Advertisement
ಸುದ್ದಿಗಳು

ಮತಾಂತರ ನಿಷೇಧ ಕಾಯಿದೆ-ಲವ್ ಜಿಹಾದ್ ವಿರೋಧಿ ಪೋಲಿಸ್ ದಳವನ್ನು ಸ್ಥಾಪಿಸಿ | ಹಿಂದೂ ಜನಜಾಗೃತಿ ಸಮಿತಿ ಒತ್ತಾಯ |

Share

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಲವ್ ಜಿಹಾದ್ ತಡೆಯಲು ಸಾಧ್ಯವಾಗುತ್ತಿಲ್ಲ. ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಇಸ್ಲಾಮ್‌ಗೆ ಮತಾಂತರ ಮಾಡುವ ಘಟನೆಗಳು ಹೆಚ್ಚುತ್ತಿವೆ. ಆದರೆ ಈ ಘಟನೆಗಳು ಮತಾಂತರ ಪ್ರಕರಣವೆಂದು ದಾಖಲಾಗುವುದಿಲ್ಲ. ಈ ಗಂಭೀರ ಸಮಸ್ಯೆಗೆ ಪರಿಹಾರವಾಗಿ ರಾಜ್ಯದಲ್ಲಿ ಸಹ ಉತ್ತರ ಪ್ರದೇಶದ ಮಾದರಿಯಲ್ಲಿ ಮತಾಂತರ ನಿಷೇಧ ಕಾಯಿದೆಯನ್ನು ಕಠಿಣವಾಗಿ ಅನುಷ್ಠಾನ ಮಾಡಲು ವಿಶೇಷ ಲವ್ ಜಿಹಾದ್ ವಿರೋಧಿ ಪೊಲೀಸ್ ದಳ ವನ್ನು ಸ್ಥಾಪನೆ ಮಾಡಬೇಕೆಂದು ಆಗ್ರಹಿಸಿ  ಹಿಂದೂ ಜನಜಾಗೃತಿ ಸಮಿತಿ ಹಾಗೂ ಇತರ ಸಂಘಟನೆಗಳ ಮೂಲಕ ರಾಷ್ಟ್ರೀಯ ಹಿಂದೂ ಆಂದೋಲನ ವನ್ನು ಪುತ್ತೂರಿನ ಮಿನಿ ವಿಧಾನಸೌಧದ ಎದುರು ಅಮರ ಜ್ಯೋತಿ ಸರ್ಕಲ್ ನಲ್ಲಿ ನಡೆಸಲಾಯಿತು.

ಪುತ್ತೂರಿನ ಸಾಮಾಜಿಕ ಹೋರಾಟಗಾರ ಹಾಗೂ ಬಿಜೆಪಿಯ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಟದ ಸಂಚಾಲಕ ದಿನೇಶ್ ಜೈನ್ ಮಾತನಾಡುತ್ತಾ ಲವ್ ಜಿಹಾದ್ ಮೂಲಕ ಹಿಂದೂ ಹೆಣ್ಣು ಮಕ್ಕಳನ್ನು ಬಳಿ ಪಶು ಮಾಡಿ ಭಯೋತ್ಪಾದಕ ಚಟುವಟಿಕೆಗಳಿಗೆ ಉಪಯೋಗಿಸುವುದರ ಬಗ್ಗೆ ಅನೇಕ ನಿದರ್ಶನಗಳಿವೆ ಉದಾಹರಣೆ ದೀಪ್ತಿ ಮಾರ್ಲ ಮರಿಯಾಳಾಗಿ ಭಯೋತ್ಪಾದಕ ಚಟುವಟಿಕೆಗಳಿಗೆ ತೊಡಗಿಸುವುದರ ಬಗ್ಗೆ ಹಾಗೂ ಆಶಾ, ಆಯಿಷಾ ಳಾಗಿ ಬಿಹಾರದಲ್ಲಿ ಬಾಂಬು ಸ್ಪೋಟದಲ್ಲಿ ಬಾಗಿ ಯಾದುದರ ಬಗ್ಗೆ ವಿವರಿಸಿ ಹೇಳಿದರು. ಹಲಾಲ್ ಸರ್ಟಿ ಫೈಯಿ ಯಿಂದ ಬರುವ ಹಣ ದೇಶದ ಆರ್ಥಿಕ ವ್ಯವಸ್ಥೆಯನ್ನು ಹಾಳು ಮಾಡುವ ಪ್ರಯತ್ನ ಆಗುತ್ತಿದೆ ಇದರಿಂದ ಬರುವ ಹಣದಿಂದ ದೇಶದ ಭದ್ರತಾ ವ್ಯವಸ್ಥೆ ಹಾನಿಯಾಗುವುದರ ಬಗ್ಗೆ ವಿವರಿಸಿ ಹೇಳಿದರು.

ಹಿಂದೂ ಜನಜಾಗೃತಿ ಸಮಿತಿಯ  ದಾಮೋದರ್  ಮಾತನಾಡಿ, ದೆಹಲಿಯ ಜಿಹಾದಿ ಅಫ್ತಾಬ್ ಹಿಂದೂ ಯುವತಿ ಶ್ರದ್ಧಾ ವಾಲ್ಕರ್‌ಳನ್ನು ಲವ್ ಜಿಹಾದ್ ಪ್ರಕರಣದಲ್ಲಿ 35 ತುಂಡುಗಳಾಗಿ ಕತ್ತರಿಸಿದ ಘಟನೆಯ ನಂತರ ದೇಶಾದ್ಯಂತ ಲವ್ ಜಿಹಾದ್ ವಿರುದ್ಧ ತೀವ್ರ ಆಕ್ರೋಶದ ಅಲೆ ಹಬ್ಬಿದೆ. ಕರ್ನಾಟಕದಲ್ಲೂ ಸಹ ಲವ್ ಜಿಹಾದ್ ಘಟನೆಗಳು ಹೆಚ್ಚಾಗಿದೆ. ಎಲ್ಲಾ ಗಂಭೀರ ಘಟನೆಗಳನ್ನು ಗಮನಕ್ಕೆ ತಗೆದುಕೊಂಡು  ತನಿಖೆ ಮಾಡಲು ಗೃಹ ಕಚೇರಿ ಸ್ವತಂತ್ರ ತಂಡವನ್ನು ನೇಮಿಸಬೇಕು, ಲವ್ ಜಿಹಾದ್’ ಪ್ರಕರಣಗಳ ತನಿಖೆ ನಡೆಸಲು ಉತ್ತರ ಪ್ರದೇಶದ ಮಾದರಿಯಲ್ಲಿ ಪೊಲೀಸ್ ವಿಶೇಷ ಶಾಖೆಯನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

15 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

17 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

17 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

1 day ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

1 day ago