾರ ಹಾಗೂ ಬಿಜೆಪಿಯ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಟದ ಸಂಚಾಲಕ ದಿನೇಶ್ ಜೈನ್ ಮಾತನಾಡುತ್ತಾ ಲವ್ ಜಿಹಾದ್ ಮೂಲಕ ಹಿಂದೂ ಹೆಣ್ಣು ಮಕ್ಕಳನ್ನು ಬಳಿ ಪಶು ಮಾಡಿ ಭಯೋತ್ಪಾದಕ ಚಟುವಟಿಕೆಗಳಿಗೆ ಉಪಯೋಗಿಸುವುದರ ಬಗ್ಗೆ ಅನೇಕ ನಿದರ್ಶನಗಳಿವೆ ಉದಾಹರಣೆ ದೀಪ್ತಿ ಮಾರ್ಲ ಮರಿಯಾಳಾಗಿ ಭಯೋತ್ಪಾದಕ ಚಟುವಟಿಕೆಗಳಿಗೆ ತೊಡಗಿಸುವುದರ ಬಗ್ಗೆ ಹಾಗೂ ಆಶಾ, ಆಯಿಷಾ ಳಾಗಿ ಬಿಹಾರದಲ್ಲಿ ಬಾಂಬು ಸ್ಪೋಟದಲ್ಲಿ ಬಾಗಿ ಯಾದುದರ ಬಗ್ಗೆ ವಿವರಿಸಿ ಹೇಳಿದರು. ಹಲಾಲ್ ಸರ್ಟಿ ಫೈಯಿ ಯಿಂದ ಬರುವ ಹಣ ದೇಶದ ಆರ್ಥಿಕ ವ್ಯವಸ್ಥೆಯನ್ನು ಹಾಳು ಮಾಡುವ ಪ್ರಯತ್ನ ಆಗುತ್ತಿದೆ ಇದರಿಂದ ಬರುವ ಹಣದಿಂದ ದೇಶದ ಭದ್ರತಾ ವ್ಯವಸ್ಥೆ ಹಾನಿಯಾಗುವುದರ ಬಗ್ಗೆ ವಿವರಿಸಿ ಹೇಳಿದರು.

ಹಿಂದೂ ಜನಜಾಗೃತಿ ಸಮಿತಿಯ  ದಾಮೋದರ್  ಮಾತನಾಡಿ, ದೆಹಲಿಯ ಜಿಹಾದಿ ಅಫ್ತಾಬ್ ಹಿಂದೂ ಯುವತಿ ಶ್ರದ್ಧಾ ವಾಲ್ಕರ್‌ಳನ್ನು ಲವ್ ಜಿಹಾದ್ ಪ್ರಕರಣದಲ್ಲಿ 35 ತುಂಡುಗಳಾಗಿ ಕತ್ತರಿಸಿದ ಘಟನೆಯ ನಂತರ ದೇಶಾದ್ಯಂತ ಲವ್ ಜಿಹಾದ್ ವಿರುದ್ಧ ತೀವ್ರ ಆಕ್ರೋಶದ ಅಲೆ ಹಬ್ಬಿದೆ. ಕರ್ನಾಟಕದಲ್ಲೂ ಸಹ ಲವ್ ಜಿಹಾದ್ ಘಟನೆಗಳು ಹೆಚ್ಚಾಗಿದೆ. ಎಲ್ಲಾ ಗಂಭೀರ ಘಟನೆಗಳನ್ನು ಗಮನಕ್ಕೆ ತಗೆದುಕೊಂಡು  ತನಿಖೆ ಮಾಡಲು ಗೃಹ ಕಚೇರಿ ಸ್ವತಂತ್ರ ತಂಡವನ್ನು ನೇಮಿಸಬೇಕು, ಲವ್ ಜಿಹಾದ್’ ಪ್ರಕರಣಗಳ ತನಿಖೆ ನಡೆಸಲು ಉತ್ತರ ಪ್ರದೇಶದ ಮಾದರಿಯಲ್ಲಿ ಪೊಲೀಸ್ ವಿಶೇಷ ಶಾಖೆಯನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

5 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

12 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

15 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

24 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

24 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago