ಈದ್ ಮಿಲಾದ್ ಆಚರಣೆ ನೆಪದಲ್ಲಿ ಶಿವಮೊಗ್ಗದ ಶಾಂತಿ ಕೆಡಿಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಹಿಂದೂ ಜನಜಾಗೃತಿ ಸಮಿತಿ ಒತ್ತಾಯ |

October 4, 2023
7:36 PM
ಈದ್ ಮಿಲಾದ್ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಕಳೆದ 3 ದಿನಗಳ ಹಿಂದೆ ನಡೆದ ಗಲಭೆಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ಒತ್ತಾಯಿಸಿದೆ.

ಈದ್ ಮಿಲಾದ್ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಕಳೆದ 3 ದಿನಗಳ ಹಿಂದೆ ನಡೆದ ಗಲಭೆಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ಒತ್ತಾಯಿಸಿದೆ.

ಮತಾಂಧರ ಅಟ್ಟಹಾಸಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಅನೇಕ ಬಡ ಜನರ ಆಸ್ತಿ ಪಾಸ್ತಿಗಳ ಮೇಲೆ ಅಪಾರ ಹಾನಿಯುಂಟಾಗಿದ್ದು ಅಲ್ಲಿನ ಜನರು 3 ದಿನಗಳಿಂದ ದುಃಖದಲ್ಲಿದ್ದಾರೆ, ಈ ಎಲ್ಲ ಘಟನೆಗಳಿಗೆ ಹೊಣೆ ಯಾರು ಎಂಬುದನ್ನು ಇಲ್ಲಿ ಗಮನಿಸಬೇಕಿದೆ. ಶಿವಮೊಗ್ಗದಲ್ಲಿ ಪ್ರತಿವರ್ಷವೂ ಈ ವೇಳೆ ಗಲಭೆಯುಂಟಾಗುವುದು ಮತ್ತು ಸಾರ್ವಜನಿಕರಿಗೆ ತೊಂದರೆಯುಂಟಾಗುವುದು ಜಾರಿಯಲ್ಲಿದ್ದು ಆಡಳಿತದ ಸಂಪೂರ್ಣ ದುರ್ಲಕ್ಷ್ಯ, ಮತಾಂಧರ ಓಲೈಕೆ ಮಾಡುವ ಪ್ರಯತ್ನವು ಕಾಣುತ್ತಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ಹೇಳಿದೆ.

ಘಟನೆಯ ಆರೋಪಿಗಳನ್ನು ಬಂಧಿಸುವುದಕ್ಕೆ ಮಾತ್ರ ಸೀಮಿತ ಮಾಡದೆ ಕೂಡಲೇ ಸರಕಾರವು ಈ ಘಟನೆಯನ್ನು ಎಸ್ಐಟಿ ತನಿಖೆಗೆ ಒಳಪಡಿಸಿ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟು ಮಾಡಿದ ಮತಾಂಧರ ಮನೆಗಳನ್ನು ಮುಟ್ಟುಗೋಲು ಮಾಡಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ಆಗ್ರಹಿಸುತ್ತದೆ ಎಂದು ಸಮಿತಿ ರಾಜ್ಯ ವಕ್ತಾರ ಮೋಹನ ಗೌಡ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ
March 7, 2026
3:02 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror